ಪ್ರಯಾಗ್ ರಾಜ್ನಲ್ಲಿ ನಡೆದ ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಕಡೂರು ತಾಲೂಕಿನ ತಂಗಲಿ ಗ್ರಾಮದ ನರಸಿಂಹಮೂರ್ತಿ 6 ತಿಂಗಳ ಬಳಿಕ ಪತ್ತೆಯಾಗಿದ್ದಾರೆ.
ಜನವರಿ 28ರಂದು ಪ್ರಯಾಗ್ ರಾಜ್ ನಲ್ಲಿ ನಾಪತ್ತೆಯಾಗಿದ್ದ ನರಸಿಂಹಮೂರ್ತಿ ತಂಗಲಿ ಗ್ರಾಮದ ಚನ್ನಕೇಶವ ಸ್ವಾಮಿ ದೇವಾಲಯದ ಅರ್ಚಕ. ಪುತ್ರ ಬದರೀನಾಥ್ ಜೊತೆ ಕುಟುಂಬ ಸಮೇತ ಕುಂಭ ಮೇಳಕ್ಕೆ ಹೋಗಿದ್ದರು
ಅಲ್ಲಿ ನಾಪತ್ತೆಯಾಗಿದ್ದ ಅವರನ್ನು 3-4 ದಿನ ಹುಡುಕಿದ ಪುತ್ರ ಬದರೀನಾಥ್ ಕುಟುಂಬದೊಂದಿಗೆ ಊರಿಗೆ ವಾಪಸಾಗಿದ್ದರು. ಬಳಿಕ ಕುಟುಂಬವನ್ನು ಊರಲ್ಲಿ ಬಿಟ್ಟು ಮತ್ತೆ ಹೋಗಿ ಹುಡುಕಿದ್ದರೂ ಸಿಕ್ಕಿರಲಿಲ್ಲ.
6 ತಿಂಗಳ ಬಳಿಕ ನರಸಿಂಹಮೂರ್ತಿ ಮನೆಗೆ ವಾಪಸ್ ಬಂದಿದ್ದಾರೆ. ಮುಂಬೈನ ಶಾರದಾ ರಿಹ್ಯಾಬಿಲಿಟೇಷನ್ ಸಂಸ್ಥೆಯ ಆಶ್ರಯದಲ್ಲಿದ್ದ ನರಸಿಂಹಮೂರ್ತಿ ಅವರನ್ನು ಆ ಸಂಸ್ಥೆಯವರೇ ಕರೆತಂದು ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