Menu

ಶ್ರೀ ಮುರುಡೇಶ್ವರ ಕ್ಷೇತ್ರದಲ್ಲಿ ವಸ್ತ್ರ ಸಂಹಿತೆ ಕಡ್ಡಾಯ

ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶ್ರೀ ಮುರುಡೇಶ್ವರ ಕ್ಷೇತ್ರದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡಲು ಆಡಳಿತ ಮಂಡಳಿ ಮುಂದಾಗಿದೆ. ಪುರುಷರಿಗೆ ಪಂಚೆ ಮತ್ತು ಮಹಿಳೆಯರಿಗೆ ಸೀರೆ, ಚೂಡಿದಾರ ಬಳಕೆಗೆ ಅವಕಾಶ ನೀಡಿ ದೇವಾಲಯದ ಎದುರುಗಡೆ ಆಡಳಿತ ಮಂಡಳಿ ಸೂಚನಾ ಫಲಕ ಹಾಕಿದೆ.

ದೇವಾಲಯದ ಒಳ ