Monday, September 07, 2026
Menu

ಬಿಆರ್‌ಎಸ್‌ ಶಾಸಕಿ ಸ್ಥಾನಕ್ಕೆ ಕವಿತಾ ರೆಡ್ಡಿ ರಾಜೀನಾಮೆ

ಬಿಆರ್‌ಎಸ್‌ನಿಂದ ಅಮಾನತುಗೊಂಡ ಕೆ. ಕವಿತಾ ರೆಡ್ಡಿ ಅವರು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಆರ್‌ಎಸ್‌ಗೆ ಮತ್ತು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು
ಪರಿಷತ್ತಿನ ಸ್ಪೀಕರ್‌ಗೆ ಸಲ್ಲಿಸುತ್ತಿರುವುದಾಗಿ ಹೇಳಿದ್ದಾರೆ.

ತಿಹಾರ್ ಜೈಲಿನಿಂದ ಬಿಡುಗಡೆಯಾದಾಗಿನಿಂದ ನಾನು ನಾನಾ ಕಾರಣಗಳಿಗಾಗಿ ಹೋರಾಡುತ್ತಿದ್ದೇನೆ ಎಂದು ಕವಿತಾ ಮಂಗಳವಾರ ಹೇಳಿದ್ದು, ನನ್ನ ವಿರುದ್ಧ ದುರುದ್ದೇಶಪೂರಿತ ಪ್ರಚಾರ ನಡೆದಾಗ ಸಹೋದರ ರಾಮರಾವ್ ನನ್ನನ್ನು ಬೆಂಬಲಿಸಲಿಲ್ಲ, ತಂದೆಗೆ ತನ್ನ ಸುತ್ತ ಏನು ನಡೆಯುತ್ತಿದೆ ಎಂಬುದನ್ನು ಗಮನಿಸಬೇಕು ಎಂದಿದ್ದಾರೆ.

ನನ್ನ ಅಮಾನತು ಇಡೀ ಬಿಆರ್‌ಎಸ್ ಅನ್ನು ನಿಯಂತ್ರಿಸುವ ಪಿತೂರಿಯ ಭಾಗ ಎಂದು ಕವಿತಾ ಆರೋಪಿಸಿದ್ದಾರೆ. ತೆಲಂಗಾಣದ ಮಾಜಿ ಸಿಎಂ ಮತ್ತು ಬಿಆರ್‌ಎಸ್ ಮುಖ್ಯಸ್ಥ ಕೆ ಚಂದ್ರಶೇಖರ್ ರಾವ್ ಪುತ್ರಿ ಕೆ. ಕವಿತಾ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಬಿಆರ್‌ಎಸ್‌ನಿಂದ ಹೊರಹಾಕಲಾಗಿದೆ

ಸೋದರಸಂಬಂಧಿಗಳಾದ ಟಿ. ಹರೀಶ್ ರಾವ್ ಮತ್ತು ಜೆ. ಸಂತೋಷ್ ಕುಮಾರ್ ಅವರು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಜೊತೆ ಕವಿತಾ ಗೌಪ್ಯ ರಾಜಕೀಯ ಸಂಬಂಧ ಹೊಂದಿದ್ದಾರೆ ಎಂದು ಬಹಿರಂಗವಾಗಿ ಆರೋಪ ಮಾಡಿದ್ದರು. ಹೀಗಾಗಿ ಬಿಆರ್‌ಎಸ್ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ಕವಿತಾ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದ್ದರು. ಕವಿತಾ ಅವರ ಇತ್ತೀಚಿನ ನಡವಳಿಕೆ ಮತ್ತು ನಡೆಯುತ್ತಿರುವ ಪಕ್ಷ ವಿರೋಧಿ ಚಟುವಟಿಕೆಗಳು ಪಕ್ಷಕ್ಕೆ ಹಾನಿ ಮಾಡುತ್ತಿವೆ, ಆದ್ದರಿಂದ ಪಕ್ಷದ ನಾಯಕತ್ವವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಬಿಆರ್‌ಎಸ್ ಪೋಸ್ಟ್ ಮಾಡಿದೆ.

Related Posts

Leave a Reply

Your email address will not be published. Required fields are marked *