Menu

ಪತಿ ಮಗುವನ್ನು ಅಪಹರಿಸಿರುವುದಾಗಿ ಪತ್ನಿ ದೂರು

ನನ್ನ ಪತಿಯೇ ಐದು ವರ್ಷದ ಮಗನನ್ನು ಕಿಡ್ನಾಪ್ ಮಾಡಿದ್ದಾನೆ, ದಯವಿಟ್ಟು ನನ್ನ ಮಗನನ್ನು ಹುಡುಕಿಕೊಡಿ ಎಂದು ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಪ್ರಕರಣ ಮಡಿಕೇರಿ ತಾಲೂಕಿನ ಕಾಂತೂರು ಮೂರ್ನಾಡುವಿನಲ್ಲಿ ನಡೆದಿದೆ. ಮೂರ್ನಾಡು ಗ್ರಾಮದ ನಿವಾಸಿ ಭವ್ಯ ಮಹಿಳೆ ಆರು ತಿಂಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಮಗುವಿನೊಂದಿಗೆ ತಾಯಿಯ ಮನೆಯಲ್ಲಿ ವಾಸವಿದ್ದಾರೆ. ತಾನು ವಾಸವಿರುವ ಮನೆಗೆ ಬಂದ ಪತಿ ತಿಮ್ಮಯ್ಯ , ಮಗುವನ್ನು ಕರೆದುಕೊಂಡು ಪರಾರಿಯಾಗಿದ್ದಾನೆ ಎಂದು ಮಹಿಳೆ

ದುಬಾರೆಯಲ್ಲಿ ಮಹಿಳೆ, ಆನೆ ಸಾವು: ವರದಿ ಕಡೆಗಣಿಸಿ ಬೇಜವಾಬ್ದಾರಿ ತೋರಿದ ಅರಣ್ಯ ಇಲಾಖೆ ಕಾರಣ

ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ದುಬಾರೆ ಆನೆ ಶಿಬಿರದಲ್ಲಿ ಎರಡು ದಿನಗಳ ಹಿಂದೆ ಆನೆಗಳ ನಡುವಿನ ಕಾದಾಟಕ್ಕೆ ಚೆನ್ನೈನ ಪ್ರವಾಸಿ ಮಹಿಳೆ ತುಳಸಿ (33) ಬಲಿಯಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ ಎಂಬ ಸಾಕಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಈ ದುರಂತಕ್ಕೆ ಅರಣ್ಯ ಇಲಾಖೆಯ

ದುಬಾರೆಯಲ್ಲಿ ಕಂಜನ್‌ ದಾಳಿಗೆ ಒಳಗಾಗಿದ್ದ ಮಾರ್ತಾಂಡ ಆನೆ ಸಾವು

ಕೊಡಗಿನ ದುಬಾರೆ ಶಿಬಿರದಲ್ಲಿ ಮಾರ್ತಾಂಡ ಮತ್ತು ಕಂಜನ್‌ ಆನೆಗಳ ಕದನದ ವೇಳೆ ಪ್ರವಾಸಿ ಮಹಿಳೆಯೊಬ್ಬರ ಮೇಲೆ ಆನೆ ಬಿದ್ದು ಆಕೆ ಮೃತಪಟ್ಟಿದ್ದು, ಕದನದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಿಸದೆ ಮಂಗಳವಾರ ಅಸು ನೀಗಿದೆ. ಸೋಮವಾರ ಮಧ್ಯಾಹ್ನ ಆನೆಗಳ ಸ್ನಾನದ

ದುಬಾರೆಯಲ್ಲಿ ಸಾಕಾನೆಗಳ ಕಾದಾಟಕ್ಕೆ ಪ್ರವಾಸಿ ಮಹಿಳೆ ಬಲಿ

ಕುಶಾಲನಗರದಲ್ಲಿರುವ ದುಬಾರೆ ಶಿಬಿರದಲ್ಲಿ ಸಾಕಾನೆಗಳ ಮಧ್ಯೆ ನಡೆದ ಕಾದಾಟಕ್ಕೆ ಪ್ರವಾಸಿ ಮಹಿಳೆ ಬಲಿಯಾಗಿರುವ ದಾರುಣ ಘಟನೆಯೊಂದು ನಡೆದಿದೆ. ಚೆನ್ನೈನ ಜಿನ್ಮು (33) ಮೃತಪಟ್ಟ ಮಹಿಳೆ. ಸೋಮವಾರ (ಇಂದು) ಬೆಳಗ್ಗೆ ಮಹಿಳೆ ಹಾಗೂ ಪತಿ ಜೋಯಲ್ ದುಬಾರೆ ಸಾಕಾನೆ ಶಿಬಿರಕ್ಕೆ ಬಂದಿದ್ದರು. ಸಾಕಾನೆಗಳೊಂದಿಗೆ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

ಕೊಡಗಿನ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ನಡೆದಿದೆ. ಕಾಯಿಮಾನಿ ನಿವಾಸಿ ರತ್ತು ಆನೆ ದಾಳಿಗೆ ಬಲಿಯಾದವರು ಎಂದು ಗುರುತಿಸಲಾಗಿದೆ. ಬೆಳಗ್ಗೆ ರತ್ತು ಅವರು ಕುರ್ಚಿ-ಕಾಯಿಮಾನಿ ನಡುವೆ ಇರುವ ಕಾಫಿ ತೋಟಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ಏಕಾಏಕಿ

