Thursday, February 19, 2026
Menu

ಎಸ್ಟಿ ಯುವಕನ ಮದುವೆಯಾದ ಕುರುಬ ಯುವತಿಯ ಕೊಚ್ಚಿ ಕೊಲೆಗೆ ಯತ್ನಿಸಿದ ಸೋದರ

ಕೊಪ್ಪಳದ ಹಂದ್ರಾಳ ಗ್ರಾಮದಲ್ಲಿ ಎಸ್ಟಿ ಸಮುದಾಯದ ಯುವಕನನ್ನು ಮದುವೆಯಾಗಿ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಕುರುಬ ಸಮುದಾಯದ ಯುವತಿಯನ್ನು ಆಕೆಯ ಸೋದರ ಕೊಚ್ಚಿ ಕೊಲೆ ಮಾಡಲು ಯತ್ನಿಸಿ ವಿಫಲನಾಗಿದ್ದಾನೆ. 23 ವರ್ಷದ ಮೀನಾಕ್ಷಿ ಎರಡು ವರ್ಷಗಳ ಹಿಂದೆ ಎಸ್‌ಟಿ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದು, ನಾಲ್ಕು ತಿಂಗಳ ಗರ್ಭಿಣಿ, ಆಕೆಯನ್ನು ಸೋದರ ಮಂಜುನಾಥ್ ಕೊಡಲಿಯಿಂದ ಕೊಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಅದೃಷ್ಟವಶಾತ್ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಕೊಪ್ಪಳದ ಕುಕನೂರು ತಾಲೂಕು ವ್ಯಾಪ್ತಿಯ ಚಿತ್ತಾಪೂರ

ಕೌಟುಂಬಿಕ ಬಿಕ್ಕಟ್ಟು: ಕುಷ್ಟಗಿಯಲ್ಲಿ ಗ್ರಾ. ಪಂ ನೌಕರ ಆತ್ಮಹತ್ಯೆ

ಕೊಪ್ಪಳದ ಕುಷ್ಟಗಿ ತಾಲೂಕಿನ ಜಮಲಾಪೂರ ಗ್ರಾಮದಲ್ಲಿ ಗ್ರಾಮ ಪಂಚಾಯತ್​ ಡಿ ಗ್ರೂಪ್ ನೌಕರ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  ರಮೇಶ್ ದಂಡಿನ (35) ಆತ್ಮಹತ್ಯೆ ಮಾಡಿಕೊಂಡವರು. ತಾವರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸ್ತಿ ವಿಚಾರಕ್ಕೆ ಕಳೆದ

ಆಂಧ್ರ ಸಿಎಂ ಜೊತೆ ಮಾತಾಡಿ ಸಮುದ್ರ ಸೇರುವ ತುಂಗಭದ್ರಾ ನೀರನ್ನು ರೈತರಿಗೆ ಒದಗಿಸುವ ಪ್ರಯತ್ನ: ಡಿಸಿಎಂ 

ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು ನನಗೆ ಸಮಯಾವಕಾಶ ನೀಡುತ್ತಿಲ್ಲ. ಅವರು ನಮಗೆ

ಬಿಸಿಯೂಟದಲ್ಲಿ ಹಲ್ಲಿ: 50ಕ್ಕೂ ಅಧಿಕ ಮಕ್ಕಳು ಅಸ್ವಸ್ಥ, ಮನೆಯಲ್ಲಿ ಹೇಳದಂತೆ ಶಿಕ್ಷಕರ ಸೂಚನೆ

ಯಲಬುರ್ಗಾ ತಾಲೂಕಿನ ಚಿಕ್ಕಬನ್ನಿಗೋಳ ಗ್ರಾಮದಲ್ಲಿ ಗುರುವಾರ ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ ಗೊಂಡಿದ್ದಾರೆ. ಶಾಲೆ ಮುಗಿಸಿ ವಿದ್ಯಾರ್ಥಿಗಳು ಮನೆಗೆ ಬರುತ್ತಿದ್ದಂತೆ ಸುಸ್ತಾಗಿದ್ದನ್ನು ಗಮನಿಸಿ ಕೇಳಿದಾಗ ವಿದ್ಯಾರ್ಥಿಗಳು ಪಾಲಕರ ಬಳಿ ಹೇಳಿದ್ದಾರೆ,

ಕಿಮ್ಸ್ ಅಧಿಕಾರಿ ಕಲ್ಲೇಶ್ ನಿವಾಸ, ಕಾಲೇಜ್ ಸೇರಿ ಆರು ಕಡೆ ಲೋಕಾಯುಕ್ತ ದಾಳಿ

ಕೊಪ್ಪಳ: ವಾಲ್ಮೀಕಿ‌ ನಿಗಮದ ಹಗರಣದಲ್ಲಿ ಸುದ್ದಿಯಾಗಿದ್ದ ಪ್ರಸ್ತುತ ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆಡಳಿತಾಧಿಕಾರಿ ಬಿ.ಕಲ್ಲೇಶ್ ಅವರ ಮನೆ ಹಾಗೂ ಭಾಗ್ಯನಗರದ ಯತ್ನಟ್ಟಿ ರಸ್ತೆಯ ನವಚೇತನ ಪಿಯು ವಿಜ್ಞಾನ ಕಾಲೇಜು ಸೇರಿದಂತೆ ಆರು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಶುಕ್ರವಾರ

