ತುಮಕೂರು
ತುಮಕೂರಿನಲ್ಲಿ ಬಾಲಕಿ ಎದುರೇ ತಂದೆಯ ಕೊಲೆಗೈದಿದ್ದ ಕಳ್ಳರು ಅರೆಸ್ಟ್
ತುಮಕೂರಿನಲ್ಲಿ ಮಗಳ ಜೊತೆ ಮನೆ ಮುಂದೆ ಕುಳಿತಿದ್ದ ಮಂಜುನಾಥ್ ಎಂಬ ವ್ಯಕ್ತಿಯನ್ನು ಅಪರಿಚಿತ ಮುಸುಕುಧಾರಿಗಳು ಕೊಲೆಗೈದು ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು 48 ಗಂಟೆಗಳಲ್ಲಿ ಬಂಧಿಸಿದ್ದಾರೆ. ತಮಿಳುನಾಡಿನ ಸತೀಶ, ಕೇಶವನ್, ಕವಿತೇಶ್ವರನ್ ಹಾಗೂ ಅರುಣ್ ಬಂಧಿತ ಆರೋಪಿಗಳಾಗಿದ್ದು, ಬೆಂಗಳೂರಿನ ಆನೇಕಲ್ ಭಾಗದ ಅತ್ತಿಬೆಲೆಯ ನಿವಾಸಿಗಳು. ರಾಜ್ಯದ ಹಲವೆಡೆ ಕಳ್ಳತನ ಮಡಿರುವ ಈ ಆರೋಪಿಗಳು ಚಿಕ್ಕನಾಯಕನಹಳ್ಳಿಯ ಕೆಂಕೆರೆಗೆ ಬಂದು ಮಂಜುನಾಥ್ ಮನೆಯ ಕಳ್ಳತನಕ್ಕೆ ಹೊಂಚು ಹಾಕಿದ್ದರು. ಜನವರಿ 11
ಪ್ರತಿದಿನ ಶಾಲೆಗೆ ಹೋಗಿ ಸರಿಯಾಗಿ ಓದು ಎಂದು ಬುದ್ಧಿ ಹೇಳಿದ್ದಕ್ಕೆ ಬಾಲಕ ಆತ್ಮಹತ್ಯೆ
ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ಹೋಬಳಿಯಲ್ಲಿ “ಶಾಲೆ ತಪ್ಪಿಸಬೇಡ, ಪ್ರತಿದಿನ ಶಾಲೆಗೆ ಹೋಗು ಹೋಗಿ ಸರಿಯಾಗಿ ಓದು” ಎಂದು ತಂದೆ ಬುದ್ಧಿಮಾತು ಹೇಳಿದ್ದಕ್ಕೆ ನೊಂದುಕೊಂಡ ಎಂಟನೇ ತರಗತಿಯ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚೆನ್ನಕಾಟಯ್ಯನ ಗುಡ್ಲು ನಿವಾಸಿ
ತುಮಕೂರಿನಲ್ಲಿ ಪಿರಿಯಡ್ಸ್ ಹೊಟ್ಟೆ ನೋವು ತಾಳಲಾಗದೆ ಯುವತಿ ಸುಸೈಡ್
ತುಮಕೂರು ಜಿಲ್ಲೆಯ ಬ್ಯಾತ ಗ್ರಾಮದಲ್ಲಿ ಯುವತಿಯೊಬ್ಬಳು ಋತುಸ್ರಾವದ ವೇಳೆ ಬಾಧಿಸುವ ಹೊಟ್ಟೆನೋವು ತಾಳಿಕೊಳ್ಳಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 19 ವರ್ಷದ ಕೀರ್ತನಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಲಬುರಗಿ ಜಿಲ್ಲೆಯ ಕಲಗಿ ತಾಲೂಕಿನ ಸಾಲಹಳ್ಳಿ ನಿವಾಸಿ ಕೀರ್ತನಾ ತುಮಕೂರಿನ ಬ್ಯಾತ ಗ್ರಾಮದಲ್ಲಿ
ಶಬರಿಮಲೆಯಿಂದ ವಾಪಸಾಗುತ್ತಿದ್ದ ಕೊಪ್ಪಳದ ಮಾಲಾಧಾರಿಗಳು ತುಮಕೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ
ತುಮಕೂರು ಕೋರಾ ಸಮೀಪ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಕ್ರೂಸರ್ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದು,
ಗುಬ್ಬಿಯಲ್ಲಿ ಮಹಿಳೆ ಆತ್ಮಹತ್ಯೆ: ಸೊಸೆಯ ಕಾಟವೆಂಬ ಆರೋಪ
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಾರೇಕುರ್ಚಿ ಗ್ರಾಮದಲ್ಲಿ ಸೊಸೆ ಕಾಟಕ್ಕೆ ಬೇಸತ್ತು ಅತ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆಯೊಂದು ನಡೆದಿದೆ. ಅತ್ತೆಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೊಸೆಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಭ್ರಮರಾಂಭಿಕೆ (60) ಆತ್ಮಹತ್ಯೆ ಮಾಡಿಕೊಂಡವರು. ಅನುಮಾನಾಸ್ಪದ ಸ್ಥಿತಿಯಲ್ಲಿ
