Monday, September 15, 2025
Menu

ರಾಯಚೂರಿನಲ್ಲಿ 120ಕ್ಕೂ ಹೆಚ್ಚು ನಕಲಿ ವೈದ್ಯರ ಕ್ಲಿನಿಕ್‌ ಬಂದ್‌

ರಾಯಚೂರು ನಗರ ಸೇರಿ ಜಿಲ್ಲೆಯಾದ್ಯಂತ ಒಟ್ಟು 120ಕ್ಕೂ ಹೆಚ್ಚು ನಕಲಿ ವೈದ್ಯರನ್ನು ಪತ್ತೆ ಮಾಡಿರುವ ಆರೋಗ್ಯ ಇಲಾಖೆ,  ಅವರ ಕ್ಲಿನಿಕ್‌ಗಳನ್ನು ಬಂದ್‌ ಮಾಡಿದೆ. ಇತ್ತೀಚೆಗೆ ನಡೆದ ಕೆಡಿಪಿ ಸಭೆಯಲ್ಲಿ ಆರ್​​ಎಂಪಿ ವೈದ್ಯರ ವಿರುದ್ಧ ಎಂಎಲ್​ಸಿ ಶರಣಗೌಡ ಬಯ್ಯಾಪುರ ಆಕ್ರೋಶ ವ್ಯಕ್ತಪಡಿಸಿದ ಬೆನ್ನಿಗೆ ಈ ಕಾರ್ಯಾಚರಣೆ ನಡೆದಿದೆ. ಚಿಕಿತ್ಸೆ ಆರಂಭದಲ್ಲೇ ಆರ್​ಎಂಪಿ ನಕಲಿ ವೈದ್ಯರು ಹೈ ಡೋಸ್ ಚಿಕಿತ್ಸೆ ಕೊಡುತ್ತಾರೆ. ಹೀಗಾಗಿ ನಕಲಿ ವೈದ್ಯರ ಬಳಿ ಬರುವವರು ಕಡಿಮೆ ಅವಧಿಯಲ್ಲೇ ಗುಣ

ಗಂಗಾವತಿಯಲ್ಲಿ ಬಾಕಿ ಶುಲ್ಕ ಪಾವತಿಗೆ ವಿದ್ಯಾರ್ಥಿನಿ ತಾಯಿಯ ತಾಳಿ ಪಡೆದ ಕಾಲೇಜು ಚೇರ್ಮನ್‌

ಗಂಗಾವತಿಯ ಬಿಬಿಸಿ ನರ್ಸಿಂಗ್ ಕಾಲೇಜಿನ ಚೇರ್ಮನ್‌ ಡಾ. ಸಿಬಿ ಚಿನಿವಾಲ ವಿದ್ಯಾರ್ಥಿನಿಯ ಶುಲ್ಕ ಪಾವತಿಗಾಗಿ ಆಕೆಯ ತಾಯಿಯ ತಾಳಿಯನ್ನೇ ಒತ್ತೆಯಾಗಿಟ್ಟುಕೊಂಡ ಆರೋಪ ಕೇಳಿ ಬಂದಿದೆ. ಕನಕಗಿರಿ ತಾಲೂಕಿನ ಮುಸ್ಲಾಪೂರ ಗ್ರಾಮದ ಕಾವೇರಿ ವಾಲಿಕಾರ್ ಎಂಬ ವಿದ್ಯಾರ್ಥಿನಿ ಗಂಗಾವತಿಯ ಬಿಬಿಸಿ ನರ್ಸಿಂಗ್ ಕಾಲೇಜಿನಲ್ಲಿ

