Wednesday, August 05, 2026
Menu

ಶಿವಮೊಗ್ಗ ಕೋರ್ಟ್‌ಗೆ ಮತ್ತೆ ಬಾಂಬ್‌ ಬೆದರಿಕೆ

ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಈ ಮೇಲ್ ಮೂಲಕ  ಮತ್ತೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಜಿಲ್ಲಾ ಪೊಲೀಸ್ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಕಳೆದ ಗುರುವಾರ ಜಿಲ್ಲಾ ಮುಖ್ಯ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ವ್ಯಕ್ತಿಯಿಂದ ಶಿವಮೊಗ್ಗ ನ್ಯಾಯಾಲಯದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಇಮೇಲ್ ಕರೆ ಬಂದಿತ್ತು.  ಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ಜಿಲ್ಲಾ ಪೊಲೀಸ್‌ ಬಿಗಿಕ್ರಮ ಕೈಗೊಂಡಿತ್ತು. ಅದು ಹುಸಿ ಕರೆ ಎಂಬುದು ಗೊತ್ತಾಗಿತ್ತು. ಅದಾದ ಬಳಿಕ ಜೂನ್‌ 27ರ

ನನಗೆ ಸಚಿವ ಸ್ಥಾನ: ಹೈಕಮಾಂಡ್‌ಗೆ ಬಿಟ್ಟ ವಿಷಯವೆಂದ ಮಧುಬಂಗಾರಪ್ಪ

ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನಲ್ಲ, ನನಗೆ ಸಚಿವಸ್ಥಾನ ನೀಡುವುದು, ಬಿಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂದು ಮಾಜಿ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಕೆಲಸ ಮಾಡಿದ ಶಿಕ್ಷಣ ಇಲಾಖೆಗೆ ಕೇಂದ್ರ ಸರ್ಕಾರದಿಂದ ಯಾವ

ಶಿವಮೊಗ್ಗ ನೀರಾವರಿ ಯೋಜನೆಗಳಿಗೆ ಅನುದಾನ: ರಾಮಲಿಂಗಾರೆಡ್ಡಿಗೆ ಬಿವೈರಾಘವೇಂದ್ರ ಮನವಿ

ಶಿವಮೊಗ್ಗ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಕಾಯಕಲ್ಪ ಒದಗಿಸಲು ಮತ್ತು ಬಾಕಿ ಬಿಲ್ ಪಾವತಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾದ ಸಂಸದ

ಸಿಇಟಿಯಲ್ಲಿ ಕಡಿಮೆ ಅಂಕ: ಯುವಕ ಆತ್ಮಹತ್ಯೆ

ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಮನನೊಂದು 20 ದಿನಗಳ ಹಿಂದೆ ಕಳೆನಾಶಕ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ‌ ನಡೆದಿದೆ. 18 ವರ್ಷದ ಜಯಂತ್‌ ಎಂಬ ವಿದ್ಯಾರ್ಥಿ ಮೃತಪಟ್ಟವ, ಶಿಕಾರಿಪುರ ಪಟ್ಟಣದ ವಿನಾಯಕನಗರ ವಾಸಿ ಖಾಸಗಿ

ಕೊಡಚಾದ್ರಿಗೆ ಟ್ರಕ್ಕಿಂಗ್‌ ಹೋಗಿದ್ದ ಬಾಮಾ ಹರೀಶ್‌ ಪುತ್ರ ಉಲ್ಲಾಸ್‌ ಹೃದಯಾಘಾತಕ್ಕೆ ಬಲಿ

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಹಾಗೂ ಕರ್ನಾಟಕ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಬಾಮಾ ಹರೀಶ್​​ ಪುತ್ರ ಉಲ್ಲಾಸ್ (28) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಉಲ್ಲಾಸ್ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಗಿರಿಗೆ ಟ್ರಕ್ಕಿಂಗ್‌ಗೆ ತೆರಳಿದ್ದಾಗ ಹಠಾತ್ ಹೃದಯಾಘಾತಕ್ಕೆ ಒಳಗಾಗಿದ್ದು  ನಗರ

