Menu

Kantara Chapter 1 ಚಿತ್ರೀಕರಣ ವೇಳೆ ದೋಣಿ ದುರಂತ: ವರದಿ ಕೇಳಿದ ತಹಶೀಲ್ದಾರ್‌

ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನದ ಕಾಂತಾರ ಚಾಪ್ಟರ್-1 ಸಿನಿಮಾ ತಂಡಕ್ಕೆ ಹೊಸನಗರ ತಹಶೀಲ್ದಾರ್ ಕಚೇರಿಯಿಂದ ನೋಟಿಸ್‌ ನೀಡಲಾಗಿದ್ದು, ಮೂರು ದಿನಗಳ ಒಳಗೆ ಸ್ಪಷ್ಟನೆ ನೀಡುವಂತೆ ಕೇಳಲಾಗಿದೆ.

ಜೂನ್‌ 14 ರಂದು ತೀರ್ಥಹಳ್ಳಿ ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ದೋಣಿ ಮಗುಚಿದ ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಮಾಧ್ಯಮಗಳ ಜೊತೆ ಮಾತನಾಡಿದ್ದರು. ಮಾಣಿ ಜಲಾಶಯದಲ್ಲಿ ಶೂಟಿಂಗ್ ಮಾಡಲು ವಿವಿಧ ಇಲಾಖೆಗಳಿಂದ ಅನುಮತಿ ಪಡೆದಿರುವ ಬಗ್ಗೆ ತಾಲೂಕು ಆಡಳಿತ ಇಲ್ಲವೇ ಜಿಲ್ಲಾ ಆಡಳಿತಕ್ಕಾಗಲಿ ಯಾವುದೇ ಮಾಹಿತಿಯನ್ನು ಚಿತ್ರತಂಡ ನೀಡಿರುವುದಿಲ್ಲ ಎಂದು ಹೇಳಿದ್ದರು.

ಶೂಟಿಂಗ್ ವೇಳೆ ಮಾಣಿ ಜಲಾಶಯದಲ್ಲಿ ದೋಣಿ ಮಗುಚಿ 30 ಜನ ಈಜಿ ದಡ ಸೇರಿರುವ ಬಗ್ಗೆ ಸ್ಪಷ್ಟನೆ ಮಾತ್ರ ನೀಡಿದೆ. ಈ ಬಗ್ಗೆ ಜಿಲ್ಲಾ ಅಧಿಕಾರಿ ವರದಿ ಕೇಳಿದ್ದು, ರಾಜಸ್ವ ನಿರೀಕ್ಷಕರು, ನಗರ ಹೋಬಳಿಯವರು ನಿಮ್ಮ ಸಂಸ್ಥೆಯ ಮ್ಯಾನೇಜರ್‌ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅನುಮತಿ ಪತ್ರ ಹಾಜರುಪಡಿಸುವಂತೆ ಹೇಳಿದ್ದರೂ ಯಾವುದೇ ಸ್ಪಂದನೆ ಸಿಕ್ಕಿರುವುದಿಲ್ಲ ಎಂದು ತಹಸೀಲ್ದಾರ್‌ ಕಚೇರಿಯ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಮಾಣಿ ಜಲಾಶಯದಲ್ಲಿ ನಡೆದ ಘಟನೆಯ ಬಗ್ಗೆ ಸಂಪೂರ್ಣ ವರದಿ ಮತ್ತು ಸ್ಪಷ್ಟನೆಯನ್ನು ಪತ್ರ ತಲುಪಿದ ಮೂರುದಿನಗಳ ಒಳಗಾಗಿ ನೀಡುವಂತೆ ಸೂಚಿಸಲಾಗಿದೆ. ಇಲ್ಲವಾದಲ್ಲಿ ಶೂಟಿಂಗ್‌ಗೆ ನೀಡಿರುವ ಅನುಮತಿಯನ್ನು ರದ್ದುಗೊಳಿಸಿ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ. ಈಗ ತಹಶೀಲ್ದಾರ್ ನೋಟಿಸ್‌ಗೆ ಚಿತ್ರತಂಡ ಉತ್ತರಿಸುವ ಜೊತೆಗೆ ಚಿತ್ರೀಕರಣದ ಅನುಮತಿ ಪತ್ರಗಳನ್ನು ಸಲ್ಲಿಸಬೇಕಾಗಿದೆ.

ಕಾಂತಾರ ಚಾಪ್ಟರ್-1 ಸಿನಿಮಾ ಚಿತ್ರೀಕರಣ ಅವಧಿಯಲ್ಲಿ ತಂಡದ ಮೂವರು ಕಲಾವಿದರು ಮೃತಪಟ್ಟಿದ್ದಾರೆ. ಕೊನೆ ಹಂತದ ಚಿತ್ರೀಕರಣ ವೇಳೆ ದೋಣಿ ಅನಾಹುತ ನಡೆದು ಮೂವತ್ತು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related Posts

Leave a Reply

Your email address will not be published. Required fields are marked *