Menu

ಸಾಲ ಶಿಸ್ತಿನಿಂದ ಮರುಪಾವತಿ ಆಗುತ್ತಿರುವುದು ದಕ್ಷಿಣ ಕನ್ನಡ, ಉಡುಪಿಯಲ್ಲಿ  ಮಾತ್ರ: ಡಿಸಿಎಂ 

ರಾಜ್ಯದಲ್ಲಿ ಅತಿ ಹೆಚ್ಚು ಶಿಸ್ತಿನಿಂದ ಬ್ಯಾಂಕು, ಸಹಕಾರಿ ಸಂಘಗಳಲ್ಲಿ ಸಾಲಗಳು ಮರುಪಾವತಿ ಮಾಡುತ್ತಿದ್ದರೆ ಅದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ. ಇಲ್ಲಿ ಕೊಟ್ಟ ಮಾತುಗಳನ್ನು ನಾವೂ ಉಳಿಸಿಕೊಂಡು ಬರುತ್ತಿದ್ದೇವೆ. ಈ ಜಿಲ್ಲೆ ಬಗ್ಗೆ ಅಪಾರ ವಿಶ್ವಾಸ, ನಂಬಿಕೆ ಇಟ್ಟುಕೊಂಡಿದ್ದೇನೆ. ಇಲ್ಲಿನ ಜನ ಹೆಚ್ಚು ಬುದ್ಧಿವಂತರು, ವಿದ್ಯಾವಂತರು. ಅತಿ ಹೆಚ್ಚು ವಿದ್ಯಾವಂತರನ್ನು ಕೊಟ್ಟ ಜಿಲ್ಲೆ ಇದು. ದೇಶದಲ್ಲಿ ಅತಿ ಹೆಚ್ಚು ಬ್ಯಾಂಕುಗಳನ್ನು ಕೊಟ್ಟ ಪುಣ್ಯಭೂಮಿ ಇದು. ಈ ಪರಂಪರೆಯನ್ನು ನೀವು

ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್, ವಿದೇಶಿ ಹಡಗುಗಳ ತೀವ್ರ ತಪಾಸಣೆ , ಆಳ ಮೀನುಗಾರಿಕೆಗೆ ತಡೆ

ಉಗ್ರರ ತಾಣಗಳ ಮೇಲೆ ಭಾರತದ ವಾಯುಪಡೆ ದಾಳಿ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ಬಳಿಕ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಪ್ರಮುಖ ನಗರಗಳು, ಬಂದರು, ವಿಮಾನ ನಿಲ್ದಾಣಗಳಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅದೇ ರೀತಿ ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕಾರವಾರದಲ್ಲಿ ಕದಂಬ ನೌಕಾ

ಕಾರಿನೊಳಗೆ ಗುಂಡು ಹಾರಿಸಿಕೊಂಡು ಕಾರ್ಕಳದ ಉದ್ಯಮಿ ಆತ್ಮಹತ್ಯೆ

ಕಾರ್ಕಳದ ನಿಟ್ಟೆಯ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ಉದ್ಯಮಿ ಕಾರಿನೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿಲೀಪ್ ಎನ್.ಆರ್ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ವ್ಯಕ್ತಿ. ದಿಲೀಪ್‌ ಮಂಗಳೂರಿನಲ್ಲಿ ಸಣ್ಣ ಉದ್ಯಮ ನಡೆಸುತ್ತಿದ್ದರು. ಉದ್ಯಮ ನಷ್ಟ ಹಾಗೂ ವಿಪರೀತ ಸಾಲ ಆತ್ಮಹತ್ಯೆಗೆ ಕಾರಣ

2028 ರಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ: ಡಿಸಿಎಂ 

“ಕಾಂಗ್ರೆಸ್ ಪಕ್ಷದಲ್ಲಿ ನಾಯಕ ಪಟ್ಟವಿಲ್ಲ. ಪಕ್ಷಕ್ಕೆ ದುಡಿಯುವವರೆಲ್ಲರೂ ಕಾರ್ಯಕರ್ತರೇ. 2028 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ. ಎಲ್ಲಾ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ದುಡಿಯಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವ ಸಮಾವೇಶದಲ್ಲಿ ಮಾತನಾಡಿದರು. “ಬೂತ್ ಮಟ್ಟದಲ್ಲಿ

