Menu

ರಾಜ್ಯದ ಹಲವೆಡೆ ಮುಂದುವರಿದಿದೆ ಧಾರಾಕಾರ ಮಳೆ

ರಾಜ್ಯದ ಹಲವೆಡೆ ಭಾರಿ ಮಳೆ ಮುಂದುವರಿದಿದೆ, ಮಲೆನಾಡಿನ ಕೆರೆಕಟ್ಟೆ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಒಂದೇ ರಾತ್ರಿಗೆ ತುಂಗಾ ನದಿ ನೀರಿನ ಮಟ್ಟದಲ್ಲಿ ತೀವ್ರ ಏರಿಕೆಯಾಗಿದೆ. ಶೃಂಗೇರಿಯ ಗಾಂಧಿಮೈದಾನದ ರಸ್ತೆಯಲ್ಲಿ ನೀರು ತುಂಬಿದ್ದು, ಪೊಲೀಸರು ರಸ್ತೆ ಬಂದ್‌ಗೊಳಿಸಿ ಬ್ಯಾರಿಕೇಡ್‌ ಹಾಕಿದ್ದಾರೆ. ಶಿವಮೊಗ್ಗದ ಸಾಗರ ತಾಲೂಕಿನಲ್ಲಿ ಮಳೆ ತೀವ್ರಗೊಂಡಿದ್ದು, ಶಾಲಾ- ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ತೀರ್ಥಹಳ್ಳಿ, ಹೊಸನಗರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಿನಲ್ಲಿ ಶಾಲೆ-ಕಾಲೇಜಿಗೆ ರಜೆ

ಕೊಡಗು ಮಳೆಹಾನಿ ಕುರಿತು ವರದಿಗೆ ಸಚಿವ ಎನ್.ಎಸ್.ಬೋಸರಾಜು ಸೂಚನೆ

ಕೊಡಗು: ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು, ಈ ವರದಿ ಆಧಾರ ಮೇಲೆ ಜುಲೈ 2ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿಯೂ ಆಗಿರುವ

ಕೊಡಗು ಹಾಸ್ಟೆಲ್‌ನಲ್ಲಿ ರಾಯಚೂರು ವಿದ್ಯಾರ್ಥಿನಿ ಆತ್ಮಹತ್ಯೆ

ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿರುವ ಹಾಸ್ಟೆಲ್‌ನಲ್ಲಿ ರಾಯಚೂರು ಮೂಲದ ವಿದ್ಯಾರ್ಥಿನಿಯೊಬ್ಬಳು ಡೆತ್‌ ನೋಟ್‌ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತೇಜಸ್ವಿನಿ, ರಾಯಚೂರಿನ ಮಹಾಂತಪ್ಪ ಎಂಬವರ ಏಕೈಕ ಪುತ್ರಿ ಪ್ರಥಮ ವರ್ಷದ ಎ.ಐ.ಎಂ.ಎಲ್ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್) ಕೋರ್ಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಳು ಶೈಕ್ಷಣಿಕ

ರಾಜ್ಯದ ಕರಾವಳಿ, ಮಲೆನಾಡುಗಳನ್ನು ಹೈರಾಣಾಗಿಸಿದ ಮಳೆ

ಮುಂಗಾರು ಮಳೆಯ ಅಬ್ಬರಕ್ಕೆ ರಾಜ್ಯ ನಲುಗಿಹೋಗಿದೆ. ಕರಾವಳಿಯಲ್ಲಿ  ಸುರಿಯುತ್ತಿರುವ ಗಾಳಿ ಸಹಿತ ಭಾರಿ ಮಳೆ ಅವಾಂತರಗಳನ್ನು ಸೃಷ್ಟಿಸಿದೆ. ಪುತ್ತೂರು ತಾಲೂಕಿನ ಕಡಬದಲ್ಲಿ ಬೃಹತ್ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ 6 ಮಂದಿ ಅದೃಷ್ಟವಷಾತ್‌ ಪಾರಾಗಿದ್ದಾರೆ.

ರಜೆಯಲ್ಲಿ ಬಂದಿದ್ದ ಯೋಧ ಕೊಡಗಿನಲ್ಲಿ ಅಪಘಾತಕ್ಕೆ ಬಲಿ

ರಜೆಯಲ್ಲಿ ತವರು ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ಚೆನ್ನಂಗೊಲ್ಲಿ ಪೊನ್ನಪ್ಪಸಂತೆಗೆ ಬಂದಿದ್ದ ಯೋಧ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಪೊನ್ನಪ್ಪಸಂತೆಯ ಬಿದ್ದಮಾಡ ಬಿಪಿನ್ ಭೀಮಯ್ಯ (36) ಮೃತ ಯೋಧ. ರಜೆಯಲ್ಲಿ ಮನೆಗೆ ಬಂದಿದ್ದ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಸ್ಥಳದಲ್ಲೇ ಅಸು ನೀಗಿದ್ದಾರೆ.  ಮದುವೆ

