Menu

ಭರ್ತಿಯಾಗುತ್ತಿದೆ ಕಬಿನಿ ಜಲಾಶಯ: ನದಿಗೆ ನೀರು ಬಿಡಲು ಸಿದ್ಧತೆ

ರಾಜ್ಯ ಬರದಿಂದ ತತ್ತರಿಸುತ್ತಿರುವ ಮಧ್ಯೆಯೇ ಹಾರಂಗಿ ಜಲಾಶಯ ಭರ್ತಿಯಾದ ಬಳಿಕ ಆಲಮಟ್ಟಿ, ನಾರಾಯಣಪುರ ಡ್ಯಾಂಗಳ ಜೊತೆ ಕಬಿನಿ ಜಲಾಶಯ ತುಂಬಿದ್ದು  ಕಬಿನಿಯ ಎಂಟರಿಂದ 10 ಸಾವಿರ ಕ್ಯೂಸೆಕ್‌ ನೀರು ನದಿಗೆ ಹರಿಸಲು ಸಿದ್ಧತೆ ನಡೆದಿದೆ. ಕೇರಳದ ವಯನಾಡ್‌ ಭಾಗದಲ್ಲಿ ಮಳೆ ಸುರಿದ ಪರಿಣಾಮ ಕಬಿನಿ ಜಲಾಶಯ ಭರ್ತಿಯಾಗುತ್ತಿದೆ. ಹೆಚ್‌.ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ 15,500 ಕ್ಯೂಸೆಕ್‌ ನೀರಿನ ಒಳಹರಿವು ಹೆಚ್ಚಾಗಿದೆ. 2,284 ಅಡಿ ಗರಿಷ್ಠ ನೀರು ಸಂಗ್ರಹ

ಮಂಡ್ಯ-ಮೈಸೂರಲ್ಲಿ ಕಾವೇರಿ ಕಿಚ್ಚು: ಪ್ರತಿಭಟನೆ, ರಸ್ತೆ ತಡೆ

ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶದ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದ ರೈತರು ರಸ್ತೆ ತಡೆ, ಅರೆ ಬೆತ್ತಲೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು. ಮೈಸೂರು ಜಿಲ್ಲಾ ರೈತ ಸಂಘದ ಬುಧವಾರ ಮೈಸೂರಿನ ಹಳೆ ಕೋರ್ಟ್ ಮುಂಭಾಗದಲ್ಲಿರುವ

ಹುಣಸೂರಿನಲ್ಲಿ ಪತ್ನಿ, ಮಕ್ಕಳ ಕೊಂದು ವ್ಯಕ್ತಿ ಆತ್ಮಹತ್ಯೆ

ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ಬಳಿಕ ವ್ಯಕ್ತಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ನ್ಯೂ ಮಾರುತಿ ಬಡಾವಣೆಯ ಮನೆಯಲ್ಲಿ ಹರೀಶ್(42) ಎಂಬ ವ್ಯಕ್ತಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ

ಅ.11 ವಿಜೃಂಭಣೆಯ ದಸರಾ ಉದ್ಘಾಟನೆ, ಅ.21ಕ್ಕೆ ಜಂಬೂ ಸವಾರಿ: ಸಿಎಂ ಡಿಕೆ ಶಿವಕುಮಾರ್‌

ನಾಡಹಬ್ಬ ದಸರಾ ಹಬ್ಬವನ್ನು ಈ ಬಾರಿ 11 ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದ್ದು, ಕರ್ನಾಟಕ ರಾಜ್ಯದ ಎಲ್ಲಾ ಸಂಸ್ಕೃತಿ ಪರಂಪರೆಗಳಿಗೆ ಅನುಗುಣವಾಗಿ ಹೊಸ ಹೊಸ ಕಾರ್ಯಕ್ರಮಗಳನ್ನು ಅಳವಡಿಸಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಾಡಹಬ್ಬ ದಸರಾ- 2026 ಆಚರಣೆ

ಮೈಸೂರಿನಲ್ಲಿ ಗಂಡನ ಕತ್ತು ಹಿಸುಕಿ ಸಾಯಿಸಿದ ಶಿಕ್ಷಕಿ

ಮೈಸೂರಿನ ಕುವೆಂಪುನಗರ ಪ್ರದೇಶದಲ್ಲಿ ಭಾನುವಾರ ರಾತ್ರಿ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ವ್ಯಕ್ತಿ ಮೃತಪಟ್ಟಿರುವ ಪ್ರಕರಣದ ತನಿಖೆಯಲ್ಲಿ ಶಿಕ್ಷಕಿಯಾಗಿರುವ ಪತ್ನಿಯೇ ಕತ್ತು ಹಿಸುಕಿ ಕೊಲೆ ಮಾಡಿರುವ ವಿಚಾರ ಬಯಲಾಗಿದೆ. 50 ವರ್ಷದ ನಿತ್ಯಾನಂದ ಕೊಲೆಯಾದ ವ್ಯಕ್ತಿ. ಶಿಕ್ಷಕಿ ಸುಶೀಲಾ ಕೊಲೆಗೈದ ಪತ್ನಿ. ನಿತ್ಯಾನಂದ ಕಾರು

