Menu

ನಾಲ್ಕು ತಿಂಗಳ ಹಿಂದೆ ಮದುವೆ: ಶಿರಾದಲ್ಲಿ ಪತ್ನಿಯ ಸುಸೈಡ್‌ ನೋಡಿ ಪತಿಯೂ ಆತ್ಮಹತ್ಯೆ

ತುಮಕೂರು ಶಿರಾ ತಾಲೂಕಿನ ಹನುಮನಹಳ್ಳಿಯಲ್ಲಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿದ ಪತಿಯೂ ಸಾವಿಗೆ ಶರಣಾದ ಘಟನೆ ನಡೆದಿದೆ. ಶರಣ್ಯ (20), ಗಿರೀಶ್ (28) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಇವರು ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಶರಣ್ಯ ಆತ್ಮಹತ್ಯೆ ಮಾಡಿಕೊಂಡಿದ್ದು, ಇದನ್ನು ನೋಡಿದ ಗಿರೀಶ್‌ ಹೊಲದ ಹತ್ತಿರದಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪಟ್ಟನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ

ಕಳ್ಳನೋಟು ದಂಧೆ: ತುಮಕೂರಿನಲ್ಲಿ ಆರು ಆರೋಪಿಗಳ ಬಂಧನ

ತುಮಕೂರಿನ ಚಿಕ್ಕನಾಯಕನಹಳ್ಳಿ ಪೊಲೀಸರು ರಾಜ್ಯವ್ಯಾಪಿ ಕಾರ್ಯನಿರ್ವಹಿಸುತ್ತಿದ್ದ ಖೋಟಾ ನೋಟಿನ ಜಾಲವನ್ನು ಭೇದಿಸಿ, ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಒಂದು 500 ರೂಪಾಯಿ ಮುಖಬೆಲೆಯ ನಕಲಿ ನೋಟಿನ ಸುಳಿವು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬೆಂಗಳೂರು ಮತ್ತು ಮೈಸೂರು ಸೇರಿದಂತೆ ರಾಜ್ಯದ ನಾನಾ ಕಡೆ

ಶಿರಾ ಹೆದ್ದಾರಿಯಲ್ಲಿ ಕಾರು ಸ್ಫೋಟ: ಯುವಕ ಸಜೀವ ದಹನ, ಯುವತಿ ಸ್ಥಿತಿ ಗಂಭೀರ 

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ  ಜೋಗಿಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ  ವೇಗವಾಗಿ ಚಲಿಸುತ್ತಿದ್ದ ಕಾರು ಏಕಾಏಕಿ ಸ್ಫೋಟಗೊಂಡು ಬೆಂಕಿಗಾಹುತಿಯಾಗಿದ್ದು, ಕಾರಿನಲ್ಲಿದ್ದ ನಾಗೇಂದ್ರ (30) ಎಂಬವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಕಾರು ಬೆಂಗಳೂರಿನಿಂದ ಅಂಕೋಲಾಗೆ ಂಚರಿಸುತ್ತಿದ್ದಾಗ ಈ ದುರಂತ ನಡೆದಿದೆ,  ಕಾರಿನಲ್ಲಿದ್ದ ಯುವತಿಗೆ ಗಂಭೀರ ಗಾಯಗಳಾಗಿದ್ದು

ತುಮಕೂರು ಕ್ರೀಡಾ ನಗರಿಯಾಗಿ ಅಭಿವೃದ್ಧಿ: ಡಿಸಿಎಂ ಡಾ. ಜಿ ಪರಮೇಶ್ವರ

ಶೈಕ್ಷಣಿಕ ನಗರಿಯಾಗಿರುವ ತುಮಕೂರು ಜಿಲ್ಲೆಯನ್ನು ರಾಜ್ಯದ ಪ್ರಮುಖ ಕ್ರೀಡಾ ನಗರಿಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸರ್ಕಾರ ವಿವಿಧ ಕ್ರೀಡಾ ಮೂಲಸೌಕರ್ಯಗಳನ್ನು ನಿರ್ಮಿಸುತ್ತಿದ್ದು, ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು ಎಂದು ಉಪಮುಖ್ಯಮಂತ್ರಿಗಳಾದ ಡಾ. ಜಿ ಪರಮೇಶ್ವರ ಹೇಳಿದರು.

ತುಮಕೂರಿನಲ್ಲಿ ಎಲ್‌ಐಸಿ ದುಡ್ಡಿಗಾಗಿ ತಮ್ಮನ ಕೊಂದ ಅಣ್ಣ

ಎಲ್‌ಐಸಿ ಪಾಲಿಸಿಯಿಂದ 30 ಲಕ್ಷ ರೂ. ಪಡೆದುಕೊಳ್ಳುವ ಆಸೆಗೆ ಬಿದ್ದ ಅಣ್ಣನೊಬ್ಬ ತಮ್ಮನ ಕೊಲೆ ಮಾಡಿರುವ ಘಟನೆ ತುಮಕೂರಿನ ಪಟ್ಟನಾಯಕನಹಳ್ಳಿಯಲ್ಲಿ ಬಹಿರಂಗಗೊಂಡಿದೆ.  35 ವರ್ಷದ ರಮೇಶ್‌ ಸಾವು ಮೊದಲಿಗೆ ಬೈಕ್ ಅಪಘಾತದ ಪ್ರಕರಣ ಎಂದು ಹೇಳಲಾಗಿತ್ತು, ಎಲ್‌ಐಸಿ ಪಾಲಿಸಿ ಹಣ ಲಪಟಾಯಿಸಲು

