ಮಂಡ್ಯ
ಊಟಕ್ಕೆ ಸೇರಿದರೆ ಸಿಎಂ ಬದಲಾಗಲ್ಲ, ಹೈಕಮಾಂಡ್ ಹೇಳಿದ್ರೆ ಮಾತ್ರ ಬದಲಾವಣೆ: ಗಣಿಗ ರವಿಕುಮಾರ್
ಒಂದೆಡೆ ಊಟಕ್ಕೆ ಸೇರಿದ ತಕ್ಷಣ ನಾಯಕತ್ವ ಬದಲಾವಣೆಗೆ ಅಂದ್ರೆ ಹೇಗೆ. ಊಟಕ್ಕೆ ಸೇರಿದರೆ ಸಿಎಂ ಬದಲಾಗಲ್ಲ, ಹೈಕಮಾಂಡ್ ಹೇಳಿದ್ರೆ ಮಾತ್ರ ಬದಲಾವಣೆ ಎಂದು ಮಂಡ್ಯದಲ್ಲಿ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ರಾಜ್ಯ ನಾಯಕತ್ವ ಬದಲಾವಣೆ ವಿಚಾರದಲ್ಲಿ ನಾನು ಒಂದು ತಿಂಗಳು ಮೌನವ್ರತ ತಾಳಿದ್ದೇನೆ. ಒಂದು ತಿಂಗಳ ಬಳಿಕ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತೇನೆ. ಸಿಎಂ ಪುತ್ರಗೆ ನಮ್ಮೆಲ್ಲರಿಗಿಂತ ಹೆಚ್ಚು ಜವಬ್ದಾರಿ ಇರುತ್ತದೆ. ಅಧಿಕಾರದಲ್ಲಿದ್ದವರು ಶಾಂತ
ಸತೀಶ್ ಜಾರಕಿಹೊಳಿ ಸಿಎಂ ಆದ್ರೆ ಸಂತೋಷವೆಂದ ಬಿಕೆ ಹರಿಪ್ರಸಾದ್: ಸಿದ್ದರಾಮಯ್ಯ ಇರುವಾಗ ಈ ಚರ್ಚೆ ಅನಗತ್ಯವೆಂದ ಬೈರತಿ ಸುರೇಶ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸತೀಶ್ ಜಾರಕಿಹೊಳಿ ಉತ್ತರಾಧಿಕಾರಿ ಆದರೆ ಬಹಳ ಸಂತೋಷ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಸತೀಶ್ ಉತ್ತರಾಧಿಕಾರಿಯಾಗುತ್ತಾರೆ ಎಂಬ ಚರ್ಚೆ ಕುರಿತ ಪ್ರಶ್ನೆಗೆ ಉತ್ತರಿಸಿದರು. ಸತೀಶ್ ಅಹಿಂದ ಪರ
ಶ್ರೀಶಿವರಾತ್ರಿ ಶಿವಯೋಗಿಗಳ ಜಯಂತಿ: ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು
ಸುತ್ತೂರಿನ ಶ್ರೀಶಿವರಾತ್ರಿ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ಡಿ.17ರಂದು ಮಳವಳ್ಳಿ ಪಟ್ಟಣದಲ್ಲಿ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ. ರಾಷ್ಟ್ರಪತಿ ಆಗಮನದ ಹಿನ್ನೆಲೆ ಹೆಲಿಪ್ಯಾಡ್, ವೇದಿಕೆ ಹಾಗೂ ಇತರ ಸ್ಥಳಗಳನ್ನು ಮೈಸೂರು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ
ಮಂಗಳಮುಖಿಯರಿಂದ ಯುವಕನ ಅಪಹರಣ: ಮಧುರೈನಲ್ಲಿ ರಕ್ಷಿಸಿದ ಬೆಂಗಳೂರು ಪೊಲೀಸ್
ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳಮುಖಿಯರು ಅಪಹರಿಸಿಕೊಂಡು ಹೋಗಿದ್ದ 25 ವರ್ಷದ ಯುವಕನನ್ನು ಪೊಲೀಸರು ರಕ್ಷಿಸಿದ್ದಾರೆ. ಮಂಗಳಮುಖಿಯರ ತಂಡ ಯುವಕನನ್ನು ಅಪಹರಿಸಿ ತಮಿಳುನಾಡಿನ ಮಧುರೈಗೆ ಕರೆದುಕೊಂಡು ಹೋಗಿತ್ತು. ಅಲ್ಲಿ ಯುವಕನಿಗೆ ಶಸ್ತ್ರಚಿಕಿತ್ಸೆ ನಡೆಸಿ ಲಿಂಗ ಪರಿವರ್ತನೆ ಮಾಡಿಸಲು ಮಂಗಳಮುಖಿಯರ
ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಎಂ ಸಿದ್ದರಾಮಯ್ಯ ಕರೆ
ಮಂಡ್ಯ: ರೈತರು ತಮ್ಮ ವ್ಯವಸಾಯದಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಮಂಡ್ಯದಲ್ಲಿ ಶುಕ್ರವಾರ ನಡೆದ “ಕೃಷಿ ಮೇಳ 2025” ಸಮಗ್ರ ಕೃಷಿಯಿಂದ ಸುಸ್ಥಿರತೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ
ಸಂಕೀರ್ತನಾ ಯಾತ್ರೆಯಲ್ಲಿ ಹೈಡ್ರಾಮಾ: ಶ್ರೀರಂಗಪಟ್ಟಣದ ಜಾಮೀಯಾ ಮಸೀದಿಗೆ ನುಗ್ಗಲು ಮಾಲಾಧಿಕಾರಿಗಳ ಯತ್ನ!
