ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ ಆಯೋಜಿಸಿದ್ದ 15ನೇ ವಿಶ್ವ ಸಂವಹನ ಸಮಾವೇಶ ಮತ್ತು ಎಕ್ಸಲೆನ್ಸ್ ಅವಾರ್ಡ್ಸ್ 2025ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) 9 ವಿಭಾಗಗಳಲ್ಲಿ ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ಪಡೆದಿದೆ. ಈ ಸಾಧನೆಯ ಮೂಲಕ ಕೆಎಸ್ಆರ್ಟಿಸಿ ಆಧುನಿಕ ತಂತ್ರಜ್ಞಾನ, ನವೀನ ಚಟುವಟಿಕೆಗಳು ಹಾಗೂ ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಕಾರ್ಯಾಚರಣೆಗಳಲ್ಲಿ ತನ್ನ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.
ಕೆಎಸ್ಆರ್ಟಿಸಿ ಪಡೆದ ಪ್ರಶಸ್ತಿಗಳು:
- ಡಿಜಿಟಲ್ ಮೀಡಿಯಾ ಇನೋವೇಶನ್ (ಚಿನ್ನದ ಪದಕ)
- ಹೌಸ್ ಜರ್ನಲ್ ಪ್ರಿಂಟ್ (ಪ್ರಾದೇಶಿಕ) (ಚಿನ್ನದ ಪದಕ)
- ಹೆಲ್ತ್ ಕೇರ್ ಕಮ್ಯುನಿಕೇಶನ್ ಫಿಲ್ಮ್ಸ್ (ಬೆಳ್ಳಿ ಪದಕ)
- ವಿಶಿಷ್ಟ ಮಾನವ ಸಂಪನ್ಮೂಲ ಕಾರ್ಯಕ್ರಮ (ಕಂಚಿನ ಪದಕ)
- ಗ್ರಾಹಕ ಸೇವಾ ಶ್ರೇಷ್ಠತೆ
- ಬ್ರಾಂಡಿಂಗ್
- ವೆಬ್ಸೈಟ್ ಮತ್ತು ಮೈಕ್ರೋಸೈಟ್
- ಕಾರ್ಪೊರೇಟ್ ಫಿಲ್ಮ್ಸ್
- ಮಾರ್ಕೆಟಿಂಗ್ ಕ್ಯಾಂಪೇನ್ ಮತ್ತು ಆಂತರಿಕ ಕಮ್ಯುನಿಕೇಶನ್ ಕ್ಯಾಂಪೇನ್
ಗೋವಾದ ಖಾಸಗಿ ಹೋಟೆಲ್ನಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಗೋವಾ ವಿಧಾನಸಭಾಧ್ಯಕ್ಷ ಡಾ. ಗಣೇಶ್ ಗಾಂವ್ಕರ್, ನಟಿ-ಗಾಯಕಿ ಎಸ್ಟರ್ ವ್ಯಾಲೆರಿ ನೊರೊನ್ಹಾ, ನಟ-ರೂಪದರ್ಶಿ ಮಿಲಿನ್ ತೆಂಡೂಲ್ಕರ್ ಹಾಗೂ ಪಿಆರ್ಸಿಐ ಅಧ್ಯಕ್ಷ ಎಂ.ಬಿ. ಜಯರಾಮ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಕೆಎಸ್ಆರ್ಟಿಸಿ ಪರವಾಗಿ ತುಮಕೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್ ಹಾಗೂ ಚಿಕ್ಕಬಳ್ಳಾಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜು ಅವರು ಪ್ರಶಸ್ತಿಗಳನ್ನು ಸ್ವೀಕರಿಸಿದರು.