ನೀರಿನ ತೊಟ್ಟಿಗೆ ಬಿದ್ದು ತಾಯಿ- ಇಬ್ಬರು ಮಕ್ಕಳ ಸಾವು
ತುಮಕೂರು; ಹಿರೇಹಳ್ಳಿ ಸಮೀಪದ ಸಿಂಗನಹಳ್ಳಿ ಕಾಲೊನಿಯಲ್ಲಿ ತಾಯಿ ಮತ್ತು ಮಕ್ಕಳಿಬ್ಬರು ಮನೆಯಲ್ಲಿನ ನೀರಿನತೊಟ್ಟಿಗೆ(ಸಂಪ್) ಬಿದ್ದು ಸಾವನ್ನಪ್ಪಿದ್ದಾರೆ. ತಾಯಿ ವಿಜಯಲಕ್ಷ್ಮಿ (26) ಮತ್ತು ಐದು ವರ್ಷದ ಅವಳಿ ಮಕ್ಕಳಾದ ಚೇತನ ಮತ್ತು ಚೈತನ್ಯ ಮೃತರಾದವರು. ಮಂಗಳವಾರ ಸಂಜೆ 4.14ರ ಸುಮಾರಿನಲ್ಲಿ ಮಾಹಿತಿ ದೊರೆತ
ದೇವರಾಯನದುರ್ಗದಲ್ಲಿ ಮಂಗಗಳ ಸಾಮೂಹಿಕ ಸಾವು: ವಿಷ ಪ್ರಾಷನ ಶಂಕೆ
ತುಮಕೂರಿನ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಎರಡು ದಿನದಲ್ಲಿ 11 ಮಂಗಗಳು ನಿಗೂಢವಾಗಿ ಮೃತಪಟ್ಟಿವೆ. ಈ ಹಿನ್ನೆಲೆ ಅರಣ್ಯ ಪ್ರದೇಶದಲ್ಲಿ ಎರಡು ದಿನ ಶೋಧ ಕಾರ್ಯ ನಡೆಸಿದ್ದು, ಕೋತಿಗಳು ಯಾವುದೇ ಕಾಯಿಲೆಯಿಂದ ಮೃತಪಟ್ಟಿಲ್ಲ ಎಂಬುದು ತಿಳಿದುಬಂದಿದೆ. ವಿಷ ಪ್ರಾಷನದಿಂದ ಮಂಗಗಳು ಮೃತಪಟ್ಟಿರುವ ಅನುಮಾನ
ಪತಿ ಸಾವು, ಸೋದರನ ಜೊತೆ ಮದುವೆಯಾದ್ರೂ ಅಕ್ರಮ ಸಂಬಂಧ: ಮಗನೊಂದಿಗೆ ಮಹಿಳೆ ಆತ್ಮಹತ್ಯೆ
ತುಮಕೂರಿನ ಶಿರಾದ ಕಳ್ಳಂಬೆಳ್ಳದಲ್ಲಿ ಎಂಟು ವರ್ಷದ ಮಗನ ಜೊತೆಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪರ ಪುರುಷನ ಜೊತೆಗಿನ ಅಕ್ರಮ ಸಂಬಂಧವೇ ಕಾರಣ ಎನ್ನಲಾಗಿದೆ. ಗಂಡ ತೀರಿಕೊಂಡ ಬಳಿಕ ಮಹಿಳೆಯು ಆತನ ಸಹೋದರನನ್ನೇ ಮದುವೆಯಾಗಿದ್ದಳು.
ತುರುವೇಕೆರೆ ದೇಗುಲ ಹುಂಡಿ ಹಣ, ದೇವರ ಸರ ಕಳವು
ತುರುವೇಕೆರೆ ತಾಲೂಕಿನ ಅರೆಹಳ್ಳಿಯಲ್ಲಿರುವ ಬಸವೇಶ್ವರ ಸ್ವಾಮಿಯ ಕತ್ತು ಅಲಂಕರಿಸಿದ್ದ 500 ಗ್ರಾಂ ತೂಕದ ಬೆಳ್ಳಿಯ ಸರ ಮತ್ತು ದೇವಾಲಯದ ಹುಂಡಿಯಲ್ಲಿದ್ದ 10 ಸಾವಿರರೂಪಾಯಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಅರೆಹಳ್ಳಿ ಗ್ರಾಮ ದೇವರಾಗಿರುವ ಶ್ರೀ ಬಸವೇಶ್ವರ ಸ್ವಾಮಿ ದೇವಾಲಯದ ಅರ್ಚಕರಾಗಿರುವ ರುದ್ರೇಶ್ ಬೆಳಗ್ಗೆ ಪೂಜೆಗಾಗಿ
ರಾಜ್ಯ ಪ್ರಶಸ್ತಿ ಚಿನ್ನದ ಪದಕ ಸೇರಿ ಕಲಾವಿದೆ ಮನೆಯಿಂದ ಚಿನ್ನ ಕದ್ದವರ ಬಂಧನ
ಚಿತ್ರನಟಿ, ರಂಗಭೂಮಿ ಕಲಾವಿದೆಯ ರಾಜ್ಯ ಪ್ರಶಸ್ತಿ ಚಿನ್ನದ ಪದಕ ಸೇರಿ 90 ಗ್ರಾಂ ಚಿನ್ನ ದೋಚಿದ್ದ ಕಳ್ಳರನ್ನು ತಿಪಟೂರು ನಗರ ಪೊಲೀಸರು ಬಂಧಿಸಿದ್ದಾರೆ. ಶಂಕರ್ (26), ಗುರುರಾಜು ( 33), ಮನೋಜ್ ( 18) ಬಂಧಿತರು. ತಿಪಟೂರಿನ ವಿಜಯನಗರದಲ್ಲಿ ವಾಸವಿದ್ದ ನಟಿ, ರಂಗಭೂಮಿ




