ಕೋಲಾರ
ಆಸ್ತಿ ಜಗಳ: ಕೋಲಾರದಲ್ಲಿ ಪತಿಯ ಕೊಲೆಗೈದ ಪತ್ನಿ
ಕೋಲಾರದ ಚೆನ್ನಸಂದ್ರ ಗ್ರಾಮದಲ್ಲಿ ಪತ್ನಿಯು ಪತಿಗೆ ನಿದ್ರೆ ಮಾತ್ರೆ ತಿನ್ನಿಸಿದ ಬಳಿಕ ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಘಟನೆ ನಡೆದಿದೆ. ನಾರಾಯಣಸ್ವಾಮಿ (68) ಕೊಲೆಯಾದ ವ್ಯಕ್ತಿ, ಪತ್ನಿ ಜಗದಾಂಭ (58) ಕೊಲೆ ಮಾಡಿದಾಕೆ. ಇವರಿಬ್ಬರು ಪ್ರತ್ಯೇಕವಾಗಿಯೇ ವಾಸಿಸುತ್ತಿದ್ದರು. ಹೇಗೋ ಪುಸಲಾಯಿಸಿ ಪತ್ನಿ ಪತಿಯನ್ನು ತೋಟದ ಮನೆಗೆ ಕರೆತಂದಿದ್ದು, ಊಟದಲ್ಲಿ 10 ನಿದ್ರೆ ಮಾತ್ರೆ ಹಾಕಿ ಕೊಟ್ಟಿದ್ದಳು. ಆತ ಮಲಗಿದ ನಂತರ ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಕೊಲೆ
ದೇಗುಲಕ್ಕೆ ತೆರಳುತ್ತಿದ್ದ ಸ್ನೇಹಿತರಿಬ್ಬರು ಕೋಲಾರದಲ್ಲಿ ಅಪಘಾತಕ್ಕೆ ಬಲಿ
ಕೋಲಾರದ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ಗೇಟ್ ಬಳಿ ಕ್ಯಾಂಟರ್ ವಾಹನ ಹಾಗೂ ಬೈಕ್ ಡಿಕ್ಕಿಯಾಗಿ ದೇವಾಲಯಕ್ಕೆ ತೆರಳುತ್ತಿದ್ದ ಸ್ನೇಹಿತರಿಬ್ಬರು ಸ್ಥಳದಲ್ಲೇ ಅಸು ನೀಗಿದ್ದಾರೆ. ಚಿಂತಾಮಣಿ ತಿಮ್ಮಸಂದ್ರದ ಶಶಿ (25), ಬೆಂಗಳೂರು ನೆಲಮಂಗಲದ ತನುಷ್ (25) ಮೃತಪಟ್ಟವರು. ಕಾಣಿಪಾಕಂ ದೇವಾಲಯಕ್ಕೆ ತೆರಳುತ್ತಿದ್ದಾಗ ಈ
ಬಾಗೇಪಲ್ಲಿಯಲ್ಲಿ ಅಕ್ರಮ ವಾಸವಿರುವ ಪಾಕ್ ಮಹಿಳೆ, ಮಗ ಅರೆಸ್ಟ್
ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದಾಸಗಾರೆಪಲ್ಲಿ ಗ್ರಾಮದಲ್ಲಿ ಅಕ್ರಮವಾಗಿ ವಾಸವಿರುವ ಪಾಕಿಸ್ತಾನದ ಮಹಿಳೆ ಫರ್ಹಾನಾಜ್ ಮತ್ತು ಮಗ ಮೊಹಮ್ಮದ್ ಫರ್ದೀನ್ ಖಾನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ವೀಸಾ ಅವಧಿ ಮುಗಿದ ಬಳಿಕವೂ ಭಾರತದಲ್ಲೇ ಅಕ್ರಮವಾಗಿ ನೆಲೆಸಿದ್ದ ಆರೋಪದಡಿ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ
ಚಿಂತಾಮಣಿಯಲ್ಲಿ ಪತ್ನಿ, ನಾದಿನಿಯ ಕೊಲೆಗೈದು ವ್ಯಕ್ತಿ ಪರಾರಿ
ಪತ್ನಿ ಮತ್ತು ಆಕೆಯ ತಂಗಿಯನ್ನು ಕೊಲೆ ಮಾಡಿ ವ್ಯಕ್ತಿಯಿ ಮೂವರು ಮಕ್ಕಳೊಂದಿಗೆ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಚಿಂತಾಮಣಿ ನಗರದ ಜೆಜೆ ಕಾಲೊನಿಯಲ್ಲಿ ನಡೆದಿದೆ. 25 ವರ್ಷದ ಶಮಾ ಮತ್ತು 21 ವರ್ಷದ ರೇಷ್ಮಾ ಕೊಲೆಯಾದ ಅಕ್ಕ-ತಂಗಿ. ಚಿಂತಾಮಣಿ ನಗರ ಠಾಣೆ ಪೊಲೀಸರು
ಮಾಲೂರಿನಲ್ಲಿ ಪ್ರೀತಿಸಿ ಮದುವೆಯಾದ ಪತ್ನಿಯ ಕೊಂದಾತನ ಬಂಧನ
ಎರಡು ವರ್ಷದ ಪ್ರೀತಿ ಬಳಿಕ ಮದುವೆಯಾಗಿದ್ದ ವ್ಯಕ್ತಿ ಪತ್ನಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಪ್ರಕರಣ ಮಾಲೂರು ತಾಲೂಕಿನ ಮಿಂಡಹಳ್ಳಿ ಕೆರೆ ಬಳಿ ನಡೆದಿದೆ. ಚಿಂತಾಮಣಿಯ ಯೋಗಿನಿ (21) ಕೊಲೆಯಾದ ಮಹಿಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆವಲಹಳ್ಳಿಯ ಗಣೇಶ್ ಕೊಲೆ ಆರೋಪಿ.