ಆಸ್ತಿಗಾಗಿ ಕಿರುಕುಳ: ಮಗನ ವಿರುದ್ಧ ದೂರಿತ್ತು ಎರಡೇ ದಿನದಲ್ಲಿ ತಂದೆ ಅನುಮಾನಾಸ್ಪದ ಸಾವು

ಮಗನ ವಿರುದ್ಧ ದೂರು ಕೊಟ್ಟ ಮರುದಿನವೇ ತಂದೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆಯೊಂದು ಕೊಪ್ಪಳದ ಕನಕಗಿರಿ ತಾಲೂಕಿನ ವರಣಖೇಡ ಗ್ರಾಮದಲ್ಲಿ ನಡೆದಿದೆ. ಆಸ್ತಿಗಾಗಿ ಮಗನೇ ತಂದೆಯ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ವೆಂಕೋಬಾ ಹಂಚಿನಾಳ (50) ಮೃತಪಟ್ಟವರು. ಅವರು ತಮ್ಮ ಜಮೀನಿನಲ್ಲಿ

ಲಿಂಗಸೂಗೂರಿನಲ್ಲಿ ಆಸ್ತಿಗಾಗಿ ತಾಯಿಯ ಕೊಲೆಗೈದ ಮಗ

ರಾಯಚೂರಿನ ಲಿಂಗಸೂಗೂರು ತಾಲೂಕಿನ ಜಕ್ಕೇರುಮಡು ತಾಂಡದಲ್ಲಿ ಆಸ್ತಿಗಾಗಿ ನಡೆದ ಕೌಟುಂಬಿಕ ಕಲಹದಲ್ಲಿ ಮಗನೊಬ್ಬನ ತಾಯಿಯ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಚಂದವ್ವ (55) ಕೊಲೆಯಾದ ಮಹಿಳೆ. ಕುಮಾರ ತಾಯಿಯನ್ನು ಕೊಲೆ ಮಾಡಿ ಪರಾರಿಯಾದವ. ಕುಮಾರ ಮದ್ಯದ ಅಮಲಿನಲ್ಲಿ ತಾಯಿಯ ತಲೆ

ಕಾಗಿನೆಲೆ ಶಾಖಾ ಮಠ ತಿಂಥಿಣಿ ಪೀಠದ ಸಿದ್ದರಾಮಾನಂದಪುರಿ ಸ್ವಾಮೀಜಿ ನಿಧನ

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಸಿದ್ದರಾಮಾನಂದಪುರಿ ಮಹಾಸ್ವಾಮಿ ನಿಧನರಾಗಿದ್ದಾರೆ. ಗುರುವಾರ ಬೆಳಗಿನ ಜಾವ 3:30ಕ್ಕೆ ಹೃದಯ ಸ್ತಂಭನಗೊಂಡು ಇಹಲೋಕ ತ್ಯಜಿಸಿದ್ದಾರೆ. ಜ.12, 13, 14 ರಂದು ಅದ್ಧೂರಿಯಾಗಿ ಹಾಲುಮತ ಸಂಸ್ಕೃತಿ ವೈಭವ

ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ; ಕಾನೂನು ಚೌಕಟ್ಟಿನಲ್ಲಿ ಕ್ರಮವೆಂದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಇತ್ತೀಚೆಗೆ ನಡೆದ ಘಟನೆಯ ಕುರಿತು ಕಾನೂನು ಚೌಕಟ್ಟಿನಲ್ಲಿ ಯಾವ ಕ್ರಮ ಕೈಗೊಳ್ಳಬೇಕು. ಅ ಎಲ್ಲಾ ಕ್ರಮವನ್ನು ಅನುಸರಿಸುವ ಮೂಲಕ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು. ರಾಯಚೂರು ನಗರದ ಹೊರವಲಯದ ನೂತನ

ಬಡವರ ಬದುಕಿಗೆ ಆಸರೆಯಾಗಿದ್ದ ನರೇಗಾ ಯೋಜನೆಯ ಸ್ವರೂಪವೇ ಬದಲು: ಸಿಎಂ ಸಿದ್ದರಾಮಯ್ಯ ಆತಂಕ

ಬಡವರ ಬದುಕಿಗೆ ಆಸರೆಯಾಗಿದ್ದ ನರೇಗಾ ಯೋಜನೆಯ ಸ್ವರೂಪವೇ ಬದಲಿಸಲಾಗಿದೆ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಕಾಯ್ದೆಯನ್ನು ಹೊಸ ಹೆಸರಲ್ಲಿ ಹೊಸ ಕಾಯ್ದೆಯೆಂದು ಘೋಷಿಸಿರುವ ಕೇಂದ್ರ ಸರ್ಕಾರ ಬಡವರು, ಮಹಿಳೆಯರು, ದಲಿತರು, ಸಣ್ಣ ರೈತರ ಬದುಕಿಗೆ ಬರೆ ಹಾಕಿದೆ