Menu

ತುಮಕೂರಿನಲ್ಲಿ ಮೇ 3-10 ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನಿಸ್ ಚಾಂಪಿಯನ್ ಷಿಪ್: ಡಾ. ಜಿ.ಪರಮೇಶ್ವರ

ಮೇ 3ರಿಂದ 10ರವರೆಗೆ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ತುಮಕೂರು ಮಹಿಳಾ ಓಪನ್ ಟೆನಿಸ್ ಚಾಂಪಿಯನ್ ಷಿಪ್ ತುಮಕೂರಿನಲ್ಲಿ ನಡೆಯಲಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ‌. ಜಿ.ಪರಮೇಶ್ವರ ತಿಳಿಸಿದ್ದಾರೆ. ತುಮಕೂರು ಟೆನಿಸ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಅಂತಾರಾಷ್ಟ್ರೀಯ ಗುಣಮಟ್ಟದ ಟೆನಿಸ್ ಕ್ರೀಡಾಂಗಣಗಳನ್ನು ತುಮಕೂರಿನಲ್ಲಿ ನಿರ್ಮಿಸಿದ ಬಳಿಕ ಇದೇ ಮೊದಲ ಬಾರಿಗೆ ವಿಶ್ವ ಮಟ್ಟದ ಕ್ರೀಡಾಕೂಟ ನಡೆಯುತ್ತಿದ್ದು, ತುಮಕೂರಿನ

ಪಾವಗಡದಲ್ಲಿ ಇಲಾಖೆ ಜಂಟಿ ನಿರ್ದೇಶಕನ ಕಿರುಕುಳ ಆರೋಪ: ಅಧಿಕಾರಿ ಆತ್ಮಹತ್ಯೆ

ತುಮಕೂರಿನ ಪಾವಗಡದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರ  ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್‌ನೋಟ್‌ನಲ್ಲಿ ಆರೋಪಿಸಿದ್ದು, ಸಂಬಂಧಿಸಿದ ವೀಡಿಯೊ ಸಹೋದ್ಯೋಗಿಗಳಿಗೆ ಕಳಿಸಿದ್ದು ವೈರಲ್‌ ಆಗಿದೆ. ಪೊಲೀಸರು

ತುಮಕೂರಿನಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿ ಜೇನುನೊಣ ದಾಳಿಗೆ ಬಲಿ

ತುಮಕೂರಿನಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ಜೇನುನೊಣಗಳು ದಾಳಿ ಮಾಡಿದ್ದರಿಂದ ಕಾರು ಶೋರೂಂ ಮೇಲ್ವಿಚಾರಕ ವಿಜಯ್ ಪ್ರಕಾಶ್(65) ಎಂಬವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ಕೈದು ಜನ ಅಸ್ವಸ್ಥರಾಗಿದ್ದಾರೆ. ಘಟನೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ತುಮಕೂರಿನ ಮಾರುತಿ ನಗರದಲ್ಲಿ ನಡೆದಿದೆ. ಕೋತಿ ಕೀಟಲೆ ಮಾಡಿದ ಹಿನ್ನೆಲೆ

ಶೇ‌ 50 ಮಹಿಳಾ ಮೀಸಲು ಮಸೂದೆ ಸಂಸತ್ತಿನಲ್ಲಿ ಅನುಮೋದನೆಯಾಗಲಿ: ಜಿ.ಪರಮೇಶ್ವರ

ಸಂಸತ್ತಿನಲ್ಲೂ ಮಹಿಳಾ ಮೀಸಲಾತಿ ಮಸೂದೆ ಅನುಮೋದನೆ ಆಗಬೇಕು. ಇದರಿಂದ ಸಂಸತ್ತು ಮತ್ತು ವಿಧಾನಮಂಡಲದಲ್ಲಿ ಮಹಿಳೆಯರಿಗೆ ಶೇ. 50 ಸ್ಥಾನಗಳ ಅವಕಾಶ ಸಿಗಲಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ

ತುಮಕೂರು ಲಾಕಪ್‌ ಡೆತ್‌ ಸಿಐಡಿಗೆ ಎಂದ ಸಚಿವ ಪರಮೇಶ್ವರ್‌

ತುಮಕೂರಿನಲ್ಲಿ ನಡೆದಿರುವ ಲಾಕಪ್ ಡೆತ್ ಕೇಸ್‌ನ ಸಿಐಡಿ ತನಿಖೆಗೆ ಆದೇಶಿಸಿರುವುದಾಗಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಗುರುವಾರ ವಿಚಾರಣೆ ಮಾಡುವಾಗಲೇ ವ್ಯಕ್ತಿಯ ಸಾವು ಆಗಿದ್ದು, ಕಾರಣವೇನು ಎಂಬುದು ಗೊತ್ತಾಗಿಲ್ಲ. ಅದಕ್ಕಾಗಿ ಸಿಐಡಿ ತನಿಖೆಗೆ ಆದೇಶ ಮಾಡಿರುವುದಾಗಿ ತಿಳಿಸಿದ್ದಾರೆ.