ಕೋಲಾರದಲ್ಲಿ ಸ್ನೇಹಿತರ ಜೊತೆ ಈಜಲೆಂದು ಹೋದ ಬಾಲಕ ನೀರುಪಾಲು
ಕೋಲಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಪಾಸ್ ಆದ ಖುಷಿಯಲ್ಲಿದ್ದ ಬಾಲಕ ಈಜಲು ಹೋಗಿ ನೀರಲ್ಲಿ ಮುಳುಗಿ ಮೃತಪಟ್ಟಿದಾನೆ. ಕಿರಣ್(15) ಮೃತ ಬಾಲಕ. ಎಸ್ಸೆಸ್ಸೆಲ್ಸಿ ಫಲಿತಾಂಶ ಬಂದ ಬಳಿಕ ಸ್ನೇಹಿತರ ಜೊತೆ ಈಜಲು ತೆರಳಿದ್ದಾಗ ಈ ದುರಂತ ಸಂಭವಿಸಿದೆ. ರಘುಪತಿ ಎಂಬವರ ಪುತ್ರನಾದ ಕಿರಣ್
ಮುಳಬಾಗಿಲಿನಲ್ಲಿ ಮನೆ ಕುಸಿದು ಬಾಲಕಿ ಸಾವು
ಹಳೆಯ ಮನೆ ಕುಸಿದು ಬಿದ್ದು ಬಾಲಕಿ ಮೃತಪಟ್ಟಿರುವ ಘಟನೆ ಕೋಲಾರದ ಮುಳಬಾಗಿಲು ನಗರದಲ್ಲಿ ನಡೆದಿದೆ. ಈ ದುರಂತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಬಾಲಕಿಯನ್ನು ವಹಿನೂರ್ (15) ಎಂದು ಗುರುತಿಸಲಾಗಿದೆ. ಸುಹೇಲ್, ಕೌಸರ್, ಅಯಾಜ್ ಮತ್ತು ಅಬ್ಜರ್ ಗಾಯಗೊಂಡವರು. ಗಾಯಾಳುಗಳನ್ನು ಕೋಲಾರದ
“ಶ್ರೇಷ್ಠತೆಯ ವ್ಯಸನಕ್ಕೆ ಅನುಭಾವದ ಮದ್ದು ಅರೆದವರು ಕೈವಾರ ತಾತಯ್ಯ”
ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ, ಅಧ್ಯಾತ್ಮ ಅಂದರೆ ಚರ್ಮಶುದ್ಧಿ ಅಲ್ಲ, ಅಂತರಂಗದ ಶುದ್ದಿ ಎಂದು ಬದುಕಿ ತೋರಿಸಿದವರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಕೈವಾರ ತಾತಯ್ಯ ಅವರ 300ನೇ
ಕೆವೈ ನಂಜೇಗೌಡರೇ ಮಾಲೂರು ಶಾಸಕ: ಸುಪ್ರೀಂಕೋರ್ಟ್
ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರುಎಣಿಕೆಯಲ್ಲಿ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರಿಗೆ ಹೆಚ್ಚು ಮತಗಳು ಬಂದಿವೆ. ನಂಜೇಗೌಡಗೆ 50,957 ಮತಗಳು ಬಂದಿದ್ದರೆ, ಬಿಜೆಪಿ ಅಭ್ಯರ್ಥಿಯಾಗಿದ್ದ ಮಂಜುನಾಥಗೌಡಗೆ 50,707 ಮತಗಳು ಬಂದಿವೆ. ಹೀಗಾಗಿ ನಂಜೇಗೌಡ ಅವರೇ ಮಾಲೂರು ಕ್ಷೇತ್ರದ ಶಾಸಕರಾಗಿ ಮುಂದುವರಿಯುತ್ತಾರೆ
ಅಗಲಕೋಟೆಯಲ್ಲಿ ದಾನದ ಜಮೀನು ಗುಳುಂ ಮಾಡಿದ ಕಂಪೆನಿಗಳು: ಕ್ರಮ್ಕಕೆ ಸಂಸದ ಸುಧಾಕರ್ ಆಗ್ರಹ
ಮಾಲೂರು ತಾಲೂಕಿನ ಅಗಲಕೋಟೆ ಗ್ರಾಮದಲ್ಲಿ ಸರ್ಕಾರಿ ಶಾಲೆಗಾಗಿ ದಾನ ಮಾಡಿದ್ದ 50 ಎಕರೆ ಜಮೀನನ್ನು ಎರಡು ಕಂಪನಿಗಳು ಲೂಟಿ ಮಾಡಿದ್ದು, ಇದರ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಕ್ರಮ ವಹಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನ ದುರಾಡಳಿತ