ಅಕ್ರಮ ಸಂಬಂಧದಿಂದ ಮಗು: ಬೆಂಗಳೂರಿನ ಆಟೊದಲ್ಲಿ ಮಲಗಿಸಿ ಜೋಡಿ ಪರಾರಿ

ಕಾನೂನು ಬಾಹಿರವಾದ ಸಂಬಂಧದಿಂದ ಜನಿಸಿದ 15 ದಿನಗಳ ಹೆಣ್ಣು ಮಗುವನ್ನು ರಸ್ತೆ ಬದಿಯ ಆಟೋದಲ್ಲಿ ಮಲಗಿಸಿ ಪರಾರಿಯಾಗಿದ್ದ ಜೋಡಿಯನ್ನು ಬ್ಯಾಟರಾಯನಪುರ ಠಾಣೆಯ ಪೊಲೀಸರು ಪತ್ತೆ ಹಚ್ಚಿ, ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಕೆಲವು ದಿನಗಳ ಹಿಂದೆ ಬೆಳಿಗ್ಗೆ ಎಂಟಿಟಿಸಿ ಕ್ಯಾಟ್ರಸ್ ಹತ್ತಿರ  ರಸ್ತೆ ಬದಿಯಲ್ಲಿ

ತೆನ್ನೀರ ಮಹಿನ ನನ್ನ ಸಾವಿಗೆ ನೇರ ಹೊಣೆ: ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತನ ಡೆತ್‌ನೋಟ್‌

ಬೆಂಗಳೂರಿನ ನಾಗವಾರದ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಡಿಕೇರಿಯ ಬಿಜೆಪಿ ಕಾರ್ಯಕರ್ತನ ಡೆತ್‌ ನೋಟ್‌ನಲ್ಲಿ, ರಾಜಕೀಯ ದ್ವೇಷಕ್ಕೆ ನಮ್ಮ ಜೀವನದ ಜೊತೆ ಆಟ ಆಡಿದ ತೆನ್ನೀರ ಮಹೀನ  Tenneera Maheena (9449156215) ನನ್ನ ಸಾವಿಗೆ ನೇರ ಹೊಣೆ ಎಂದು ಬರೆದಿರುವುದು ಪತ್ತೆ ಯಾಗಿದೆ.

ನಾಗವಾರದ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಬೆಂಗಳೂರಿನ ನಾಗವಾರದಲ್ಲಿ ಮಡಿಕೇರಿಯ ಬಿಜೆಪಿ ಕಾರ್ಯಕರ್ತರೊಬ್ಬರು ಕಚೇರಿಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ. ತನ್ನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದಕ್ಕೆ ಮನನೊಂದು ನಾಗವಾರದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಮೊದಲುಸಾಮಾಜಿಕ ಜಾಲತಾಣಗಳಲ್ಲಿ ಡೆತ್

ಚಿಕ್ಕಮಗಳೂರಿನಲ್ಲಿ ಸ್ವಿಮ್ಮಿಂಗ್‌ ಪೂಲ್‌ಗೆ ಧುಮುಕುವಾಗ ಬೆನ್ನುಮೂಳೆ ಘಾಸಿಯಾಗಿ ಯುವಕ ಸಾವು

ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ಗೆ ಧುಮುಕುವ ವೇಳೆ ಬೆನ್ನುಮೂಳೆಗೆ ಘಾಸಿಯಾಗಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಕೊಡಗಿನ ಕುಶಾಲನಗರದಮೊಬೈಲ್ ಶಾಪ್ ಮಾಲೀಕ ನಿಶಾಂತ್ (35) ಮೃತ ಯುವಕ. ಸ್ವಿಮ್ಮಿಂಗ್‌ ಪೂಲ್‌ಗೆ ಧುಮುಕಿದ ವೇಳೆ ಬೆನ್ನುಮೂಳೆಗೆ ಘಾಸಿಯುಂಟಾದ ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ

ಮಡಿಕೇರಿಯಲ್ಲಿ ಆಟವಾಡಲು ಕೆರೆಗಿಳಿದ ಬಾಲಕಿ ಸಾವು

ಕೊಡಗಿನ ಪೊನ್ನಂಪೇಟೆ ತಾಲೂಕಿನ ಅತ್ತೂರು ಗ್ರಾಮದ ಚೆನ್ನಂಗೊಲ್ಲಿಯಲ್ಲಿ ಆಟವಾಡಲೆಂದು ಕೆರೆಗೆ ಹಾರಿದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೆ ಕೆಸರಿನಲ್ಲಿ ಸಿಲುಕಿ ಮೃತಪಟ್ಟಿದ್ದಾಳೆ. ಕಾಫಿ ಬೆಳೆಗಾರ ಕೆ.ಕೆ.ತಿಮ್ಮಯ್ಯ ಎಂಬವರಿಗೆ ಸೇರಿದ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ. ತೋಟದ ಕಾರ್ಮಿಕರಾಗಿರುವ ಭವಾನಿ ಎಂಬವರ 9 ವರ್ಷದ