Menu

Lokayukta: ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಇಂದು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಆಸ್ತಿ  ಮತ್ತು ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.

ಶಿವಮೊಗ್ಗದ ಅರ್ಗ್ಯಾನಿಕ್ ಫಾರ್ಮಿಂಗ್ ಸಹಾಯಕ ನಿರ್ದೇಶಕ ಪ್ರದೀಪ್, ಚಿಕ್ಕಮಗಳೂರು ನಗರಸಭೆ ಅಧಿಕಾರಿ ಲತಾಮಣಿ ಮನೆ, ಆನೇಕಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೆ.ಜಿ.ಅಮರನಾಥ್, ಗದಗದ ಪಟ್ಟಣ ಪೊಲೀಸ್ ನಿರೀಕ್ಷಕ ಧ್ರುವರಾಜ್​, ಧಾರವಾಡ ಮಲಪ್ರಭಾ ಯೋಜನೆ ಇಂಜಿನಿಯರ್ ಅಶೋಕ್ ವಾಲ್ಸಂದ್, ಕಲಬುರಗಿ ಪಿಆರ್​ಇ ವಿಭಾಗದ ಇಇ ಮಲ್ಲಿಕಾರ್ಜುನ ಅಲಿಪುರ, ಸಣ್ಣೂರು ಗ್ರಾ.ಪಂ. ಪಿಡಿಒ ರಾಮಚಂದ್ರ ಮನೆಗಳ ಮೇಲೆ ಲೋಕಾಯುಕ್ತ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.

ಗೋವಿಂದರಾಜನಗರ- ಬೆಂಗಳೂರು ಪ್ರಕಾಶ್ ಎಇ, ಬಿಬಿಎಂಪಿ ಹಾಗೂ ಗದಗ ಶಹರ ಠಾಣೆ ಸಿಪಿಐ ಡಿಬಿ ಪಾಟೀಲ್ ಅವರ ಗದಗದ ಶಿವಾನಂದ ನಗರದ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆದಿದೆ. ಅವರ ಬಾಗಲಕೋಟೆ, ಜಮಖಂಡಿಯಲ್ಲಿರುವ ಮನೆಗಳ ಮೇಲೂ ದಾಳಿ ನಡೆದಿದೆ. ಕೆರೂರಿನಲ್ಲಿರುವ ಮನೆ ಮೇಲೂ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಲಾಗಿದೆ.

Related Posts

Leave a Reply

Your email address will not be published. Required fields are marked *