ಮೈಸೂರಿನಲ್ಲಿ ವಿಷ ಸೇವಿಸಿ ಮದುವೆ ನಿಗದಿಯಾಗಿದ್ದ ಮಗಳು,ತಂದೆ, ತಾಯಿ ಸುಸೈಡ್‌

ಮೈಸೂರು ಟಿ.ನರಸೀಪುರದ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ತಂದೆ, ತಾಯಿ ಮತ್ತು ಮಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಿವಣ್ಣ, ಪತ್ನಿ ನಾಗರತ್ನ ಮತ್ತು ಮಗಳು ರಕ್ಷಿತಾಆತ್ಮಹತ್ಯೆ ಮಾಡಿಕೊಂಡವರು. ಕುಟುಂಬ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳದಲ್ಲಿ ಡೆತ್​ನೋಟ್​​

ಮೈಸೂರು ಕಾಲೇಜು ಕ್ಯಾಂಪಸ್‌ನಲ್ಲೇ ಕುಸಿದು ವಿದ್ಯಾರ್ಥಿ ಸಾವು

ಮೈಸೂರಿನ ಮರಿಮಲ್ಲಪ್ಪ ಕಾಲೇಜು ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿಯೊಬ್ಬರು ಹೃದಯಾಘಾತಗೊಂಡು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮಾದೇಶ್ ಮೃತಪಟ್ಟ ವಿದ್ಯಾರ್ಥಿ. ಇವರು ಮದ್ದೂರು ತಾಲೂಕಿನವರಾಗಿದ್ದು, ಮೈಸೂರು ಮರಿಮಲ್ಲಪ್ಪ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಎಂದಿನಂತೆ ಕಾಲೇಜಿಗೆ ಬಂದಿದ್ದ ಮಾದೇಶ್, ಕ್ಯಾಂಪಸ್‌ನಲ್ಲಿ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾರೆ. ಕಾಲೇಜಿನ ಸಿಬ್ಬಂದಿ

ಮೈಸೂರು ಪಬ್‌ನಲ್ಲಿ ಬೆಂಕಿ ಅವಘಡ: ಇಬ್ಬರು ಸಜೀವ ದಹನ

ಮೈಸೂರಿನ ದಟ್ಟಗಳ್ಳಿಯಲ್ಲಿರುವ ಫಾಕ್ಸ್ ಡೆನ್ ರೆಸ್ಟೋ ಬಾರ್​​ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಾಹಿಲ್, ಪ್ರಕಾಶ್ ಮೃತಪಟ್ಟವರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಟ್ಟಗಳ್ಳಿ 4ನೇ ಹಂತದ ಬಳಿಯಿರುವ ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್’ ಪಬ್

ಮೈಸೂರಿನಲ್ಲಿ ಸಿಡಿಲು ಬಡಿದು ಟೆಕ್ಕಿ ಸಾವು

ಮೈಸೂರಿನ ಯೆಲಿವಾಳ ಬಳಿ ಸಿಡಿಲು ಬಡಿದು ಬೆಂಗಳೂರಿನ 43 ವರ್ಷದ ಟೆಕ್ಕಿಯೊಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಮೃತ ಟೆಕ್ಕಿಯನ್ನು ಹೊಸೊಕ್ಲು ರೋಷನ್ ಬಾಲಕೃಷ್ಣ ಎಂದು ಗುರುತಿಸಲಾಗಿದೆ. ರೋಷನ್‌ ಕೊಡಗು ಜಿಲ್ಲೆಯವರು, ಐಟಿ ಕಂಪನಿಯ ಉದ್ಯೋಗಿಯಾಗಿದ್ದು ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ಮೈಸೂರಿನಲ್ಲಿರುವ

ವಿದ್ಯಾರ್ಥಿಗಳು ಧಾರ್ಮಿಕ ಸಂಕೇತ ಧರಿಸಬಹುದು: ಸಿಎಂ ಸಿದ್ದರಾಮಯ್ಯ

ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಧಾರ್ಮಿಕ ಸಂಕೇತಗಳ ವಿಚಾರದಲ್ಲಿ ಬಿಜೆಪಿ ಎತ್ತಿರುವ