ರಾಯಚೂರಿನಲ್ಲಿ ಗಣೇಶ ಮೆರವಣಿಗೆ: ವಿದ್ಯುತ್‌ ಸ್ಪರ್ಶದಿಂದ ಯುವಕ ಸಾವು

ರಾಯಚೂರು ತಾಲೂಕಿನ ಗಟ್ಟುಬಿಚ್ಚಾಲಿ ಗ್ರಾಮದಲ್ಲಿ ಗಣೇಶನ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಮೃತಪಟ್ಟಿದ್ದಾನೆ. ನರಸಿಂಹ (22) ಮೃತ ಯುವಕ. ಹನುಮಾಪುರ ಬಳಿ ರಾಜೊಳ್ಳಿಬಂಡಾ ಕಾಲುವೆಯಲ್ಲಿ ಗಣೇಶ ವಿಸರ್ಜನೆಗೆ ಹೊರಟಿದ್ದ ವೇಳೆ ಬೊಲೆರೋ ಪಿಕಪ್ ಮೇಲೆ ಗಣೇಶ ಮೂರ್ತಿ ಹಿಡಿದು ಕುಳಿತಿದ್ದ

ಹೇರ್‌ ಪಿನ್ ನುಂಗಿದ ಆರು ತಿಂಗಳ ಮಗುವಿನ ಜೀವವುಳಿಸಿದ ವೈದ್ಯ

ಯಾದಗಿರಿಯಲ್ಲಿ ಹೇರ್‌ ಪಿನ್‌ ಹಿಡಿದುಕೊಂಡು ಆಟವಾಡುತ್ತಿದ್ದ ಮಗು ಅದನ್ನು ನುಂಗಿ ಪೋಷಕರಲ್ಲಿ ಆತಂಕವುಂಟು ಮಾಡಿತ್ತು, ರಾಯಚೂರಿನ ಖಾಸಗಿ ಆಸ್ಪತ್ರೆಗೆ ಕರೆ ತಂದಾಗ, ಸ್ಕ್ಯಾನಿಂಗ್ ಮಾಡಿದ್ದು ಮಗುವಿನ ಹೊಟ್ಟೆಯಲ್ಲಿ ಹೇರ್ ಪಿನ್ ಇರುವುದು ಪತ್ತೆಯಾಗಿದೆ. ಮಗುವಿನ ಕರುಳು ಡ್ಯಾಮೇಜ್ ಆಗದಂತೆ ಎಂಡೊಸ್ಕೋಪಿ ಸಹಾಯದಿಂದ

ರಾಜ್ಯದ ಮೂರು ಜಿಲ್ಲೆಗಳಲ್ಲಿ ಡಿಫೆನ್ಸ್‌ ಮಾಕ್‌ ಡ್ರಿಲ್‌

ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತ ಮಾಕ್​ ಡ್ರಿಲ್ ಮಾಡಲು ಆದೇಶಿಸಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾಕ್​ ಡ್ರಿಲ್​​ ಮಾಡಲಾಗುತ್ತಿದೆ. ಕರ್ನಾಟಕದ ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ನಾಳೆ ಮಾಕ್​ ಡ್ರಿಲ್​ಗೆ ನಿರ್ಧರಿಸಲಾಗಿದೆ ಎಂದು ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್

ಮಂತ್ರಾಲಯ ಪ್ರವಾಸದಲ್ಲಿ ದೇವನಹಳ್ಳಿಯ ವಿದ್ಯಾರ್ಥಿಗಳಿಬ್ಬರು ತುಂಗಭದ್ರಾ ಪಾಲು

ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ರಾಯಚೂರಿನ ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯ ಎಲೆಬಿಚ್ಚಾಲಿ ಗ್ರಾಮದ ಬಳಿ ನಡೆದಿದೆ. ಮಂತ್ರಾಲಯಕ್ಕೆ ಪ್ರವಾಸಕ್ಕೆ ತೆರಳಿದ್ದ ದೇವನಹಳ್ಳಿ ತಾಲೂಕಿನ ಚಿನವಂಡನಹಳ್ಳಿಯ ಮುತ್ತುರಾಜು(23) ಹಾಗೂ ಮದನ್(20) ಮೃತ ವಿದ್ಯಾರ್ಥಿಗಳು. ದೇವನಹಳ್ಳಿಯ

