ಬೀದರ್ನ ಹುಮನಾಬಾದ್ ರೈಲು ನಿಲ್ದಾಣದ ಬಳಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು 31 ವರ್ಷದ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಕಲ್ಬುರ್ಗಿಯಿಂದ ಬೀದರ್ಗೆ ಸಂಚರಿಸುತ್ತಿದ್ದ ಲೋಕಲ್ ರೈಲಿನಲ್ಲಿ ಈ ದುರಂತ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಕಲ್ಬುರ್ಗಿಯ ಬಸವನಗರ ನಿವಾಸಿ ವಿಜಯಾನಂದ (31) ಎಂದು ಗುರುತಿಸಲಾಗಿದೆ.
ರೈಲು ಹುಮನಾಬಾದ್ ರೈಲ್ವೆ ನಿಲ್ದಾಣದ ಬಳಿ ನಿಂತಾಗ ನೀರು ತರಲು ವಿಜಯಾನಂದ ಕೆಳಗಿಳಿದಿದ್ದರು. ರೈಲು ಮತ್ತೆ ಚಲಿಸಲು ಆರಂಭಿಸಿದಾಗ ಅವಸರದಲ್ಲಿ ರೈಲನ್ನು ಹತ್ತಲು ಯತ್ನಿಸಿ ಕಾಲು ಜಾರಿ ರೈಲಿನಿಂದ ಕೆಳಗೆ ಬಿದ್ದಿದ್ದಾರೆ. ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಅಸು ನೀಗಿದ್ದಾರೆ.
ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆಕಸ್ಮಿಕ ಸಾವು ಎಂದು ತಿಳಿದುಬಂದಿದ್ದು, ರೈಲ್ವೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಘಟನೆಯಿಂದಾಗಿ ಕಲ್ಬುರ್ಗಿ-ಬೀದರ್ ರೈಲು ಮಾರ್ಗದಲ್ಲಿ ಸಂಚಾರ ವ್ಯತ್ಯಯ ಉಂಟಾಗಿತ್ತು.