ಗಿಫ್ಟ್‌ ಆಮಿಷವೊಡ್ಡಿ ನಿವೃತ್ತ ಯೋಧನಿಗೆ 2.82 ಲಕ್ಷ ರೂಪಾಯಿ ವಂಚನೆ

ನಿವೃತ್ತ ಯೋಧರೊಬ್ಬರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಕರೆ ಮಾಡಿದ್ದ ದುಷ್ಕರ್ಮಿಗಳು ಉಡುಗೊರೆ ಕಳುಹಿಸುವುದಾಗಿ ನಂಬಿಸಿ 2.82 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಮಧುಗಿರಿ ತಾಲೂಕಿನ ಮಿಡಿಗೇಶಿ ಗ್ರಾಮದಲ್ಲಿ ನಡೆದಿದೆ. ಜೂನ್ 20ರಂದು ನಿವೃತ್ತ ಯೋಧ ಶಿವಕುಮಾರ್ ಅವರ ಹುಟ್ಟುಹಬ್ಬದಂದು ಬೆಳಗ್ಗೆ ವಂಚಕರು

ತೋಟಕ್ಕೆ ವಾಕಿಂಗ್‌ ಹೋಗಿದ್ದ ವೃದ್ಧೆಯ ಕೊಲೆ

ತೋಟಕ್ಕೆ ವಾಕಿಂಗ್‌ ಹೋಗಿದ್ದ ವೃದ್ಧೆಯನ್ನು ಕೊಲೆ ಮಾಡಿರುವ ಘಟನೆ ಕೊರಟಗೆರೆ ಸಿಎನ್ ದುರ್ಗದ ದಾಸಲುಕುಂಟೆಯಲ್ಲಿ ನಡೆದಿದೆ. ರತ್ನಮ್ಮ (74) ಕೊಲೆಯಾದ ವೃದ್ಧೆ. ರತ್ನಮ್ಮ ಸಂಜೆ ವಾಕಿಂಗ್‌ಗೆಂದು ತೋಟಕ್ಕೆ ಹೋಗಿದ್ದವರು ರಾತ್ರಿಯಾದರೂ ಮನೆಗೆ ವಾಪಸ್ ಆಗಿರಲಿಲ್ಲ. ಸೊಸೆ ಭಾಗ್ಯಮ್ಮ ಹಾಗೂ ಊರಿನ ಜನರು

ಉಗ್ರನೊಂದಿಗೆ ಸಂಪರ್ಕ ಶಂಕೆ: ತುಮಕೂರಿನಲ್ಲಿ ಯುವಕ ಅರೆಸ್ಟ್‌

ವಿದೇಶಿ ಭಯೋತ್ಪಾದಕನ ಜೊತೆ ನಿರಂತರ ಸಂಪರ್ಕ ಹಾಗೂ ದೇಶದ ಭದ್ರತೆಗೆ ಧಕ್ಕೆ ತರುವಂಥ ಚಟುವಟಿಕೆಗಳನ್ನು ನಡೆಸುತ್ತಿದ್ದ ಶಂಕೆಯಿಂದ ತುಮಕೂರಿನ ಯುವಕನೊಬ್ಬನನ್ನು ಕ್ಯಾತಸಂದ್ರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳು ನೀಡಿದ ನಿಖರ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡು ತುಮಕೂರು ನಗರ ಪೊಲೀಸರು

ಚಿಕ್ಕನಾಯಕನಹಳ್ಳಿಯಲ್ಲಿ ಕಾರುಗಳು ಡಿಕ್ಕಿ: ಒಂದೇ ಕುಟುಂಬದ ಮೂವರ ಸಾವು

ಎರಡು ಕಾರುಗಳು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟಟ್ಟಿರುವ ದಾರುಣ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರು ಆಂಧ್ರಪ್ರದೇಶ ಮೂಲದವರು ಎನ್ನಲಾಗುತ್ತಿದೆ. ಈ ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ

“ಎಐ ಸಹಾನುಭೂತಿ, ಸಂದರ್ಭೋಚಿತ ನಿರ್ಧಾರ, ಅಂತಃಪ್ರಜ್ಞೆ, ಸೃಜನಶೀಲತೆ ನಕಲು ಮಾಡಲು ಸಾಧ್ಯವಿಲ್ಲ”

ಪುನರಾವರ್ತಿತ ಮತ್ತು ದತ್ತಾಂಶ ಆಧಾರಿತ ಕೆಲಸಗಳನ್ನು ಮಾಡುವಲ್ಲಿ ಎಐ ಅತ್ಯಂತ ಪರಿಣಾಮಕಾರಿ ಸಾಧನವಾಗಿದೆ. ಆದರೆ ಇದಕ್ಕೆ ಮಾನವ ಸಹಜವಾದ ಸಹಾನುಭೂತಿ,ಸಂದರ್ಭೋಚಿತ ನಿರ್ಧಾರ ಸಾಮರ್ಥ್ಯ, ಆಳವಾದ ಅಂತಃಪ್ರಜ್ಞೆ ಮತ್ತು ಸೃಜನಶೀಲತೆಯನ್ನು ನಕಲು ಮಾಡಲು ಸಾಧ್ಯವಿಲ್ಲ, ಇವು ಕೇವಲ ಸುಸಂಸ್ಕೃತ ಮಾನವನ ಮನಸ್ಸಿನಿಂದ ಮಾತ್ರ