ತುಮಕೂರು
ದಯಾಮರಣ ಕೋರಿದ್ದ ತುಮಕೂರಿನ ಮಹಿಳೆ ಮಕ್ಕಳೊಂದಿಗೆ ಆತ್ಮಹತ್ಯೆ
ಈ ಹಿಂದೆ ಗೃಹಸಚಿವರಾಗಿದ್ದ ಪರಮೇಶ್ವರ್ ಅವರಲ್ಲಿ ದಯಾಮರಣ ಕೋರಿ ಮನವಿ ಸಲ್ಲಿಸಿದ್ದ ತುಮಕೂರಿನ ಶಿರಾ ನಗರ ಹೊರ ವಲಯದ ಮಹಿಳೆಯು ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಬಿಯಾ ಪಾಷಾ (39), ಮಗಳು ತಮನ್ನಾ (9), ಮಗ ಸಿಮ್ರಾನ್ (5) ಆತ್ಮಹತ್ಯೆ ಮಾಡಿಕೊಂಡವರು. ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಎಸ್ಪಿ ಅಶೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 2025ರಲ್ಲಿ ತುಮಕೂರಿನಲ್ಲಿ ನಡೆದ ಸರ್ಕಾರದ ಸವಲತ್ತು ವಿತರಣೆ ಹಾಗೂಧ ಅಭಿವೃದ್ಧಿ
ಸತ್ತಿದ್ದ ಚಿರತೆಯನ್ನು ಸುಟ್ಟ ವೀಡಿಯೊ ವೈರಲ್: ಮೂವರ ಬಂಧನ
ತುಮಕೂರು ತಾಲೂಕಿನ ಗೌರಗೊಂಡನಹಳ್ಳಿ ಗೇಟ್ ಬಳಿ ಉರುಳಿಗೆ ಸಿಲುಕಿ ಮೃತಪಟ್ಟಿದ್ದ ಚಿರತೆಯನ್ನು ಗ್ರಾಮಸ್ಥರು ಸುಟ್ಟು ಹಾಕಿರುವ ಪ್ರಕರಣ ಸಂಬಂಧ ಮೂವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಚಿರತೆಯನ್ನು ಸುಟ್ಟ ವೀಡಿಯೊ ವೈರಲ್ ಆದ ಬಳಿಕ ಅರಣ್ಯಾಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಚಿರತೆ ಸತ್ತಿರುವುದನ್ನು ಅರಣ್ಯ
ಶಿವಗಂಗೆ ಶಾಂತಲಾ ಡ್ರಾಪ್ನಲ್ಲಿ ಮೃತದೇಹ: ನಾಪತ್ತೆಯಾಗಿರುವ ಟೆಕ್ಕಿಯದಾ?
ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ಉಪಾಧ್ಯಾಯ ನಾಪತ್ತೆಯಾಗಿ ಐದು ದಿನಗಳಾಗಿದ್ದು, ಬೆಟ್ಟದ ಶಾಂತಲಾ ಡ್ರಾಪ್ ಕಂದಕದಲ್ಲಿ ಮೃತದೇಹವೊಂದು ಇರುವುದನ್ನು ಡ್ರೋನ್ ಕ್ಯಾಮೆರಾ ಪತ್ತೆ ಹಚ್ಚಿದೆ, ಈ ಮೃತದೇಹ ಅದ್ವೈತ್ ಅವರುದು ಆಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಶುಕ್ರವಾರ ಬೆಳಗ್ಗೆ ಟ್ರೆಕ್ಕಿಂಗ್ಗೆ ಹೋಗಿದ್ದ
ತುಮಕೂರಿನಲ್ಲಿ ಲಾರಿಗೆ ಗೂಡ್ಸ್ ವಾಹನ ಡಿಕ್ಕಿ: ಇಬ್ಬರು ಬಲಿ
ತುಮಕೂರಿನ ಸೋರೆಕುಂಟೆ ಬಳಿ ಲಾರಿಗೆ ಹಿಂಬದಿಯಿಂದ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲೊ ಒಬ್ಬರನ್ನು ಷಣ್ಮುಗ (50) ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ವ್ಯಕ್ತಿಯ ಗುರುತು ಪತ್ತೆ ಕಾರ್ಯ ಮುಂದುವರಿದಿದೆ. ಬೆಂಗಳೂರಿನಿಂದ ಚಿತ್ರದುರ್ಗ ಕಡೆಗೆ ಟ್ರ್ಯಾಕ್ಟರ್ಗಳನ್ನು ತುಂಬಿಸಿಕೊಂಡು
ಶಾಂತಲಾ ಡ್ರಾಪ್ ಸರ್ಚ್ ಮಾಡಿದ್ದ ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾಗಿರುವ ಟೆಕ್ಕಿ
ಶಿವಗಂಗೆ ಬೆಟ್ಟಕ್ಕೆ ಟ್ರಕ್ಕಿಂಗ್ ಹೋಗಿ ನಾಪತ್ತೆಯಾಗಿರುವ ಬೆಂಗಳೂರಿನ ಕಾಡುಗೋಡಿಯ ಟೆಕ್ಕಿ, ಮಧ್ಯಪ್ರದೇಶದ ಇಂದೋರ್ನ ಅದ್ವೈತ್ ಉಪಾಧ್ಯಾಯ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ನಾಪತ್ತೆಯಾದ ಮೂರನೇ ದಿನವೂ ಅದ್ವೈತ್ ಹುಡುಕಾಟ ನಡೆಸಲಾಗುತ್ತಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ತನಿಖೆಯ ವೇಳೆ ಇದು ಪೂರ್ವನಿಯೋಜಿತ
