Saturday, January 31, 2026
Menu

ರಣಜಿ ಟ್ರೋಫಿ: ಕರ್ನಾಟಕಕ್ಕೆ 7 ರನ್ ಮಹತ್ವದ ಮುನ್ನಡೆ!

ಮೊಹಾಲಿ: ಆಲ್ ರೌಂಡರ್ ಶ್ರೇಯಸ್ ಗೋಪಾಲ್ ಹೋರಾಟದ ಅರ್ಧಶತಕದ ನೆರವಿನಿಂದ ಕರ್ನಾಟಕದ ತಂಡ ರಣಜಿ ಟ್ರೋಫಿ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಪಂಜಾಬ್ ವಿರುದ್ಧ 7 ರನ್ ಗಳ ರೋಚಕ ಮುನ್ನಡೆ ಸಾಧಿಸಿದೆ. ಮೊಹಾಲಿಯಲ್ಲಿ ನಡೆಯುತ್ತಿರುವ ಪಂದ್ಯದ ಮೂರನೇ ದಿನವಾದ ಶನಿವಾರ 6 ವಿಕೆಟ್ ಗೆ 255 ರನ್ ಗಳಿಂದ ಆಟ ಮುಂದುವರಿಸಿದ ಕರ್ನಾಕ ತಂಡ ಚಹಾ ವಿರಾಮ ವೇಳೆಗೆ 316 ರನ್ ಗೆ ಆಲೌಟಾಯಿತು.  ಪಂಜಾಬ್ ತಂಡವನ್ನು 309

ಭಾರತದಲ್ಲಿ ಆಡಲ್ಲ ಅಂದ ಬಾಂಗ್ಲಾ ವಿಶ್ವಕಪ್ ನಿಂದ ಔಟ್: ಸ್ಕಾಟ್ಲೆಂಡ್ ಇನ್!

ನವದೆಹಲಿ: ಭಾರತದಲ್ಲಿ ಟಿ-20 ವಿಶ್ವಕಪ್ ಟೂರ್ನಿ ಆಡಲು ನಿರಾಕರಿಸಿದ ಬಾಂಗ್ಲಾದೇಶ ತಂಡವನ್ನು ಕೈಬಿಟ್ಟ ಐಸಿಸಿ ಸ್ಕಾಟ್ಲೆಂಡ್ ತಂಡಕ್ಕೆ ವಿಶ್ವಕಪ್ ನಲ್ಲಿ ಆಡಲು ಅವಕಾಶ ನೀಡಿದೆ. ಶನಿವಾರ ನಡೆದ ಐಸಿಸಿ ಮಂಡಳಿ ಸಭೆಯಲ್ಲಿ ಬಾಂಗ್ಲಾದೇಶ ತನ್ನ ನಿಲುವು ಬದಲಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ವಿಶ್ವಕಪ್

ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನಡೆಸಲು ಗ್ರೀನ್ ಸಿಗ್ನಲ್!

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲು ರಾಜ್ಯ ಗೃಹ ಇಲಾಖೆ ಅನುಮತಿ ನೀಡಿದೆ. ಈ ಮೂಲಕ ತವರಿನ ಪಂದ್ಯಗಳು ಕೈ ತಪ್ಪುವ ಭೀತಿಯಲ್ಲಿದ್ದ ಆರ್ ಸಿಬಿ ಅಭಿಮಾನಿಗಳಿಗೆ ಖುಷಿಯಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ

ತುಮಕೂರಿನಲ್ಲಿ ಫಾಯಿಲ್ ಫೆನ್ಸಿಂಗ್‌: ಬೆಂಗಳೂರು ಹುಡುಗ-ಹುಡುಗಿಯರದ್ದೇ ದರ್ಬಾರ್

ತುಮಕೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದ ಮಹಿಳೆಯರ ಫಾಯಿಲ್ ಫೆನ್ಸಿಂಗ್‌ನಲ್ಲಿ ಬೆಂಗಳೂರು ಗ್ರಾಮಂತರದ ಸಯೆದಾ ಇಫ್ತಾಖರ್ ಬಾನು ಸ್ವರ್ಣ ಪದಕ ಗೆದ್ದುಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರದ ಶ್ರೀರಕ್ಷಾ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರೆ, ಬೆಂಗಳೂರು ನಗರದ ಧೃತಿಕಾ ಎನ್. ಅಂದನ್ ಮತ್ತು ಪಿಸಿ ನಿಶಾ ಕಂಚಿನ

ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ: ಮುಖ್ಯಮಂತ್ರಿ ಸಿದ್ದರಾಮಯ್ಯ

ತುಮಕೂರು ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿ, ತುಮಕೂರಿನಿಂದ ವಿಶ್ವಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಪಟುಗಳಿಗೆ ಶುಭಕೋರಿದರು. ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಕ್ರೀಡಾಕೂಟ -2025 -2026 ಕ್ರೀಡಾಕೂಟ ವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ

15 ನಿಮಿಷ ತಡವಾಗಿ ಗವಿಗಂಗಾಧರೇಶ್ವರ ದೇವಸ್ಥಾನದ ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ!