ಪ್ರಿಯಕರ ಧನ್‌ರಾಜ್‌ ಜೊತೆ ಸೇರಿ 2ನೇ ಗಂಡ ಮನ್ಸೂರ್‌ನ ಕೊಲೆಗೈದ ಫರ್ಜಾನ

ತುಮಕೂರಿನ ತಿಪಟೂರು ಚಿಕ್ಕಕೊಟ್ಟಗಿಹಳ್ಳಿ ಗ್ರಾಮದಲ್ಲಿ ಈ ಹಿಂದೆ ನಡೆದಿದ್ದ ಗುಜರಿ ವ್ಯಾಪಾರಿ ಮನ್ಸೂರ್ ಪಾಷ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆತನ ಪತ್ನಿ ಫರ್ಜಾನ ಎಂಬುದಾಗಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮದುವೆಯಾಗಿ ಮೂರು ತಿಂಗಳು ಕಳೆಯುವುದರ ಒಳಗೆ ಪತ್ನಿ ಪ್ರಿಯಕರನ ಜೊತೆ

ವಾಟ್ಸಾಪ್‌ನಲ್ಲಿ ಭಾವನಾತ್ಮಕ ಸ್ಟೇಟಸ್ ಹಾಕಿ ತುರುವೇಕೆರೆಯಲ್ಲಿ ವಿದ್ಯಾರ್ಥಿ ಸುಸೈಡ್‌

ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದ ಎನ್ನಲಾದ ಡಿಪ್ಲೊಮಾ ವಿದ್ಯಾರ್ಥಿ ಧನುಷ್ (19) ಸಾವು ಆತ್ಮಹತ್ಯೆ ಎಂಬುದು ಗೊತ್ತಾಗಿದೆ. ಗೋಪ್ಪೆನಹಳ್ಳಿ ನಿವಾಸಿಯಾದ ಧನುಷ್ ವಾಟ್ಸಾಪ್ ಮತ್ತು ಫೇಸ್‌ಬುಕ್‌ನಲ್ಲಿ ಭಾವನಾತ್ಮಕ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಟ್ಟಣದ ಸರ್ಕಾರಿ

ಕೊರಟಗರೆಯಲ್ಲಿ ರಸ್ತೆ ದಾಟುತ್ತಿದ್ದ ಕೋತಿಯ ರಕ್ಷಿಸಿ ಪ್ರಾಣ ಕಳೆದುಕೊಂಡ ಆಟೊ ಚಾಲಕ

ತುಮಕೂರಿನ ಕೊರಟಗೆರೆಯ ಜಂಪೇನಹಳ್ಳಿ ಬಳಿ ರಸ್ತೆ ದಾಟುತ್ತಿದ್ದ ಕೋತಿಯ ರಕ್ಷಿಸಲು ಮುಂದಾಗಿ ಆಟೊ ಚಾಲಕರೊಬ್ಬರು ಮೃತಪಟ್ಟಿದ್ದಾರೆ. ಸೋಂಪುರ‌ ನಿವಾಸಿ‌ ಮಹೇಂದ್ರಕುಮಾರ್ ಮೃತಪಟ್ಟ ಚಾಲಕ. ಕೊರಟಗೆರೆಯಿಂದ ತುಮಕೂರು ಕಡೆಗೆ ಆಟೊ‌ ಹೋಗುತ್ತಿದ್ದಾಗ ಜಂಪೇನಹಳ್ಳಿ‌ ಬಳಿ ಕೋತಿಯೊಂದು ಅಡ್ಡ ಬಂದಿದೆ. ರಸ್ತೆ ದಾಟುತ್ತಿದ್ದ ಕೋತಿಯನ್ನು

ತಂಗಿ ಮಗನಿಗೆ ಆಸ್ತಿ ಬರೆದಿಟ್ಟರೂ ಅವರಿಬ್ಬರಿಂದಲೇ ಮಹಿಳೆಯ ಕೊಲೆ

ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ಶಿಕ್ಷಣ ಇಲಾಖೆಯ ಎಫ್‌ಡಿಎ ಅಧಿಕಾರಿ ಜಯಲಕ್ಷ್ಮಿ ಎಂಬವರನ್ನು ಆಸ್ತಿ, ಹಣಕ್ಕಾಗಿ ಸ್ವಂತ ತಂಗಿ ಮತ್ತು ಸಾಕುಮಗನೇ ಉಸಿರುಗಟ್ಟಿಸಿ ಕೊಲೆ ಮಾಡಿರು ವುದು ಪೊಲೀಸ್‌ ತನಿಖೆಯಲ್ಲಿ ಬಯಲಾಗಿದೆ. ತುರುವೇಕೆರೆ ಕಂಟಲಗೆರೆ ಗ್ರಾಮದ ಜಯಲಕ್ಷ್ಮಿ (58) ಬಿಇಒ ಕಚೇರಿಯಲ್ಲಿ ಎಫ್‌ಡಿಎ ಆಗಿ

ಇನ್ನೊಬ್ಬರ ಮುಂದೆ ಕೈಯೊಡ್ಡುವ ಪರಿಸ್ಥಿತಿಗೆ ಜನರನ್ನು ದೂಡಲಾಗಿದೆ: ಹೆಚ್‌ಡಿಕೆ ಕಿಡಿ

ರಾಜ್ಯದ ಜನರಿಗೆ ಇನ್ನೊಬ್ಬರಿಗೆ ಕೊಡುವ ಶಕ್ತಿಯನ್ನು ಕೊಡಬೇಕಿತ್ತು. ಆದರೆ, ದಿನನಿತ್ಯ ಇನ್ನೊಬ್ಬರ ಮುಂದೆ ಕೈಯೊಡ್ಡುವ ಪರಿಸ್ಥಿತಿಗೆ ಜನರನ್ನು ದೂಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ  ಕುಮಾರಸ್ವಾಮಿ  ಕಿಡಿ ಕಾರಿದ್ದಾರೆ.  ಚಿಕ್ಕನಾಯಕನಹಳ್ಳಿ ವಿಧಾನಸಭೆ ಕ್ಷೇತ್ರದ ಶಾಸಕ ಸಿ.ಬಿ. ಸುರೇಶ್ ಬಾಬು ಅವರು ತಮ್ಮ ಕ್ಷೇತ್ರದಲ್ಲಿ