Wednesday, November 05, 2025
Menu

ಹೊಸಕೋಟೆ ರಸ್ತೆ ಬದಿ ಪೊದೆಯಲ್ಲಿ ನವಜಾತ ಶಿಶು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನವಜಾತ ಹೆಣ್ಣು ಶಿಶುವನ್ನು ಪಾಪಿಗಳು ರಸ್ತೆ ಬದಿ ಎಸೆದು ಹೋಗಿರುವುದು ಪತ್ತೆಯಾಗಿದೆ. ಜನಿಸಿದ ಕೆಲವೇ ಗಂಟೆಗಳಲ್ಲಿ ಹೆಣ್ಣು ಶಿಶು ಬೀದಿಪಾಲಾಗಿದೆ. ದುರುಳರು ಕಪ್ಪು ಬಣ್ಣದ ಬಟ್ಟೆಯಲ್ಲಿ ಕಟ್ಟಿ ಮಗುವನ್ನು ಪೊದೆಗೆ ಎಸೆದು ಹೋಗಿರುವುದು ಹೊಸಕೋಟೆ ನಗರದ ದೊಡ್ಡಕೆರೆ ಏರಿ ಬಳಿ ನಡೆದಿದೆ. ಸ್ಥಳೀಯರಿಂದ ಮಾಹಿತಿ ಲಭಿಸಿದ್ದರಿಂದ ಹೊಸಕೋಟೆ ಪೊಲೀಸರು ಸ್ಥಳಕ್ಕೆ ಬಂದು ಪರಿಶಿಲನೆ ನಡೆಸಿದ್ದಾರೆ. ಮಗುವಿನ ಹೊಕ್ಕುಳ ಬಳ್ಳಿ ಹಾಗೆಯೇ ಇತ್ತು, ಪೊದೆಯಲ್ಲಿ ಇದ್ದ

ಹಿಟ್‌ ಅಂಡ್‌ ರನ್‌: ದೊಡ್ಡಬಳ್ಳಾಪುರದಲ್ಲಿ ಯುವಕರಿಬ್ಬರು ಬಲಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಬಳಿ ಹಿಟ್​ ಅಂಡ್‌ ರನ್‌ಗೆ ಬೈಕ್​ ಸವಾರರಿಬ್ಬರು ಬಲಿಯಾಗಿದ್ದಾರೆ.  ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ತೂಬಗೆರೆ ನಿವಾಸಿ ನಂದನ್ ಕುಮಾರ್(22) ಮತ್ತು ದೊಡ್ಡತಿಮ್ಮನಹಳ್ಳಿಯ ರವಿಕುಮಾರ್(24) ಮೃತ ಯುವಕರು.

ಚನ್ನಪಟ್ಟಣದಲ್ಲಿ ನೀರಿನ ಟಬ್‌ಗೆ ಬಿದ್ದು ಮಗು ಸಾವು

ಚನ್ನಪಟ್ಟಣ ನಗರದ ಜೀವನ್ ಪುರ ನಗರದಲ್ಲಿ ನೀರಿನ ಟಬ್​ ಒಳಗೆ ಬಿದ್ದು 11 ತಿಂಗಳ ಮಗು ಮೃತಪಟ್ಟಿದೆ. ಶಂಷಾದ್ ಪಠಾಣ್ ಮತ್ತು ಮುಸ್ಕಾನ್ ದಂಪತಿಯ ಪುತ್ರಿ ಖುಷಿ ಮೃತ ಪಟ್ಟ ದುರ್ದೈವಿ. ಮಗು ಆಟವಾಡುವ ವೇಳೆ ಆಯತಪ್ಪಿ ನೀರಿಗೆ ಬಿದ್ದು ಅಸು

ಲೋಕಾಯುಕ್ತ ಅಧಿಕಾರಿಯೆಂದು ಬೆದರಿಸಿ ಹಣಕ್ಕೆ ಬೇಡಿಕೆ: ಆರೋಪಿ ಅರೆಸ್ಟ್‌

ರಾಮನಗರದ ಐಜೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ಹೆಸರಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬೆದರಿಸಿ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುರೇಗಪ್ಪ ಬಂಧಿತ ಆರೋಪಿ. ಮುರೇಗಪ್ಪ ಲೋಕಾಯುಕ್ತ ಅಧಿಕಾರಿ ಎಂದು ಹೇಳಿ ಮಾಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಕರೆ

ನೆಲಮಂಗಲದಲ್ಲಿ 24ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರ 24ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಲಸೂರು ಮೂಲದ ಲೋಕೇಶ್ ಪವನ್ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡವರು. ಲೋಕೇಶ್‌ನ ಅಕ್ಕ ಹಾಗೂ ಭಾವ ಇದೇ ಅಪಾರ್ಟ್ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ಭಾವ ಕೆಲಸದ ಮೇಲೆ ಹೊರಗೆ ಹೋಗಿದ್ದರು.