ಸರ್ಕಾರಿ ಜಾಗ ಪರಭಾರೆ ಆರೋಪ: ಶಿವಮೊಗ್ಗ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗ ನಗರದ ತಾಲೂಕು ಕಚೇರಿಯ ಆಡಳಿತ ವಿಭಾಗದ ಮೇಲೆ ಲೋಕಾಯುಕ್ತ ಅಧಿಕಾರಿಗಳು  ಸರ್ಚ್ ವಾರಂಟ್‌ನೊಂದಿಗೆ ದಿಢೀರ್ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ಆರಂಭಿಸಿದ್ದಾರೆ. ಶಿವಮೊಗ್ಗದ ಗೋವಿಂದಾಪುರದಲ್ಲಿ 11 ಎಕರೆ ವಿಸ್ತೀರ್ಣದ ಸರ್ಕಾರಿ ಜಾಗವನ್ನು ಖಾಸಗಿಯವರಿಗೆ ಪರಭಾರೆ ಮಾಡಲು ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ

ಶಿವಮೊಗ್ಗದಲ್ಲಿ ರೌಡಿಶೀಟರ್‌ ಮುಖ ಗುರುತು ಸಿಗದಂತೆ ಕೊಚ್ಚಿ ಕೊಲೆಗೈದ ಐವರ ಬಂಧನ

ಶಿವಮೊಗ್ಗ ನಗರದ ಗಾಂಧಿ ಬಜಾರ್ 1ನೇ ಕ್ರಾಸ್‌ನ ಕರಿದೇವರ ಕೇರಿಯಲ್ಲಿ ರೌಡಿಶೀಟರ್ ನರಸಿಂಹ (39) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣ ಸಂಬಂಧ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಅಂಬು ಅನಿಲ್, ಮಧು, ರವಿ, ಹಾಗೂ ಕತ್ತೆ ಕಾರ್ತಿಕ್​,

ಸಕಲೇಶ​​ಪುರದ ಯುವಕ ಶಿವಮೊಗ್ಗದಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಸಕಲೇಶ​​ಪುರದ ಯುವಕನೊಬ್ಬ ಶಿವಮೊಗ್ಗ ನಗರದ ಹೊರವಲಯದ ಪುರಲೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಂಕೇತ್​​ (19) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಸಂಕೇತ್  ಐಟಿಐ ವ್ಯಾಸಂಗವನ್ನು ಮುಗಿಸಿ ಯಾವುದೇ ಕೆಲಸಕ್ಕೆ ಸೇರದೆ ಮನೆಯಲ್ಲೇ ಇದ್ದ.  ತಂದೆ ಕೆಲಸಕ್ಕೆ

ಸಿಗಂದೂರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

ಶಿವಮೊಗ್ಗದ ಸಾಗರದಲ್ಲಿರುವ ಸಿಗಂದೂರು ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನದಿ ಸೇತುವೆ ಬಳಿ ನಡೆದಿದೆ. ಆಂಧ್ರಪ್ರದೇಶ ಮೂಲದ ಉಮೇಶ್ (35) ಮುಳುಗಿ ಮೃತಪಟ್ಟವರು. ಆಂಧ್ರದ ಅನಂತಪುರ ಜಿಲ್ಲೆಯ ರಾಯದುರ್ಗ ತಾಲೂಕು ಗಲಗಲಿ ಗ್ರಾಮದ ಉಮೇಶ್ ಕುಟುಂಬಸ್ಥರು

ಶೃಂಗೇರಿ ಮರು ಮತ ಎಣಿಕೆ ರದ್ದುಗೊಳಿಸಿದ ಸುಪ್ರೀಂ: ಕಾಂಗ್ರೆಸ್‌ನ ರಾಜೇಗೌಡ ಶಾಸಕರಾಗಿ ಮುಂದುವರಿಕೆ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ಆದೇಶ ನೀಡಿದೆ. ಹೈಕೋರ್ಟ್ ಸೂಚನೆಯಂತೆ ಇತ್ತೀಚೆಗೆ ನಡೆದಿದ್ದ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಗೆಲುವು ಸಾಧಿಸಿದ್ದರು. ಈಗ ಸುಪ್ರೀಂ ಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿದೆ.