ವಿಜಯನಗರ
ಹಂಪಿಯಲ್ಲಿ ಹೋಂ ಸ್ಟೇ: 54 ಅಧಿಕಾರಿಗಳ ವಿರುದ್ಧ ಲೋಕಾಯಕ್ತ ದೂರು ದಾಖಲು
ಹಂಪಿ ಸಂರಕ್ಷಿತ ಪ್ರದೇಶಗಳ್ಲಲಿ ಅಕ್ರಮ ವಾಣಿಜ್ಯ ಚಟುವಟಿಕೆಗಳು ಮತ್ತು ಹೋಂಸ್ಟೇ ನಡೆಸಲು ಅವಕಾಶ ಕಲ್ಪಿಸಿರುವ 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. ಹಂಪಿ ವಿಶ್ವಪಾರಂಪರಿಕ ತಾಣವಾಗಿ ಗುರುತಿಸಿಕೊಂಡಿದ್ದು, ಅಲ್ಲಿ ನಿಯಮಗಳ ಉಲ್ಲಂಘನೆ ವಿಚಾರವನ್ನು ನ್ಯಾಯಮೂರ್ತಿ ಬಿ. ವೀರಪ್ಪ ಗಂಭೀರವಾಗಿ ಪರಿಗಣಿಸಿ ಸೆಪ್ಟೆಂಬರ್ 1 ರೊಳಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಂಪಿ ವಿಶ್ವ ಪರಂಪರೆಯ ಪ್ರದೇಶ ನಿರ್ವಹಣಾ ಪ್ರಾಧಿಕಾರದಅಧಿಕಾರಿಗಳು, ಸಹಾಯಕ ಆಯುಕ್ತರು, ತಹಶೀಲ್ದಾರ್,
ಬಾಲಕಿ ಜೊತೆಗಿನ ಸಂಬಂಧ: ಮದುವೆಯಾಗಿ 20 ದಿನಕ್ಕೆ ಹೆಂಡತಿಯ ಕೊಲೆ
ಮದುವೆಯಾಗಿ ಇಪ್ಪತ್ತು ದಿನಗಳಲ್ಲೇ ವ್ಯಕ್ತಿಯೊಬ್ಬ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೆ.ದಿಬ್ಬದಹಳ್ಳಿಯಲ್ಲಿ ನಡೆದಿದೆ. ಹೊಲದಿಂದ ಕರಿಬೇವು ಕಿತ್ತು ತರಲೆಂದು ಬೈಕ್ನಲ್ಲಿ ಕರೆದೊಯ್ದ ಪತಿ, ತನ್ನ ಸ್ನೇಹಿತನ ಜತೆ ಸೇರಿ ಆಕೆಯ ಕತ್ತು ಹಿಸುಕಿ
ಕೂಡ್ಲಿಗಿಯಲ್ಲಿ ಸೊಪ್ಪು ತೆಗೆಯುವಾಗ ಜೋಡಿ ನಾಗರಹಾವು ಕಚ್ಚಿ ಮಹಿಳೆ ಸಾವು
ಜಾನುವಾರುಗಳ ಮೇವಿಗಾಗಿ ಮೆಕ್ಕೆಜೋಳ ಸೊಪ್ಪು ತೆಗೆಯುವಾಗ ಅದರಲ್ಲಿದ್ದ ಜೋಡಿ ನಾಗರಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟ ದಾರುಣ ಘಟನೆ ವಿಜಯನಗರದ ಕೂಡ್ಲಿಗಿಯ ಚೌಡಾಪುರ ಗ್ರಾಮದಲ್ಲಿ ನಡೆದಿದೆ. ಕೆ.ಓಬಮ್ಮ (53) ಮೃತಪಟ್ಟ ಮಹಿಳೆ. ಸಿಟ್ಟಿಗೆದ್ದ ಸ್ಥಳೀಯರು ಮಹಿಳೆಗೆ ಕಚ್ಚಿ ಸಾಯಿಸಿದ ಜೋಡಿ ನಾಗರಹಾವುಗಳನ್ನು ಹೊಡೆದು
ಉಗಾಂಡಾದಲ್ಲಿ ವಿಜಯನಗರದ ಮಹಿಳೆ ಆತ್ಮಹತ್ಯೆ: ಮೃತದೇಹ ತರಿಸಲು ನೆರವಾದ ಸಿರಿಗೆರೆ ಶ್ರೀ
ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಕನ್ನನಾಯಕನಕಟ್ಟೆ ಗ್ರಾಮದ ಮಹಿಳೆ ಉಗಾಂಡಾದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಂದು ಎಚ್. ಅಜ್ಜೋಳ (22) ಆತ್ಮಹತ್ಯೆ ಮಾಡಿಕೊಂಡವರು. ಬಿಂದು ಮತ್ತು ಚಂದ್ರಶೇಖರ್ ಪ್ರೀತಿಸಿ 2025ರ ಜೂನ್ 7 ರಂದು ಮದುವೆಯಾಗಿದ್ದರು. ಬಳಿಕ ಉಗಾಂಡದ ಖಾಸಗಿ
ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ: ಸಿಎಂ
ಪ್ರತಿ ವರ್ಷದ ನವೆಂಬರ್ 3, 4, 5 ರಂದು ಹಂಪಿ ಉತ್ಸವದ ಆಯೋಜಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಜಯನಗರದಲ್ಲಿ ಹಂಪಿ ಉತ್ಸವ 2026 ನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ ಸರ್ಕಾರ ಹಂಪಿ ಉತ್ಸವ 2026 ವನ್ನು ವಿಜೃಂಭಣೆಯಿಂದ ಆಚರಿಸುತ್ತಿದೆ. ಮಾಜಿ ಸಚಿವ
