Menu

ದೇಗುಲಕ್ಕೆ ತೆರಳುತ್ತಿದ್ದ ಸ್ನೇಹಿತರಿಬ್ಬರು ಕೋಲಾರದಲ್ಲಿ ಅಪಘಾತಕ್ಕೆ ಬಲಿ

ಕೋಲಾರದ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ಗೇಟ್‌ ಬಳಿ ಕ್ಯಾಂಟರ್ ವಾಹನ ಹಾಗೂ ಬೈಕ್‌ ಡಿಕ್ಕಿಯಾಗಿ ದೇವಾಲಯಕ್ಕೆ ತೆರಳುತ್ತಿದ್ದ ಸ್ನೇಹಿತರಿಬ್ಬರು ಸ್ಥಳದಲ್ಲೇ ಅಸು ನೀಗಿದ್ದಾರೆ. ಚಿಂತಾಮಣಿ ತಿಮ್ಮಸಂದ್ರದ ಶಶಿ (25), ಬೆಂಗಳೂರು ನೆಲಮಂಗಲದ ತನುಷ್ (25) ಮೃತಪಟ್ಟವರು. ಕಾಣಿಪಾಕಂ ದೇವಾಲಯಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸ್ನೇಹಿತನ ಕೊಲೆಗೈದಾತ ಮೂರು ತಿಂಗಳ ಬಳಿಕ ಅರೆಸ್ಟ್‌ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಬಳಿ ನಡೆದಿದ್ದ ಹಿಟ್‌ ಅಂಡ್‌ ರನ್‌ ಪ್ರಕರಣದ ತನಿಖೆ ನಡೆಸಿದ ಪೊಲೀಸರು

ಬಾಗೇಪಲ್ಲಿಯಲ್ಲಿ ಅಕ್ರಮ ವಾಸವಿರುವ ಪಾಕ್‌ ಮಹಿಳೆ, ಮಗ ಅರೆಸ್ಟ್‌

ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದಾಸಗಾರೆಪಲ್ಲಿ ಗ್ರಾಮದಲ್ಲಿ ಅಕ್ರಮವಾಗಿ ವಾಸವಿರುವ ಪಾಕಿಸ್ತಾನದ ಮಹಿಳೆ ಫರ್ಹಾನಾಜ್ ಮತ್ತು ಮಗ ಮೊಹಮ್ಮದ್ ಫರ್ದೀನ್ ಖಾನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ವೀಸಾ ಅವಧಿ ಮುಗಿದ ಬಳಿಕವೂ ಭಾರತದಲ್ಲೇ ಅಕ್ರಮವಾಗಿ ನೆಲೆಸಿದ್ದ ಆರೋಪದಡಿ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ

ಚಿಂತಾಮಣಿಯಲ್ಲಿ ಪತ್ನಿ, ನಾದಿನಿಯ ಕೊಲೆಗೈದು ವ್ಯಕ್ತಿ ಪರಾರಿ

ಪತ್ನಿ ಮತ್ತು ಆಕೆಯ ತಂಗಿಯನ್ನು ಕೊಲೆ ಮಾಡಿ ವ್ಯಕ್ತಿಯಿ ಮೂವರು ಮಕ್ಕಳೊಂದಿಗೆ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಚಿಂತಾಮಣಿ ನಗರದ ಜೆಜೆ ಕಾಲೊನಿಯಲ್ಲಿ ನಡೆದಿದೆ.  25 ವರ್ಷದ ಶಮಾ ಮತ್ತು 21 ವರ್ಷದ ರೇಷ್ಮಾ ಕೊಲೆಯಾದ ಅಕ್ಕ-ತಂಗಿ. ಚಿಂತಾಮಣಿ ನಗರ ಠಾಣೆ ಪೊಲೀಸರು

ಮಾಲೂರಿನಲ್ಲಿ ಪ್ರೀತಿಸಿ ಮದುವೆಯಾದ ಪತ್ನಿಯ ಕೊಂದಾತನ ಬಂಧನ

ಎರಡು ವರ್ಷದ ಪ್ರೀತಿ ಬಳಿಕ ಮದುವೆಯಾಗಿದ್ದ ವ್ಯಕ್ತಿ ಪತ್ನಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಪ್ರಕರಣ ಮಾಲೂರು ತಾಲೂಕಿನ ಮಿಂಡಹಳ್ಳಿ ಕೆರೆ ಬಳಿ ನಡೆದಿದೆ. ಚಿಂತಾಮಣಿಯ ಯೋಗಿನಿ (21) ಕೊಲೆಯಾದ ಮಹಿಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆವಲಹಳ್ಳಿಯ ಗಣೇಶ್ ಕೊಲೆ ಆರೋಪಿ.

