ಲಂಚ ಪಡೆಯುತ್ತಿದ್ದಾಲೇ ಮಧುಗಿರಿಯ ಸಹಕಾರ ಸಂಘಗಳ ಉಪ ನಿಬಂಧಕ ಸಣ್ಣಪಯ್ಯ ಮತ್ತು ಸಹಾಯಕ ನಿರೀಕ್ಷಕ ರಾಘವೇಂದ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಶಿರಾ ತಾಲೂಕಿನ ಎಲೆಯೂರು ಗ್ರಾಮದ ಮೀನುಗಾರಿಕೆ ಸಹಕಾರ ಸಂಘದ ಖಾತೆಯನ್ನು ಬ್ಲಾಕ್ ಮಾಡಲಾಗಿತ್ತು, ಈ ಖಾತೆಯ ಬ್ಲಾಕ್ ಅನ್ನು ತೆರವುಗೊಳಿಸಲು ಅಧಿಕಾರಿಗಳು 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಮೀನುಗಾರಿಕೆ ಸಂಘದ ಪದಾಧಿಕಾರಿ ರವೀಶ್ ಲೋಕಾಯುಕ್ತರಿಗೆ ದೂರು ನೀಡಿದ್ದರು, ದೂರಿನ ಅನ್ವಯ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಬಂಧಿತರಾಗಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಸಂತೋಷ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ಗಳಾದ ರಾಜು, ಸಲೀಂ, ಸುರೇಶ್, ಶಿವ ರುದ್ದಪ್ಪ ದಾಳಿ ನಡೆಸಿದ್ದರು.