ಗುತ್ತಿಗೆದಾರರಿಂದ ಲಂಚ: ಪಿಡಬ್ಲ್ಯುಡಿ ಎಂಜಿನಿಯರ್ ಲೋಕಾಯುಕ್ತ ಬಲೆಗೆ
ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯುಡಿ ಕಚೇರಿಯಲ್ಲಿ ಗುತ್ತಿಗೆದಾರರಿಂದ ಲಂಚ ಸ್ವೀಕರಿಸುತ್ತಿದ್ದಾಗ ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್ ಎಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕಾಮಗಾರಿ ಬಿಲ್ ಮಂಜೂರು ಮಾಡಲು ಒಂದು ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಈ
ಮೈಲಾರದಲ್ಲಿ “ಸಂಪಾಯಿತಲೇ ಪರಾಕ್” ಕಾರ್ಣಿಕೋತ್ಸವ ವಾಣಿ
ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮೈಲಾರದಲ್ಲಿ ಕಾರ್ಣಿಕೋತ್ಸವ ಅದ್ಧೂರಿಯಾಗಿ ಬುಧವಾರ ನೆರವೇರಿದ್ದು, ಸಂಪಾಯಿತಲೇ ಪರಾಕ್ ಎಂದು ಗೊರವಯ್ಯ ಭವಿಷ್ಯ ನುಡಿ ದಿದ್ದು, ಭಕ್ತರು ಜಯಘೋಷ ಹಾಕಿದ್ದಾರೆ. ಕಷ್ಟಗಳೆಲ್ಲ ಕಳೆದು ಒಳ್ಳೆ ದಿನಗಳು ಬರುತ್ತದೆಂದು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಮೈಲಾರ ಲಿಂಗೇಶ್ವರನ ಸನ್ನಿಧಿಯಲ್ಲಿ
ಅನ್ಯ ಸಮುದಾಯದವನ ಪ್ರೀತಿ: ಕೊಟ್ಟೂರಿನಲ್ಲಿ ತಂದೆ, ತಾಯಿ, ಗರ್ಭಿಣಿ ಸೋದರಿ ಹತ್ಯೆಗೆ ಕಾರಣ
ವಿಜಯನಗರದ ಕೊಟ್ಟೂರಿನಲ್ಲಿ ತಂದೆ, ತಾಯಿ, ಸೋದರಿಯ ಹತ್ಯೆ ಪ್ರಕರಣ ತನಿಖೆ ಕೈಗೊಂಡಿದ್ದ ಪೊಲೀಸರು ಈ ಭೀಕರ ಕೊಲೆಗೆ ಕಾರಣವೇನು ಎಂಬುದನ್ನು ಬಯಲಿಗೆಳೆದಿದ್ದಾರೆ. ತಂಗಿ ಅನ್ಯ ಸಮುದಾಯದವನನ್ನು ಪ್ರೀತಿಸುತ್ತಿದ್ದು, ಗರ್ಭಿಣಿಯಾ ಗಿರುವ ಕಾರಣಕ್ಕೆ ಕುಟುಂಬದ ಗೌರವ ಉಳಿಸಲು ಮೂವರನ್ನೂ ಕೊಲೆ ಮಾಡಿದ್ದಾಗಿ ಆರೋಪಿ
ಕೊಟ್ಟೂರಿನಲ್ಲಿ ತಂದೆ, ತಾಯಿ, ಸೋದರಿಯ ಕೊಲೆ ಮಾಡಿ ನಾಪತ್ತೆ ದೂರು
ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ತಂದೆ, ತಾಯಿ ಮತ್ತು ಸಹೋದರಿಯನ್ನು ವ್ಯಕ್ತಿ ಕೊಲೆ ಮಾಡಿ ನಾಪತ್ತೆ ಎಂದು ದೂರು ದಾಖಲಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ. ಸತ್ಯ ತಿಳಿದ ಕೊಟ್ಟೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅಕ್ಷಯ ಕುಮಾರ ಕೊಲೆ ಮಾಡಿದ
ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು: ಸಾರ್ವಜನಿಕರಿಗೆ ಎಚ್ಚರಿಕೆ
ವಿಜಯನಗರದ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಜ.20 ರಿಂದ ಜ. 30ರವರೆಗೆ ಪ್ರತಿ ದಿನ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ 500 ಕ್ಯೂಸೆಕ್ ನಂತೆ ಒಟ್ಟು 0.50 ಟಿ.ಎಂ.ಸಿ ನೀರನ್ನು ಹರಿಸಲಾಗುವುದು. ಈ




