Menu

ಪತ್ನಿ, ಮಕ್ಕಳಿದ್ದರೂ ವಿದ್ಯಾರ್ಥಿನಿ ಜೊತೆ ಎಸ್ಕೇಪ್‌ ಆಗಿದ್ದ ದೊಡ್ಡಬಳ್ಳಾಪುರ ಶಿಕ್ಷಕ ಅರೆಸ್ಟ್‌

ದೊಡ್ಡಬಳ್ಳಾಪುರ ನಗರದ ಪ್ರತಿಷ್ಠಿತ ಖಾಸಗಿ ಶಾಲೆಯ  ಶಿಕ್ಷಕ   ತನ್ನದೇ ವಿದ್ಯಾರ್ಥಿನಿ ಜೊತೆ ಓಡಿ ಹೋಗಿದ್ದು, ಈಗ ದೊಡ್ಡಬಳ್ಳಾಪುರ  ಪೊಲೀಸರ ಅತಿಥಿಯಾಗಿದ್ದಾನೆ. ದೊಡ್ಡಬಳ್ಳಾಪುರ ಶಾಲೆಯಲ್ಲಿ ಕನ್ನಡ ಮೇಷ್ಟ್ರಾಗಿರುವ ಪ್ರವೀಣ್‌ಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ. ಹೀಗಿದ್ದರೂ ವಿದ್ಯಾರ್ಥಿನಿ ಬಾಳಲ್ಲಿ ಚೆಲ್ಲಾಟವಾಡಿದ್ದಾನೆ. ಎನ್‌ಸಿಸಿ ತರಬೇತಿಯ ಜೊತೆ ಕನ್ನಡ ಪಾಠ ಮಾಡುತ್ತ ಶಿಸ್ತಿನ ಪಾಠ ಹೇಳಿಕೊಡಬೇಕಿದ್ದ ಶಿಕ್ಷಕ, ವಿದ್ಯಾರ್ಥಿನಿಯ ಜೊತೆಯಲ್ಲೇ ಹಲವು ವರ್ಷಗಳಿಂದ ಪ್ರೀತಿ ಪ್ರೇಮ ಅಂತ ಪ್ರಣಯದಾಟ ಆಡಿಕೊಂಡಿದ್ದ ಎನ್ನಲಾಗಿದೆ. ವಿದ್ಯಾರ್ಥಿನಿಯ ಮನೆಯವರು

ಪತಿಯ ಕೊಲೆ ಮಾಡಿಸಿ ಆತ್ಮಹತ್ಯೆಯೆಂದು ನಂಬಿಸಿದ್ದ ಗ್ರಾ.ಪಂ ಸದಸ್ಯೆ ಅರೆಸ್ಟ್‌

ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರದೊಡ್ಡಿ ಗ್ರಾಮದಲ್ಲಿ ಗ್ರಾ.ಪಂ ಸದಸ್ಯೆ ಚಂದ್ರಕಲಾ ಪತಿ ಲೋಕೇಶ್ ಸಾವು ಆತ್ಮಹತ್ಯೆ ಅಲ್ಲ ಕೊಲೆ ಎಂಬುದನ್ನು ಪೊಲೀಸ್‌ ತನಿಖೆ ಬಹಿರಂಗಪಡಿಸಿದೆ. ಹೆಂಡತಿಯೇ ಪ್ರಿಯಕರನ ಜೊತೆ ಸೇರಿ ಆತನ ಕೊಲೆ ಮಾಡಿರುವುದು ಬಯಲಾಗಿದೆ. ಜೂ. 24ರಂದು ಕೃಷ್ಣಾಪುರದೊಡ್ಡಿ ಗ್ರಾಮದಲ್ಲಿ ಗ್ರಾ.ಪಂ