ಹನುಮ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಬೃಹತ್ ಸಂಕೀರ್ತನಾ ಯಾತ್ರೆಯ ವೇಳೆ ಮಾಲಾಧಾರಿಗಳು ಜಾಮೀಯ ಮಸೀದಿಗೆ ನುಗ್ಗಲು ಯತ್ನಿಸಿದ್ದರಿಂದ ಕೆಲವು ಗಂಟೆಗಳ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಬುಧವಾರ ನಡೆಯಿತು. ಹನುಮ ಧ್ವಜ ಹಿಡಿದ ಸಾವಿರಾರು ಭಕ್ತರು ಗಂಜಾಂನ ಹಜರತ್ ಸೈಯದ್
ಮಂಡ್ಯದಲ್ಲಿ ರೌಡಿ ಶೀಟರ್ ಹತ್ಯೆ
ಮಂಡ್ಯದ ಪಾಂಡವಪುರ ತಾಲೂಕಿನ ಅಮೃತಿ ಗ್ರಾಮದ ಬಳಿ ತಡರಾತ್ರಿ ರೌಡಿ ಈಟರ್ವೊಬ್ಬನ ಬರ್ಬರ ಹತ್ಯೆಯಾಗಿದೆ. ಲಕ್ಷ್ಮೀ ಸಾಗರ ಗ್ರಾಮದ ಮಹೇಶ್(26) ಕೊಲೆಯಾದ ರೌಡಿ ಶೀಟರ್. ಲಕ್ಷ್ಮೀ ಸಾಗರ ಗ್ರಾಮದ ಮಹೇಶ್(26) ಕೊಲೆಯಾದ ರೌಡಿ ಶೀಟರ್. ತಡರಾತ್ರಿ ಜಕ್ಕನಹಳ್ಳಿ ಬಾರ್ ಬಳಿ ಯುವಕರ
ಎಲ್ಲ ಧರ್ಮದವರು ಭೂ ವರಾಹಸ್ವಾಮಿಗೆ ಪ್ರಾರ್ಥನೆ ಸಲ್ಲಿಸುವುದು ಖುಷಿ ವಿಚಾರ: ಡಿಕೆ ಶಿವಕುಮಾರ್
ಮಂಡ್ಯ ಜಿಲ್ಲೆಯ ಅದ್ಭುತ, ಐತಿಹಾಸಿಕ ದೇವಾಲಯವಾಗಿ ಭೂ ವರಾಹ ಸ್ವಾಮಿ ಸನ್ನಿಧಿ ಪ್ರಸಿದ್ಧವಾಗಿದೆ.. ಎಲ್ಲಾ ಧರ್ಮದ ಜನ ಈ ದೇವಾಲಯಕ್ಕೆ ಬಂದು ಪ್ರಾರ್ಥನೆ ಸಲ್ಲಿಸುತ್ತಾರೆ. ಅದನ್ನು ನೋಡಿ ಖುಷಿ ಎನಿಸಿತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಭೂವರಾಹಸ್ವಾಮಿ ದೇವಾಲಯದ ಬಳಿ
ವಿಧಾನಸಭೆ ಚುನಾವಣೆಯಲ್ಲಿ ಮದ್ದೂರಿನಿಂದ ನಾನು ಇಲ್ಲವೇ ಅಭಿಷೇಕ್ ಸ್ಪರ್ಧೆ ಖಚಿತ : ಸುಮಲತಾ
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಅಥವಾ ನನ್ನ ಮಗ ಅಭಿಷೇಕ್ ಮದ್ದೂರು ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ ಎಂದು ಮಾಜಿ ಸಂಸದೆ ಸುಮಲತಾ ಹೇಳಿದ್ದಾರೆ. ನನ್ನ ಸ್ಪರ್ಧೆ ಖಚಿತ, ಯಾವ ಕ್ಷೇತ್ರ ಎಮಬುದು ಬಿಜೆಪಿ ವರಿಷ್ಠರು ತೀರ್ಮಾನ, ಆದರೆ ಮದ್ದೂರು ಕ್ಷೇತ್ರ ನನ್ನ
ಕೆಆರ್ ಪೇಟೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಶವ ಬಾವಿಯಲ್ಲಿ ಪತ್ತೆ
ಮಂಡ್ಯದ ಕೆಆರ್ ಪೇಟೆ ತಾಲೂಕಿನ ದೊಡ್ಡಸೋಮನಹಳ್ಳಿ ಗ್ರಾಮದಲ್ಲಿ ಬಾವಿಯೊಂದರಲ್ಲಿ 22 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಮೂಲದ ಕರಣ್.ಎಸ್ ಎಂದು ಗುರುತಿಸಲಾಗಿದೆ. ಕರಣ್ ಶ್ರವಣಬೆಳಗೊಳದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮೃತದೇಹ ಪತ್ತೆಯಾದ ಬಾವಿಯ ಸಮೀಪದಲ್ಲೇ