ಸಾಲ ಪಡೆದು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ, ಭವಿಷ್ಯದಲ್ಲಿ ಯಾರೇ ಅಧಿಕಾರಕ್ಕೆ ಬಂದರೂ ಸಾಲ ಮನ್ನಾ ಇಲ್ಲ: ಡಿಕೆ ಸುರೇಶ್‌ 

“ಬೆಳೆಸಾಲ,‌ ಹಸು ಸಾಲ ಪಡೆದು ಆರ್ಥಿಕವಾಗಿ ಸಬಲರಾಗಿ.‌ ಬೆಂಗಳೂರಿಗೆ ವಲಸೆ ಹೋಗಿ ಸೆಕ್ಯುರಿಟಿ ಗಾರ್ಡ್ ಗಳಾಗಿ, ಹೋಟೆಲ್ ಕೆಲಸ ಮಾಡಿಕೊಂಡು ಕಷ್ಟದಲ್ಲಿ ಜೀವನ ತಳ್ಳಬೇಡಿ. ಸ್ವಂತ ಊರಿನಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ” ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್  ಹೇಳಿದ್ದಾರೆ. ಬೆಂಗಳೂರು ಜಿಲ್ಲಾ

ಹುಣಸೂರಿನಲ್ಲಿ ಪರಿಹಾರ ಹಣಕ್ಕಾಗಿ ಪತಿಯ ಹತ್ಯೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿದ್ದ ಪತ್ನಿ ಅರೆಸ್ಟ್‌

ಹುಣಸೂರು ತಾಲೂಕಿನ ಚಿಕ್ಕಹೆಜ್ಜೂರಿನಲ್ಲಿ ಪತಿಯನ್ನು ಹತ್ಯೆ ಮಾಡಿ ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ನಂಬಿಸಿದ್ದ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಲ್ಲಾಪುರಿ ಎಂಬಾಕೆ ವಿಷ ಹಾಕಿ ಪತಿ ವೆಂಕಟಸ್ವಾಮಿಯನ್ನು ಕೊಲೆ ಮಾಡಿದ ಬಳಿಕ ನಾಟಕವಾಡಿದ್ದಾಳೆ. ಕಾಡುಪ್ರಾಣಿ ದಾಳಿಯಿಂದ ಮೃತಪಟ್ಟಿದ್ದಾರೆ ಅಂದರೆ ಪರಿಹಾರ

ಜಿಬಿಐಟಿ ಯೋಜನೆ ಭೂ ಸಂತ್ರಸ್ತ ರಿಗೆ ಎಕರೆಗೆ ₹1.50 ಕೋಟಿಯಿಂದ ₹2.50 ಕೋಟಿ ಪರಿಹಾರ: ಡಿಸಿಎಂ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಯೋಜನೆಯ ಭೂ ಸಂತ್ರಸ್ತ ರೈತರಿಗೆ ಆಯಾ ಜಮೀನಿನ ಮಾನದಂಡದ ಆಧಾರದ ಮೇಲೆ ಪ್ರತಿ ಎಕರೆಗೆ ₹1.50 ಕೋಟಿಯಿಂದ ₹2.50 ಕೋಟಿವರೆಗೂ ಪರಿಹಾರ ನೀಡಲು ತೀರ್ಮಾನಿಸಿಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ದಕ್ಷಿಣ

ಪೋಕ್ಸೋ ಪ್ರಕರಣ: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ದೇವನಹಳ್ಳಿ ಪೊಲೀಸ್‌

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಪೋಕ್ಸೋ ಪ್ರಕರಣ ಸಂಬಂಧ ಲಂಚ ಪಡೆಯುತ್ತಿದ್ದ ಪಿಸಿ ಅಂಬರೀಷ್ ಎಂಬವರು ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದಾರೆ. ಚಾರ್ಜ್ ಶೀಟ್ ಸ್ಟ್ರಾಂಗ್‌ ಮಾಡಲು ಪಿಎಸ್‌ಐ ಜಗದೇವಿ ಅವರು ಪಿಸಿ

ಸುಳ್ಳು ಸುದ್ದಿ ಬಿತ್ತರಿಸಿ ಸತ್ಯದ ಸಮಾಧಿ ಮಾಡುತ್ತಿರುವ ಸಿಂಡಿಕೇಟ್‌ ಪತ್ರಿಕೋದ್ಯಮ: ಪಿ. ತ್ಯಾಗರಾಜ್‌ ಕಳವಳ

ಸತ್ಯ ಮತ್ತು ವಾಸ್ತವಾಂಶ ಮರೆಮಾಚುವುದು, ತಮಗೆ ಬೇಕಾದುದನ್ನು ಮತ್ತು ಬೇಕಾದವರನ್ನು ವೈಭವೀಕರಿಸುವುದರಲ್ಲೇ ಇಂದಿನ ಸಿಂಡಿಕೇಟ್‌ ಪತ್ರಿಕೋದ್ಯಮ ಹೆಚ್ಚು ಸಕ್ರಿಯವಾಗಿದೆ. ಪೂರ್ವಗ್ರಹ ಪೀಡಿತರಾಗಿ ಸುದ್ದಿಗಳ ಸತ್ಯಾಸತ್ಯತೆ ಪರಿಶೀಲಿಸದೆ ಸುಳ್ಳು ಸುದ್ದಿಗಳನ್ನೇ ಮಾಧ್ಯಮಗಳಲ್ಲಿ ಬಿತ್ತರಿಸಿ ಸತ್ಯವನ್ನು ಸಮಾಧಿಗೊಳಿಸುವ ಆಗುತ್ತಿದೆ ಎಂದು ಹಿರಿಯ ಪತ್ರಕರ್ತ ಹಾಗೂ