ಶಿವಮೊಗ್ಗ
ಶಿವಮೊಗ್ಗದಲ್ಲಿ ರೌಡಿಶೀಟರ್ ಮುಖ ಗುರುತು ಸಿಗದಂತೆ ಕೊಚ್ಚಿ ಕೊಲೆಗೈದ ಐವರ ಬಂಧನ
ಶಿವಮೊಗ್ಗ ನಗರದ ಗಾಂಧಿ ಬಜಾರ್ 1ನೇ ಕ್ರಾಸ್ನ ಕರಿದೇವರ ಕೇರಿಯಲ್ಲಿ ರೌಡಿಶೀಟರ್ ನರಸಿಂಹ (39) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣ ಸಂಬಂಧ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಅಂಬು ಅನಿಲ್, ಮಧು, ರವಿ, ಹಾಗೂ ಕತ್ತೆ ಕಾರ್ತಿಕ್, ಶಬರೀಶ್ ಬಂಧಿತರು. ಆರೋಪಿಗಳನ್ನು ಪೊಲೀಸರು ಶಿವಮೊಗ್ಗ ಕೋಟೆ ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಅಡಿಷನಲ್ ಎಸ್ಪಿ ನೇತೃತ್ವದ ವಿಶೇಷ ತಂಡ ಕಾರ್ಯಾಚರಣೆ ಕೈಗೊಂಡ 24 ಗಂಟೆ
ಸಕಲೇಶಪುರದ ಯುವಕ ಶಿವಮೊಗ್ಗದಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ
ಹಾಸನ ಜಿಲ್ಲೆಯ ಸಕಲೇಶಪುರದ ಯುವಕನೊಬ್ಬ ಶಿವಮೊಗ್ಗ ನಗರದ ಹೊರವಲಯದ ಪುರಲೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಂಕೇತ್ (19) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಸಂಕೇತ್ ಐಟಿಐ ವ್ಯಾಸಂಗವನ್ನು ಮುಗಿಸಿ ಯಾವುದೇ ಕೆಲಸಕ್ಕೆ ಸೇರದೆ ಮನೆಯಲ್ಲೇ ಇದ್ದ. ತಂದೆ ಕೆಲಸಕ್ಕೆ
ಸಿಗಂದೂರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು
ಶಿವಮೊಗ್ಗದ ಸಾಗರದಲ್ಲಿರುವ ಸಿಗಂದೂರು ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನದಿ ಸೇತುವೆ ಬಳಿ ನಡೆದಿದೆ. ಆಂಧ್ರಪ್ರದೇಶ ಮೂಲದ ಉಮೇಶ್ (35) ಮುಳುಗಿ ಮೃತಪಟ್ಟವರು. ಆಂಧ್ರದ ಅನಂತಪುರ ಜಿಲ್ಲೆಯ ರಾಯದುರ್ಗ ತಾಲೂಕು ಗಲಗಲಿ ಗ್ರಾಮದ ಉಮೇಶ್ ಕುಟುಂಬಸ್ಥರು
ಶೃಂಗೇರಿ ಮರು ಮತ ಎಣಿಕೆ ರದ್ದುಗೊಳಿಸಿದ ಸುಪ್ರೀಂ: ಕಾಂಗ್ರೆಸ್ನ ರಾಜೇಗೌಡ ಶಾಸಕರಾಗಿ ಮುಂದುವರಿಕೆ
ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ಆದೇಶ ನೀಡಿದೆ. ಹೈಕೋರ್ಟ್ ಸೂಚನೆಯಂತೆ ಇತ್ತೀಚೆಗೆ ನಡೆದಿದ್ದ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಗೆಲುವು ಸಾಧಿಸಿದ್ದರು. ಈಗ ಸುಪ್ರೀಂ ಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿದೆ.
