Menu

ಪಿಎಂಒ ಅಧಿಕಾರಿ ಸೋಗಿನಲ್ಲಿ INS ವಿಕ್ರಾಂತ್ ಮಾಹಿತಿ ಕೇಳಿದ್ದ ವ್ಯಕ್ತಿಯ ಬಂಧನ

ಪ್ರಧಾನಮಂತ್ರಿ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡು ನೌಕಾಪಡೆಯ ಐಎನ್‌ಎಸ್‌ ವಿಕ್ರಾಂತ್ ಹಡಗಿನ ಬಗ್ಗೆ ಮಾಹಿತಿ ಕೇಳಿದ್ದ ಕೇರಳದ ವ್ಯಕ್ತಿಯನ್ನು ಪೊಲೀಸರು ಕೊಚ್ಚಿಯಲ್ಲಿ ಬಂಧಿಸಿದ್ದಾರೆ.

ಕೇರಳದ ಕೋಝಿಕೋಡ್ ಎಲ್ತೂರ್ ನಿವಾಸಿ ಮುಜೀಬ್ ರೆಹಮಾಮ್ ಬಂಧಿತ ಆರೋಪಿ. ತಾನು ಪ್ರಧಾನ ಮಂತ್ರಿ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡು ಆರೋಪಿ ಕೊಚ್ಚಿ ನೌಕಾ ಪ್ರಧಾನ ಕಚೇರಿಗೆ ಕರೆ ಮಾಡಿ, ಐಎನ್‌ಎಸ್‌ ವಿಕ್ರಾಂತ್ ಬಗ್ಗೆ ಮಾಹಿತಿ ಕೇಳಿ,ವಿಕ್ರಾಂತ್ ಇರುವ ನಿಖರವಾದ ಸ್ಥಳವನ್ನು ತಿಳಿಸುವಂತೆ ಕೇಳಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯ ಮಾತುಗಳಿಂದ ಅನುಮಾನಗೊಂಡ ನೌಕಾಪಡೆಯ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದಾದ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ. ನೌಕಾಪಡೆ ಅಧಿಕಾರಿಗಳು ಹಾಗೂ ಐಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ಮುಜೀಬ್ ರೆಹಮಾಮ್ ಖಿನ್ನತೆಯಿಂದ ಬಳತ್ತಿದ್ದಾನೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

Related Posts

Leave a Reply

Your email address will not be published. Required fields are marked *