ನಾಲ್ಕು ತಿಂಗಳ ಹಿಂದೆ ಮದುವೆ: ಶಿರಾದಲ್ಲಿ ಪತ್ನಿಯ ಸುಸೈಡ್ ನೋಡಿ ಪತಿಯೂ ಆತ್ಮಹತ್ಯೆ
ತುಮಕೂರು ಶಿರಾ ತಾಲೂಕಿನ ಹನುಮನಹಳ್ಳಿಯಲ್ಲಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿದ ಪತಿಯೂ ಸಾವಿಗೆ ಶರಣಾದ ಘಟನೆ ನಡೆದಿದೆ. ಶರಣ್ಯ (20), ಗಿರೀಶ್ (28) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಇವರು ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಶರಣ್ಯ ಆತ್ಮಹತ್ಯೆ
ಕಳ್ಳನೋಟು ದಂಧೆ: ತುಮಕೂರಿನಲ್ಲಿ ಆರು ಆರೋಪಿಗಳ ಬಂಧನ
ತುಮಕೂರಿನ ಚಿಕ್ಕನಾಯಕನಹಳ್ಳಿ ಪೊಲೀಸರು ರಾಜ್ಯವ್ಯಾಪಿ ಕಾರ್ಯನಿರ್ವಹಿಸುತ್ತಿದ್ದ ಖೋಟಾ ನೋಟಿನ ಜಾಲವನ್ನು ಭೇದಿಸಿ, ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಒಂದು 500 ರೂಪಾಯಿ ಮುಖಬೆಲೆಯ ನಕಲಿ ನೋಟಿನ ಸುಳಿವು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬೆಂಗಳೂರು ಮತ್ತು ಮೈಸೂರು ಸೇರಿದಂತೆ ರಾಜ್ಯದ ನಾನಾ ಕಡೆ
ಶಿರಾ ಹೆದ್ದಾರಿಯಲ್ಲಿ ಕಾರು ಸ್ಫೋಟ: ಯುವಕ ಸಜೀವ ದಹನ, ಯುವತಿ ಸ್ಥಿತಿ ಗಂಭೀರ
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರು ಏಕಾಏಕಿ ಸ್ಫೋಟಗೊಂಡು ಬೆಂಕಿಗಾಹುತಿಯಾಗಿದ್ದು, ಕಾರಿನಲ್ಲಿದ್ದ ನಾಗೇಂದ್ರ (30) ಎಂಬವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಕಾರು ಬೆಂಗಳೂರಿನಿಂದ ಅಂಕೋಲಾಗೆ ಂಚರಿಸುತ್ತಿದ್ದಾಗ ಈ ದುರಂತ ನಡೆದಿದೆ, ಕಾರಿನಲ್ಲಿದ್ದ ಯುವತಿಗೆ ಗಂಭೀರ ಗಾಯಗಳಾಗಿದ್ದು
ತುಮಕೂರು ಕ್ರೀಡಾ ನಗರಿಯಾಗಿ ಅಭಿವೃದ್ಧಿ: ಡಿಸಿಎಂ ಡಾ. ಜಿ ಪರಮೇಶ್ವರ
ಶೈಕ್ಷಣಿಕ ನಗರಿಯಾಗಿರುವ ತುಮಕೂರು ಜಿಲ್ಲೆಯನ್ನು ರಾಜ್ಯದ ಪ್ರಮುಖ ಕ್ರೀಡಾ ನಗರಿಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸರ್ಕಾರ ವಿವಿಧ ಕ್ರೀಡಾ ಮೂಲಸೌಕರ್ಯಗಳನ್ನು ನಿರ್ಮಿಸುತ್ತಿದ್ದು, ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು ಎಂದು ಉಪಮುಖ್ಯಮಂತ್ರಿಗಳಾದ ಡಾ. ಜಿ ಪರಮೇಶ್ವರ ಹೇಳಿದರು.
ತುಮಕೂರಿನಲ್ಲಿ ಎಲ್ಐಸಿ ದುಡ್ಡಿಗಾಗಿ ತಮ್ಮನ ಕೊಂದ ಅಣ್ಣ
ಎಲ್ಐಸಿ ಪಾಲಿಸಿಯಿಂದ 30 ಲಕ್ಷ ರೂ. ಪಡೆದುಕೊಳ್ಳುವ ಆಸೆಗೆ ಬಿದ್ದ ಅಣ್ಣನೊಬ್ಬ ತಮ್ಮನ ಕೊಲೆ ಮಾಡಿರುವ ಘಟನೆ ತುಮಕೂರಿನ ಪಟ್ಟನಾಯಕನಹಳ್ಳಿಯಲ್ಲಿ ಬಹಿರಂಗಗೊಂಡಿದೆ. 35 ವರ್ಷದ ರಮೇಶ್ ಸಾವು ಮೊದಲಿಗೆ ಬೈಕ್ ಅಪಘಾತದ ಪ್ರಕರಣ ಎಂದು ಹೇಳಲಾಗಿತ್ತು, ಎಲ್ಐಸಿ ಪಾಲಿಸಿ ಹಣ ಲಪಟಾಯಿಸಲು