ಸಂಕ್ರಾಂತಿಯಂದು ಬೆಂಗಳೂರಿನ ಖ್ಯಾತ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಪ್ರಕೃತಿ ವಿಸ್ಮಯ ಈ ಬಾರಿಯೂ ನೆರವೇರಿದ್ದು, ಶಿವಲಿಂಗವನ್ನು ನಿಗದಿತ ಸಮಯಕ್ಕಿಂತ 15 ನಿಮಿಷ ತಡವಾಗಿ ಸೂರ್ಯ ರಶ್ಮಿ ಸ್ಪರ್ಶಿಸಿದೆ. ಪ್ರತಿ ವರ್ಷ ಸಂಕ್ರಾಂತಿಯಂದು ನಡೆಯುವ ಪ್ರಕೃತಿಯ ಈ ವಿಸ್ಮಯ ನೋಡಲು ಭಕ್ತ ಸಾಗರವೇ ಗಂಗಾಧರೇಶ್ವರನ

ಪುಣೆ ಗ್ರ್ಯಾಂಡ್ ಟೂರ್ 2026ರ ಗುಡ್‌ವಿಲ್ ಅಂಬಾಸಿಡರ್ ಆಗಿ ಎಂಎಸ್ ಧೋನಿ ನೇಮಕ

ಬೆಂಗಳೂರು: ಭಾರತದ ಮಾಜಿ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಯನ್ನು ಬಹು ನಿರೀಕ್ಷಿತ ಬಜಾಜ್ ಪುಣೆ ಗ್ರ್ಯಾಂಡ್ ಟೂರ್ 2026ರ ಗುಡ್‌ವಿಲ್ ಅಂಬಾಸಿಡರ್ ಆಗಿ ನೇಮಕ ಮಾಡಲಾಗಿದೆ. ಇದು ಭಾರತದ ಮೊದಲ ಅಂತರರಾಷ್ಟ್ರೀಯ ಸೈಕ್ಲಿಂಗ್ ರೋಡ್ ರೇಸ್ ಆಗಿದ್ದು, ಜನವರಿ

ಮುಂಬೈ ಮ್ಯಾರಥಾನ್ 2026; ಮಂಗಳೂರಿನಲ್ಲಿ ಪ್ಯಾಲಿಯೇಟಿವ್ ಕೇರ್ ಗಾಗಿ 5 ಲಕ್ಷ ನಿಧಿ ಸಂಗ್ರಹಿಸಿದ ಹಸೀನಾ ಥೆಮಾಲಿ!

ಬೆಂಗಳೂರು: 43 ವರ್ಷದ ಓಟಗಾರ್ತಿ ಹಾಗೂ ಕೋಚ್ ಆಗಿರುವ ಹಸೀನಾ ಥೆಮಾಲಿ ಮುಂಬೈ ಮ್ಯಾರಥಾನ್ (TMM) 2026ರಲ್ಲಿ ಮೊದಲ ಬಾರಿಗೆ ನಿಧಿ ಸಂಗ್ರಾಹಕರಾಗಿ ಭಾಗವಹಿಸಿ ₹5,01,001 ಮೊತ್ತವನ್ನು ಸಂಗ್ರಹಿಸಿದ್ದಾರೆ. 95 ದಾನಿಗಳ ಬೆಂಬಲದೊಂದಿಗೆ ನಡೆದ ಈ ನಿಧಿ ಸಂಗ್ರಹ ಅಭಿಯಾನವು ಕರ್ನಾಟಕದಲ್ಲಿ

ಏಕದಿನ ಸರಣಿಯಿಂದ ಹೊರಬಿದ್ದ ವಾಷಿಂಗ್ಟನ್, ಆಯುಷ್ ಬದೋನಿಗೆ ಸ್ಥಾನ!

ಗಾಯಗೊಂಡಿರುವ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಇವರ ಸ್ಥಾನಕ್ಕೆ ಆಯುಷ್ ಬದೋನಿ ಅವರನ್ನು ಆಯ್ಕೆ ಮಾಡಲಾಗಿದೆ. ವಡೋದರದಲ್ಲಿ ಭಾನುವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಬೌಲಿಂಗ್ ವೇಳೆ ವಾಷಿಂಗ್ಟನ್ ಸುಂದರ್ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು.

ರಾಯ್ ಪುರದಲ್ಲಿ ಆರ್ ಸಿಬಿ ತವರಿನ ಪಂದ್ಯಗಳು?

ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬೆಂಗಳೂರು ಇನ್ನು ಮುಂದೆ ತವರು ಆಗಿರುವುದಿಲ್ಲ. ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಇನ್ನು ಬೆಂಗಳೂರಿನಲ್ಲಿ ಆಡುವುದಿಲ್ಲ! ಹೌದು, ಬೆಂಗಳೂರಿನಲ್ಲಿ ಕಳೆದ ವರ್ಷ ಆರ್ ಸಿಬಿ ಸಂಭ್ರಮದ ವೇಳೆ ನಡೆದ ಕಾಲ್ತುಳಿತ ಪ್ರಕರಣದ