ಕೋಲಾರದಲ್ಲಿ ಸ್ನೇಹಿತರ ಜೊತೆ ಈಜಲೆಂದು ಹೋದ ಬಾಲಕ ನೀರುಪಾಲು

ಕೋಲಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಪಾಸ್​ ಆದ ಖುಷಿಯಲ್ಲಿದ್ದ ಬಾಲಕ ಈಜಲು ಹೋಗಿ ನೀರಲ್ಲಿ ಮುಳುಗಿ ಮೃತಪಟ್ಟಿದಾನೆ. ಕಿರಣ್(15) ಮೃತ ಬಾಲಕ. ಎಸ್ಸೆಸ್ಸೆಲ್ಸಿ ಫಲಿತಾಂಶ ಬಂದ ಬಳಿಕ ಸ್ನೇಹಿತರ ಜೊತೆ ಈಜಲು ತೆರಳಿದ್ದಾಗ ಈ ದುರಂತ ಸಂಭವಿಸಿದೆ. ರಘುಪತಿ ಎಂಬವರ ಪುತ್ರನಾದ ಕಿರಣ್

ಮುಳಬಾಗಿಲಿನಲ್ಲಿ ಮನೆ ಕುಸಿದು ಬಾಲಕಿ ಸಾವು

ಹಳೆಯ ಮನೆ ಕುಸಿದು ಬಿದ್ದು ಬಾಲಕಿ ಮೃತಪಟ್ಟಿರುವ ಘಟನೆ ಕೋಲಾರದ ಮುಳಬಾಗಿಲು ನಗರದಲ್ಲಿ ನಡೆದಿದೆ. ಈ ದುರಂತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಬಾಲಕಿಯನ್ನು ವಹಿನೂರ್ (15) ಎಂದು ಗುರುತಿಸಲಾಗಿದೆ. ಸುಹೇಲ್, ಕೌಸರ್, ಅಯಾಜ್ ಮತ್ತು ಅಬ್ಜರ್ ಗಾಯಗೊಂಡವರು. ಗಾಯಾಳುಗಳನ್ನು ಕೋಲಾರದ

“ಶ್ರೇಷ್ಠತೆಯ ವ್ಯಸನಕ್ಕೆ ಅನುಭಾವದ ಮದ್ದು ಅರೆದವರು ಕೈವಾರ ತಾತಯ್ಯ”

ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ,  ಅಧ್ಯಾತ್ಮ  ಅಂದರೆ ಚರ್ಮಶುದ್ಧಿ ಅಲ್ಲ,  ಅಂತರಂಗದ ಶುದ್ದಿ ಎಂದು ಬದುಕಿ‌ ತೋರಿಸಿದವರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಕೈವಾರ ತಾತಯ್ಯ ಅವರ 300ನೇ

ಕೆವೈ ನಂಜೇಗೌಡರೇ ಮಾಲೂರು ಶಾಸಕ: ಸುಪ್ರೀಂಕೋರ್ಟ್

ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರುಎಣಿಕೆಯಲ್ಲಿ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರಿಗೆ ಹೆಚ್ಚು ಮತಗಳು ಬಂದಿವೆ. ನಂಜೇಗೌಡಗೆ 50,957 ಮತಗಳು ಬಂದಿದ್ದರೆ, ಬಿಜೆಪಿ ಅಭ್ಯರ್ಥಿಯಾಗಿದ್ದ ಮಂಜುನಾಥಗೌಡಗೆ 50,707 ಮತಗಳು ಬಂದಿವೆ. ಹೀಗಾಗಿ ನಂಜೇಗೌಡ ಅವರೇ ಮಾಲೂರು ಕ್ಷೇತ್ರದ ಶಾಸಕರಾಗಿ ಮುಂದುವರಿಯುತ್ತಾರೆ

ಅಗಲಕೋಟೆಯಲ್ಲಿ ದಾನದ ಜಮೀನು ಗುಳುಂ ಮಾಡಿದ ಕಂಪೆನಿಗಳು: ಕ್ರಮ್ಕಕೆ  ಸಂಸದ ಸುಧಾಕರ್‌ ಆಗ್ರಹ

ಮಾಲೂರು ತಾಲೂಕಿನ ಅಗಲಕೋಟೆ ಗ್ರಾಮದಲ್ಲಿ ಸರ್ಕಾರಿ ಶಾಲೆಗಾಗಿ ದಾನ ಮಾಡಿದ್ದ 50 ಎಕರೆ ಜಮೀನನ್ನು ಎರಡು ಕಂಪನಿಗಳು ಲೂಟಿ ಮಾಡಿದ್ದು, ಇದರ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಕ್ರಮ ವಹಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್‌ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ದುರಾಡಳಿತ

ನಮ್ಮದು ಶ್ರೇಷ್ಠ ಸಂವಿಧಾನ ಆಗಿದ್ದರೂ ಪಾಲಿಸದಿದ್ದರೆ ನಿರರ್ಥಕ: ಸಚಿವ ಬೈರತಿ ಸುರೇಶ್

ಕೋಲಾರ: ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ ಅದನ್ನು ಅನುಸರಿಸುವವರು ಸರಿಯಿಲ್ಲದಿದ್ದರೆ, ಅದು ನಿರರ್ಥಕವಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅಭಿಪ್ರಾಯಪಟ್ಟಿದ್ದಾರೆ. ಕೋಲಾರದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ 77