ಜಾತಿ ಆಧಾರಿತ ರಾಜಕಾರಣ ಬೇಡ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ: ಡಿ.ಕೆ. ಶಿವಕುಮಾರ್

“ಜಾತಿ ಆಧಾರಿತ ರಾಜಕಾರಣ ಬಿಡಿ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ. ಮುಂದಿನ ಚುನಾವಣೆಯಲ್ಲಿ ಉಡುಪಿ, ಮಂಗಳೂರು ಜಿಲ್ಲೆಗಳಿಂದ 8-9 ಶಾಸಕರು ಆಯ್ಕೆಯಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ,

ಭಟ್ಕಳ: ಮೀನುಗಾರಿಕಾ ಬೋಟ್ ಮುಳುಗಡೆ: 6 ಮೀನುಗಾರರು ಬಚಾವ್‌

ಭಟ್ಕಳ: ಮೀನುಗಾರಿಕೆ ಮುಗಿಸಿ ವಾಪಾಸ್‌ ಆಗುತ್ತಿದ್ದ ವೇಳೆ ಬೋಟ್ ಮುಳುಗಡೆಗೊಂಡು ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಭಟ್ಕಳ ಬಂದರಿನಲ್ಲಿ ನಡೆದಿದೆ. ಬಲೆ ಹಾಗೂ ಸ್ವತ್ತುಗಳು ಸೇರಿದಂತೆ ಬೋಟ್ ಸಹಿತ ಮುಳುಗಡೆಯಾಗಿ ಸುಮಾರು 60 ಲಕ್ಷ ನಷ್ಟ ಸಂಭವಿಸಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ

ನಕ್ಸಲ್ ತೊಂಬಟ್ಟು ಲಕ್ಷ್ಮೀ ಉಡುಪಿ ಡಿಸಿ ಕಚೇರಿಯಲ್ಲಿ ಶರಣಾಗತಿ

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಕ್ಸಲ್ ಚಳುವಳಿಯಲ್ಲಿ ಸಕ್ರಿಯವಾಗಿದ್ದ ತೊಂಬಟ್ಟು ಲಕ್ಷ್ಮೀ ಶರಣಾಗಿದ್ದಾರೆ. ಶರಣಾಗತಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿ ತೊಂಬಟ್ಟು ಲಕ್ಷ್ಮೀ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ಶರಣಾಗತಿ ಮತ್ತು ಪುನರ್ವಸತಿ ಸಮಿತಿಯ ಸದಸ್ಯ ಶ್ರೀಪಾಲ್ ಜೊತೆಗಿದ್ದು, ಶರಣಾಗತಿ

ಸೇಲ್ಸ್​​ಮ್ಯಾನ್ ಸೋಗಿನಲ್ಲಿ ಬಂದಾತ ಕರುವಿನ ಬಾಲ ಕತ್ತರಿಸಿ ಪರಾರಿ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಗುಂಡ್ಮಿ ಗ್ರಾಮದಲ್ಲಿ ಸೇಲ್ಸ್​​ಮ್ಯಾನ್ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ಕರುವಿನ ಬಾಲ ಕತ್ತರಿಸಿ ವಿಕೃತಿ ಮೆರೆದಿದ್ದಾನೆ. ಗುಂಡ್ಮಿಯಲ್ಲಿ ಮಯ್ಯ ಕುಟುಂಬದ ಮನೆಯೊಂದಕ್ಕೆ ಸೇಲ್ಸ್ ಮ್ಯಾನ್ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿ, ಮನೆಯವರನ್ನು ಕರೆದು ವಸ್ತುಗಳನ್ನು ತೋರಿಸಿದ್ದಾನೆ. ವಸ್ತುಗಳ ಖರೀದಿಗೆ