ತಡೆಗೋಡೆಗೆ ಡಿಕ್ಕಿ ಹೊಡೆದ ಗೂಡ್ಸ್ ಪಿಕಪ್ ವಾಹನ: ನಾಲ್ವರು ಸ್ಥಳದಲ್ಲೇ ದುರ್ಮರಣ

ರಾಯಚೂರು: ನಿಯಂತ್ರಣ ತಪ್ಪಿದ ಗೂಡ್ಸ್ ಪಿಕಪ್ ವಾಹನ ರಸ್ತೆಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಬಳಿ ಗುರುವಾರ ಸಂಭವಿಸಿದೆ. ತೆಲಂಗಾಣದ ಹಿಂದೂಪುರ ನಿವಾಸಿಗಳಾದ ನಾಗರಾಜ್ (28), ಸೋಮು (38),

ಬೀದಿ ನಾಯಿಗಳ ದಾಳಿಗೆ ಆರು ವರ್ಷದ ಬಾಲಕ ಸಾವು

ಲಿಂಗಸುಗೂರು  ಪುರಸಭೆ ವ್ಯಾಪ್ತಿಯಲ್ಲಿ ಬರುವ ಕಸಬಾಲಿಂಗಸುಗೂರು ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿಗೆ ಸಿದ್ದಪ್ಪ ಬೀರಪ್ಪ (6) ಎಂಬ ವರ್ಷದ ಮಗು ಮೃತಪಟ್ಟಿದೆ. ಬಾಲಕ  ಸಂಜೆ ಬಯಲು ಬಹಿರ್ದೆಸೆಗೆ ಹೋದಾಗ ಐದಾರು ಬೀದಿ ನಾಯಿಗಳ ಹಿಂಡು‌ ದಾಳಿ ಮಾಡಿದೆ.  ಪುರಸಭೆ ಅಧಿಕಾರಿಗಳು ಬೀದಿ

ರಾಯಚೂರಿನಲ್ಲಿ ಕೋಟಿ ಕೋಟಿ ಹಣ ಎಗರಿಸಿ ಬ್ಯಾಂಕ್‌ ಮ್ಯಾನೇಜರ್‌ ಪರಾರಿ

ರಾಯಚೂರು ನಗರದ ಬ್ಯಾಂಕ್ ಆಫ್ ಮಹಾರಾಷ್ಟ್ರ ದ ಮ್ಯಾನೇಜರ್ ಅಕ್ರಮ ಖಾತೆಗಳು, ಗೋಲ್ಡ್ ಲೋನ್ ಮೂಲಕ ಹಲವು ವಂಚನೆಗಳನ್ನು ಮಾಡಿ ಕೋಟಿಗಟ್ಟಲೆ ಹಣ ಎಗರಿಸಿ ಪರಾರಿಯಾಗಿದ್ದಾರೆ. ನರೇಂದ್ರ ರೆಡ್ಡಿ ವಂಚನೆ‌ ಮಾಡಿ ಪರಾರಿಯಾಗಿರುವ ಬ್ಯಾಂಕ್ ಮ್ಯಾನೇಜರ್. 2022-2025 ರ ವರೆಗೆ ಯಾರಿಗೂ

ಮಸ್ಕಿ ಪುರಸಭೆಯಲ್ಲಿ ಅವ್ಯವಹಾರ: ಮುಖ್ಯಾಧಿಕಾರಿ ಅಮಾನತು

ರಾಯಚೂರಿನ ಮಸ್ಕಿ ಪುರಸಭೆಯಲ್ಲಿ ಪೀಠೋಪಕರಣ ಖರೀದಿಯಲ್ಲಿ ಅವ್ಯವಹಾರ ಪ್ರಕರಣ ಸಂಬಂಧ ತಪ್ಪಿತಸ್ಥ ಪುರಸಭೆ ಮುಖ್ಯಾಧಿಕಾರಿ ವಿರುದ್ಧ ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕ್ರಮ ಕೈಗೊಂಡು ಕರ್ತವ್ಯಲೋಪ, ಹಣ ದುರ್ಬಳಕೆ ಆರೋಪದಡಿ ಅಮಾನತುಗೊಳಿಸಿದ್ದಾರೆ. ರೆಡ್ಡಿರಾಯನಗೌಡ ಅಮಾನತುಗೊಂಡ ಹಿಂದಿನ ಮಸ್ಕಿ ಪುರಸಭೆ ಮುಖ್ಯ ಅಧಿಕಾರಿ. ಪ್ರಸ್ತುತ