ರಾಜ್ಯದಿಂದ ಕೇಂದ್ರಕ್ಕೆ100 ರೂ. , ವಾಪಸ್‌ 13 ರೂ. ಮಾತ್ರ: ಆದರೂ ತುಟಿ ಬಿಚ್ಚದ ಬಿಜೆಪಿ ಸಂಸದರ ವಿರುದ್ಧ ಡಿಕೆ ಶಿವಕುಮಾರ್‌ ಆಕ್ರೋಶ

ಕರ್ನಾಟಕದವರು ಕೇಂದ್ರಕ್ಕೆ 100 ರೂಪಾಯಿ ಕೊಟ್ಟರೆ ನಮಗೆ ಮರಳಿ ಬರುತ್ತಿರುವುದು ಕೇವಲ 13 ರೂಪಾಯಿ ಮಾತ್ರ.  ಕಾಂಗ್ರೆಸ್ ಸರ್ಕಾರ ಇದ್ದಾಗ 450 ರೂ. ಇದ್ದ ಅಡುಗೆ ಸಿಲಿಂಡರ್ ಬೆಲೆ ಈಗ 1 ಸಾವಿರ ಮುಟ್ಟಿದೆ. ಇದೇ ಕೇಂದ್ರದ ಸಾಧನೆ.ಆದರೆ ಒಬ್ಬನೇ ಒಬ್ಬ

Yettinahole-ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ವಿರೋಧಿಸಿ ರೈತರ ಪ್ರತಿಭಟನೆ

ದೊಡ್ಡಬಳ್ಳಾಪುರದ ರೈತರು ಎತ್ತಿನಹೊಳೆ ಯೋಜನೆಯ ಭಾಗವಾಗಿ ಲಕ್ಕೇನ ಹಳ್ಳಿಯಲ್ಲಿ ಜಲಾಶಯ ನಿರ್ಮಾಣ  ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಅಣೆಕಟ್ಟೆ ನಿರ್ಮಾಣದಿಂದಾಗಿ ಕೃಷಿ ಭೂಮಿ ಮುಳುಗಡೆಯಾಗುವ ಮತ್ತು ಸ್ಥಳಾಂತರಗೊಳ್ಳುವ ಭಯದಿಂದ ಸಸರಪಾಳ್ಯ, ಶ್ರೀರಾಮನಹಳ್ಳಿ ಮತ್ತು ಇತರ ಗ್ರಾಮಗಳ ಸ್ಥಳೀಯರು ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಈ ಯೋಜನೆಯಿಂದ

ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಒಬಿಸಿಗಳು: ಡಿಸಿಎಂ

ದೇಶದಲ್ಲಿ ಒಬಿಸಿಗಳ ಸಂಖ್ಯೆ ವ್ಯಾಪಕವಾಗಿದೆ. ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಒಬಿಸಿಗಳು. ಸಮಾಜದಲ್ಲಿ ಹಿಂದುಳಿದ ವರ್ಗಗಳ ಜನರನ್ನು ಮುನ್ನಲೆಗೆ  ತರಬೇಕು ಎಂದು ಒಬಿಸಿ ಸಲಹಾ ಸಮಿತಿ ಸಭೆ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕನಕಪುರದ ಬಿಜ್ಜಹಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ

ಬಾಳೆ ಹೊನ್ನೂರು ಪೀಠದ ಗಂಗಾಧರ ಸ್ವಾಮೀಜಿ ನನ್ನ ಜೀವನವನ್ನೇ ಬದಲಿಸಿದವರು: ಡಿಕೆ ಶಿವಕುಮಾರ್‌

ಬಾಳೆ ಹೊನ್ನೂರು ಪೀಠದ ಗಂಗಾಧರ ಸ್ವಾಮೀಜಿಗಳು ನನ್ನ ಜೀವನವನ್ನೇ ಬದಲಿಸಿದವರು. ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ ಪದುಭನಾಭನ ಪಾದ ಭಜನೆ ಪರಮ ಸುಖವಯ್ಯ ಎಂಬ ಪುರಂದರ ದಾಸರ ಪದಗಳಂತೆ, ಇಂದು ಈ ಚಿಕ್ಕದಾದ, ಚೊಕ್ಕದಾದ ಧಾರ್ಮಿಕ ಕಾರ್ಯಕ್ರಮಕ್ಕೆ ರಂಭಾಪುರಿ