ಪ್ರೀತಿ ನಿರಾಕರಣೆ, ಪ್ರಿಯತಮೆ ಕುಟುಂಬದಿಂದ ಹಲ್ಲೆ: ವಿಷ ಸೇವಿಸಿ ಯುವಕ ಸುಸೈಡ್
ಪ್ರಿಯತಮೆಯಿಂದ ಪ್ರೀತಿ ನಿರಾಕರಣೆ ಹಾಗೂ ಆಕೆಯ ಕುಟುಂಬದವರಿಂದ ಹಲ್ಲೆಗೆ ಒಳಗಾಗಿ ನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿಕಾರಿಪುರ ನಿವಾಸಿ ಶಬರೀಶ್ (28) ಆತ್ಮಹತ್ಯೆ ಮಾಡಿಕೊಂಡವ. ರ್ಥಹಳ್ಳಿಯಲ್ಲಿ ಟೈಲ್ಸ್ ಕೆಲಸ ಮಾಡುತ್ತಿದ್ದ ಆತ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು
ಕೊರಳಿಗೆ ಸುತ್ತಿಕೊಂಡ ಜೋಕಾಲಿಗೆ ಶಿವಮೊಗ್ಗದಲ್ಲಿ ಬಾಲಕಿ ಬಲಿ
ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ಜೋಕಾಲಿ ಆಡುತ್ತಿದ್ದಾಗ ಕುಣಿಗೆ ಕುತ್ತಿಗೆಗೆ ಬಿಗಿದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಮೂರು ದಿನಗಳ ಹಿಂದೆ ಈ ದುರಂತ ಸಂಭವಿಸಿದು, ತಡವಾಗಿ ಬಹಿರಂಗಗೊಂಡಿದೆ. ಒಂಬತ್ತು ವರ್ಷದ ಪ್ರಣಮ್ಯ ಮೃತಪಟ್ಟ ಬಾಲಕಿ. ಬೇಸಿಗೆ ರಜೆಯ ಕಾರಣ ವಿದ್ಯಾನಗರದಿಂದ ಲಕ್ಕಿನಕೊಪ್ಪದ ಚಿಕ್ಕಮ್ಮನ ಮನೆಗೆ
ಹುಲಿಕಲ್ ಘಾಟ್ ಗುಡ್ಡ ಕುಸಿತ: ಮೂವರು ಕಾರ್ಮಿಕರ ಶವಗಳೂ ಪತ್ತೆ
ಶಿವಮೊಗ್ಗದ ಹುಲಿಕಲ್ ಘಾಟ್ನಲ್ಲಿ ಗುಡ್ಡ ಕುಸಿದು ಮೃತಪಟ್ಟಿದ್ದವರಲ್ಲಿ ಮತ್ತೊಬ್ಬ ಕಾರ್ಮಿಕನ ಶವ ಪತ್ತೆಯಾಗಿದೆ. ಇಬ್ಬರ ಶವ ಈಗಾಗಲೇ ಪತ್ತೆಯಾಗಿತ್ತು. ಶುಕ್ರವಾರ ಮುಂಜಾನೆ 3 ಗಂಟೆ ಕಾರ್ಮಿಕ ಶಬ್ಬೀರ್ (40) ಮೃತದೇಹ ಸಿಕ್ಕಿದೆ. ಘಾಟ್ನ ಹೇರ್ ಪಿನ್ ಕ್ರಾಸ್ ನಲ್ಲಿ ಕಾಂಕ್ರೀಟ್ ವಾಲ್
ಆರನೇ ಕ್ಲಾಸ್ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ
ಶಿವಮೊಗ್ಗ ನಗರದ ಬೊಮ್ಮನ ಕಟ್ಟೆ ಬಡಾವಣೆಯ ಎ- ಬ್ಲಾಕ್ನಲ್ಲಿ ಆರನೇ ಕ್ಲಾಸ್ನಲ್ಲಿ ಓದುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಪೋಷಕರೊಂದಿಗೆ ವಾಸ ಮಾಡುತ್ತಿದ್ದ 12 ವರ್ಷದ ಜೀವಿತಾ ಮೃತಪಟ್ಟವಳು. ಆಕೆ ಬೊಮ್ಮನ ಕಟ್ಟೆಯ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿಯಲ್ಲಿ
ಕೊಲೆ ಆರೋಪಿ ಕಮಲಾಕರ್ ಭಟ್ಗೆ ಪೋಕ್ಸೊ ಸಂಕಷ್ಟ
ಮಹಿಳೆಯೊಂದಿಗೆ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯ ಕೊಲೆ ಪ್ರಕರಣದ ಆರೋಪಿಯಾಗಿರುವ ಜ್ಯೋತಿಷಿ ಕಮಲಾಕರ್ ಭಟ್ ಇದೀಗ ಪೋಕ್ಸೋ ಪ್ರಕರಣದಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಮಲಾಕರ್ ಭಟ್ನನ್ನು ಎರಡು ದಿನ ಶಿವಮೊಗ್ಗದ ಪೊಲೀಸರ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ. ಕಮಲಾಕರ್ ಭಟ್ನನ್ನು ತುಂಗಾ ನಗರ
ಗಾಜನೂರು ರೆಸಾರ್ಟ್ನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಮಹಿಳೆ ಬಲಿ
ಶಿವಮೊಗ್ಗದ ಗಾಜನೂರು ಬಳಿಯ ತುಂತುರು ರೆಸಾರ್ಟ್ನಲ್ಲಿ ವಿದ್ಯುತ್ ಶಾಕ್ಗೆ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಅಬ್ಬಲಗೆರೆ ಗ್ರಾಮದ ನಿವಾಸಿ ನಾಗಮ್ಮ (45) ಮೃತಪಟ್ಟವರು. ರೆಸಾರ್ಟ್ನಲ್ಲಿ ನಡೆಯುತ್ತಿದ್ದ ನಿಶ್ಚಿತಾರ್ಥ ಕಾರ್ಯಕ್ರಮದ ಕ್ಯಾಟರಿಂಗ್ ಕೆಲಸಕ್ಕೆ ನಾಗಮ್ಮ ತೆರಳಿದ್ದರು. ರೆಸಾರ್ಟ್ ಅಲಂಕಾರಕ್ಕಾಗಿ ಅಳವಡಿಸಲಾಗಿದ್ದ ಲೈಟಿಂಗ್ನಿಂದಾಗಿ ಬೇಲಿಗೆ ವಿದ್ಯುತ್ ಪ್ರವಹಿಸಿತ್ತು,




