ರಾಯಚೂರು
ಸಿಂಧನೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಒಂದುವರೆ ವರ್ಷದ ಮಗು ಬಲಿ
ರಾಯಚೂರಿನ ಸಿಂಧನೂರು ತಾಲೂಕಿನ ಕೆ.ಹಂಚಿಕಾಳ ಕ್ಯಾಂಪ್ ಪ್ರದೇಶದಲ್ಲಿ ಆರೇಳು ಬೀದಿನಾಯಿಗಳು ಮನೆ ಮುಂದೆ ಆಟವಾಡುತ್ತಿದ್ದ ಒಂದುವರೆ ವರ್ಷದ ಮಗುವಿನ ಮೇಲೆ ದಾಳಿ ಮಾಡಿವೆ. ತೀವ್ರ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅಸು ನೀಗಿದೆ. ಅನಂ ನಾಯಿಗಳ ದಾಳಿಗೆ ಬಲಿಯಾದ ಮಗು. ನಿದ್ದೆಯಿಂದ ಎದ್ದು ಹೊರಗಡೆ ಬಂದಿದ್ದ ಮಗು ಮನೆ ಮುಂದೆ ಆಟವಾಡುತ್ತಿತ್ತು. ಆರೇಳು ಬೀದಿ ನಾಯಿಗಳು ಏಕಕಾಲಕ್ಕೆ ದಾಳಿ ನಡೆಸಿ ಎಳೆದಾಡಿ ಮನಬಂದಂತೆ ಕಚ್ಚಿವೆ. ಸಿಂಧನೂರು ಗ್ರಾಮೀಣ
ಅಕ್ರಮ ಆಸ್ತಿ ಗಳಿಕೆ: ರಾಯಚೂರಿನಲ್ಲಿ ಲೋಕಾಯುಕ್ತ ದಾಳಿ
ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಕೃಷ್ಣ ಭಾಗ್ಯ ಜಲ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಬಸನಗೌಡ ಅವರಿಗೆ ಸೇರಿದ ನಾನಾ ಆಸ್ತಿಗಳ ಮೇಲೆ ಕರ್ನಾಟಕ ಲೋಕಾಯುಕ್ತ ಏಕಕಾಲದಲ್ಲಿ ದಾಳಿ ನಡೆಸಿದೆ. ಚಿಕ್ಕಹೊನ್ನಕುಣಿ ಪ್ರದೇಶದಲ್ಲಿರುವ ಅವರ ಕಚೇರಿ, ನಿವಾಸ ಹಾಗೂ ಪತ್ನಿ ಮತ್ತು ಸಂಬಂಧಿಕರಿಗೆ
ಕಟ್ಟಡ ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳ ಸಾವು
ರಾಯೂರಿನ ಬಸ್ನಿಲ್ದಾಣ ಹತ್ತಿರದ ವಿಆರ್ಎಲ್ ಕಚೇರಿ ಬಳಿ ಕಟ್ಟಡವೊಂದರ ಚಾವಣಿ ಕುಸಿದು ಸ್ಥಳದಲ್ಲಿಯೇ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ನಾಗರಾಜ್ ಕ್ಯಾದಿಗ್ಗೇರಾ (21), ರವಿ ಕುಮಾರ ಸಮುದ್ರ (22) ಸ್ಥಳದಲ್ಲಿಯೇ ಅಸು ನೀಗಿದ್ದು, ಅರ್ಜುನ್ ಎಂಬಾತ ರಿಮ್ಸ್ ಆಸ್ಪತ್ರೆಯಲ್ಲಿ
ದೇವದುರ್ಗದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಸ್ಟೇಬಲ್ ಕುಸಿದು ಸಾವು
ರಾಯಚೂರು ಜಿಲ್ಲೆಯ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ೩೭ ವರ್ಷದ ಪೊಲೀಸ್ ಕಾನ್ಸ್ಸ್ಟೇಬಲ್ ರೇಣುಕಾ ರಾಜ್ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಕುಸಿದು ಮೃತಪಟ್ಟಿದ್ದಾರೆ. ಅವರು ಮೊಹರಂ ಹಬ್ಬದ ಭದ್ರತೆಗೆ ನಿಯೋಜನೆಗೊಂಡಿದ್ದು, ಕರ್ತವ್ಯದಲ್ಲಿದ್ದಾಗ ತೀವ್ರ ಎದೆನೋವು ಹಾಗೂ ಎಡೆಗೈ ಸೆಳೆತ ಕಾಣಿಸಿಕೊಂಡಿತ್ತು. ಅಸ್ವಸ್ಥಗೊಂಡ ಅವರನ್ನು
ಅಪ್ರಾಪ್ತ ವಯಸ್ಕ ಸೋದರಿಯರ ಮೇಲೆ ಅತ್ಯಾಚಾರ: ಆರೋಪಿಯ ಬಂಧನ
ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಕ ಸೋದರಿಯರಿಬ್ಬರ ಮೇಲೆ ಬಾಬು ಎಂಬಾತ ಅತ್ಯಾಚಾರ ನಡೆಸಿದ್ದು, ಆತನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನಗರದ ವಾರ್ಡ್ ನಂ.30 ಬಳಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹತ್ತಿರ ಗೀತಾ ಐಸ್ ಫ್ಯಾಕ್ಟರಿಯಲ್ಲಿ
ಸರ್ಕಾರಿ ವಸತಿ ನಿಲಯದಲ್ಲಿ ಊಟ, ನೀರಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ
ರಾಯಚೂರು ಜಿಲ್ಲೆಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಕಳೆದ ಮೂರು ದಿನಗಳಿಂದ ಊಟ ಮತ್ತು ಕುಡಿಯುವ ನೀರಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದು, ಪ್ರತಿಭಟನೆ ಆರಂಭಿಸಿದ್ದಾರೆ. ಹಸಿವಿನಿಂದ ಕಂಗೆಟ್ಟ ನೂರಾರು ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಎದುರು
ತಂದೆ, ಆತನ ಸ್ನೇಹಿತನಿಂದ ಮಗಳ ಮೇಲೆ ಅತ್ಯಾಚಾರ
ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಜನತಾ ಕಾಲೋನಿಯಲ್ಲಿ ತಂದೆಯೊಬ್ಬ ಅಪ್ರಾಪ್ತ ವಯಸ್ಕ ಮಗಳ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಈ ಕೃತ್ಯವನ್ನು ಯಾರಿಗೂ ತಿಳಿಸಬಾರದು ಎಂದು ಮಗಳಿಗೆ ಬೆದರಿಕೆ ಹಾಕಿ ಬಾಯಿ ಮುಚ್ಚಿಸಿದ್ದ. ತಾಯಿಗೆ ವಿಷಯ ತಿಳಿಯಬಾರದೆಂದು ಮಗಳಿಗೆ
ಸಿಂಧನೂರಿನಲ್ಲಿ ಸಾಧುವೇಷದ ಕಳ್ಳ: ಮೆಡಿಕಲ್ ಮಾಲೀಕನಿಗೆ ಮಂಪರು ಬರಿಸಿ ಚಿನ್ನ, ನಗದು ಕಳವು
ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದ ಮೆಡಿಕಲ್ಗೆ ಬಂದ ಸಾಧು ವೇಷಧಾರಿ ಮಾಲೀಕನ ಬೆರಳಲಲಿದ್ದ ಚಿನ್ನದ ಉಂಗುರ, ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ವಿಷ್ಣು ದತ್ತ ಎಂಬವರ ಶ್ರೀ ಸಾಯಿ ಮೆಡಿಕಲ್ಗೆ ಬಂದ ಸಾಧು ವೇಷಧಾರಿ ಕುಡಿಯಲು ನೀರು ಬರುತ್ತಾನೆ, ವಿಷ್ಣು
ಯಾದಗಿರಿಯಲ್ಲಿ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾವು
ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆ ಗೋಡೆ ಕುಸಿದು ಎಂಟು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ತುಮಕೂರು ಗ್ರಾಮದ ಸಿದ್ದಪ್ಪ ಎಂಬವರ ಮನೆಯ ಗೋಡೆ ನಿರಂತರ ಮಳೆಗೆ ಕುಸಿದಿದೆ .ಈ ವೇಳೆ ಮನೆಯ
ಕೊಪ್ಪಳದಲ್ಲಿ ವೈಭವದ ಹುಲಿಗೆಮ್ಮ ದೇವಿ ರಥೋತ್ಸವ
ಕೊಪ್ಪಳ ಜಿಲ್ಲೆಯ ಐತಿಹಾಸಿಕ ಹುಲಿಗೆಮ್ಮ ದೇವಿ ರಥೋತ್ಸವವವು ಮೇ 11ರಂದು ಸಡಗರ, ಸಂಭ್ರಮದಿಂದ ನೆರವೇರಿತು. ಕೊಪ್ಪಳ ತಾಲೂಕಿನ ಸುಕ್ಷೇತ್ರ ಹುಲಿಗಿ ಗ್ರಾಮದಲ್ಲಿ ಗೋಧೂಳಿ ಸಮಯ ಸಂಜೆ ಸರಿಯಾಗಿ 5.30ಕ್ಕೆ ಆರಂಭಗೊಂಡ ರಥೋತ್ಸವದ ಚಾಲನಾ ಸಮಾರಂಭಕ್ಕೆ ಕೊಪ್ಪಳ ಸೇರಿದಂತೆ ಗಡಿ ಜಿಲ್ಲೆ ವಿಜಯನಗರ,