Heart Attack: ಎದೆನೋವು ಎನ್ನುತ್ತ ಹೊಸಕೋಟೆ ಆಸ್ಪತ್ರೆ ಪ್ರವೇಶಿಸಿದ ವ್ಯಕ್ತಿ ಕುಸಿದು ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಸಿಲಿಕಾನ್ ಸಿಟಿ ಆಸ್ಪತ್ರೆಗೆ ಎದೆನೋವು ಎನ್ನುತ್ತ ಬಂದ ವ್ಯಕ್ತಿಯೊಬ್ಬರಿಗೆ ಚಿಕಿತ್ಸೆ ನೀಡಲು ಹಾಸಿಗೆ ಮೇಲೆ ಮಲಗಿಸಿದ ಕೆಲವೇ ನಿಮಿಷಗಳಲ್ಲಿ  ಹೃದಯ ಸ್ತಂಭನಗೊಂಡು  ಮೆದುಳು ನಿಷ್ಕ್ರಿಯಗೊಂಡಿದೆ. ಇಂದು ಬೆಳಿಗ್ಗೆ 52 ವರ್ಷದ ಕೋನಪ್ಪ ಎಂಬವರು ಎದೆ

Accident Deaths: ದೊಡ್ಡಬಳ್ಳಾಪುರದಲ್ಲಿ ಓವರ್‌ ಟೇಕ್‌ ಮಾಡಲು ಹೋಗಿ ಕಾರಿನಲ್ಲಿದ್ದ ನಾಲ್ವರ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬಳಿ ಲಾರಿ ಓವರ್ ಟೇಕ್ ಮಾಡಲು ಹೋಗಿ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗ್ಗೆ ದೇವಸ್ಥಾನಕ್ಕೆಂದು ಕಾರಿನಲ್ಲಿ 8 ಮಂದಿ ತೆರಳುತ್ತಿದ್ದಾಗ ನಡೆದ ಈ ಅಪಘಾತದಲ್ಲಿ ನಾಲ್ವರು

Suicide: ದೊಡ್ಡಬಳ್ಳಾಪುರದಲ್ಲಿ ಪ್ರೀತಿಸಿದಾಕೆಯ ಕಿರುಕುಳಕ್ಕೆ ನೊಂದು ಯುವಕ ಆತ್ಮಹತ್ಯೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲೂಕಿನ ರಾಜಘಟ್ಟ ಗ್ರಾಮದ ಕೆರೆ ಬಳಿ ಪ್ರೀತಿಸಿದ ಯುವತಿಯ ಕಿರುಕುಳ ತಾಳಲಾಗದೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೂ.13ರಂದು ಈ ಘಟನೆ ನಡೆದಿದ್ದು, ಸೆಲ್ಫಿ ವೀಡಿಯೊ ಮಾಡಿದ ಮಂಜುನಾಥ್,​ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ವೀಡಿಯೊ

ಮದ್ದೂರು ವಿದ್ಯಾರ್ಥಿನಿಯ ಶವ ಚನ್ನಪಟ್ಟಣ ಕೆರೆಯಲ್ಲಿ ಪತ್ತೆ

ಚನ್ನಪಟ್ಟಣ ತಾಲೂಕಿನ ಸಿಂಗರಾಜಿಪುರ ಕೆರೆಯಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯು ಶವ ಪತ್ತೆಯಾಗಿದೆ. ಮದ್ದೂರು ತಾಲೂಕಿನ ಅಂಬರಹಳ್ಳಿ ಗ್ರಾಮದ ಮಹಾಲಕ್ಷ್ಮೀ (20) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ರಾಮನಗರದ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡ್ತಿದ್ದು, ಗುರುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದರು. ಬಳಿಕ ಸಂಜೆಯ