ಇಸ್ರೇಲ್‌- ಇರಾನ್‌ ಯುದ್ಧದಿಂದ ಬದುಕು ಅತಂತ್ರ: ದಂಪತಿ ಕೊಡಗಿನಲ್ಲಿ, ಮಕ್ಕಳು ಇರಾನ್‌ನಲ್ಲಿ

ಮಕ್ಕಳನ್ನು ಇರಾನ್‌ನಲ್ಲಿ ಬಿಟ್ಟು ದೀರ್ಘ ರಜೆಯಲ್ಲಿ ಕೊಡಗಿಗೆ ಬಂದಿದ್ದ ದಂಪತಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಮಾನ ಸಂಚಾರ ರದ್ದುಗೊಂಡ ಕಾರಣ ಇರಾನ್‌ಗೆ ಹೋಗಲಾಗದೆ ಪರಿತಪಿಸುತ್ತಿದ್ದರೆ ಮತ್ತೊಂದೆಡೆ ಅವರಿಗೆ ಇರಾನ್‌ನಲ್ಲಿರುವ ಮಕ್ಕಳನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ದಂಪತಿಯ ಪಾಸ್‌ಪೋರ್ಟ್‌ ಅವಧಿ ಮುಕ್ತಾಗೊಳ್ಳುವ ಹಂತದಲ್ಲಿದ್ದು, ಮತ್ತೆ

ಮಡಿಕೇರಿ: ಮದ್ಯದ ಅಮಲಿನಲ್ಲಿ ಅಣ್ಣ, ತಂಗಿಯ ಕೊಲೆ

ಮದ್ಯ ತಲೆಗೇರಿಸಿಕೊಂಡಿದ್ದ ವ್ಯಕ್ತಿಯು ಅಣ್ಣ, ತಂಗಿಯನ್ನು ಕೊಲೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಭಾಗಮಂಡಲದಲ್ಲಿ ನಡೆದಿದೆ. ಯಶೋಧಾ(45), ಕುಂಞರಾಮ(47) ಕೊಲೆಯಾದವರು. ಕೊಲೆ ಆರೋಪಿ ಚಂದು(65) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಆರೋಪಿಯು ಮಾರಕಾಸ್ತ್ರದಿಂದ ಒಡ ಹುಟ್ಟಿದವರನ್ನು ಕೊಚ್ಚಿ ಕೊಂದಿದ್ದು, ಸ್ಥಳಕ್ಕೆ

ಹಲವು ಯುವತಿಯರೊಂದಿಗೆ ಸೆಕ್ಸ್‌ ವೀಡಿಯೊ ವೈರಲ್‌: ಮಡಿಕೇರಿಯ ಯುವಕ ಅರೆಸ್ಟ್‌

ಯುವಕನೊಬ್ಬ ಹಲವು ಯುವತಿಯರೊಂದಿಗೆ ಸೆಕ್ಸ್‌ ಮಾಡಿರುವ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಮೊಹಮ್ಮದ್ ಸವದ್ ಎಂಬಾತನನ್ನು ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಸವದ್ ಬೆಂಗಳೂರಿನ ಸಂಪಿಗೆಹಳ್ಳಿಯ

ಮಡಿಕೇರಿ: ಪತ್ನಿಗೆ ವೀಡಿಯೊ ಕಾಲ್ ಮಾಡಿ ಪತಿ ಲೈವ್ ಸುಸೈಡ್

ಮಡಿಕೇರಿ ಸಮೀಪದ ಸಿಂಕೋನ ಎಂಬಲ್ಲಿ ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ (36) ಎಂಬಾತ ಪತ್ನಿಗೆ ವೀಡಿಯೊ ಕಾಲ್ ಮಾಡಿ ಲೈವ್ ಆಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ ಕೀರ್ತನ್ ಇತ್ತೀಚೆಗಷ್ಟೆ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ. ತವರಿನಲ್ಲಿದ್ದ ಪತ್ನಿ

ವಿರಾಜಪೇಟೆಯಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಬಲಿ

ಕೊಡಗು ಜಿಲ್ಲೆಯ ವಿರಾಜಪೇಟೆ ಪಾಲಿಬೆಟ್ಟ ಬಳಿಯ ಎಮ್ಮೆಗುಂಡಿ ತೋಟದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಬಲಿಯಾಗಿದ್ದಾರೆ. ಹಾಸನ ಸಮೀಪದ ರಾಮನಾಥಪುರದ ಹನುಮಂತ (57) ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ. ಇತ್ತೀಚೆಗೆ ರಾಜ್ಯದಲ್ಲಿ ಕಾಡು ಪ್ರಾಣಿಗಳ ದಾಳಿಗೆ ಹಲವರು ಬಲಿಯಾಗುತ್ತಿದ್ದಾರೆ, ಕಾಡಾನೆ ಮತ್ತು ಹುಲಿ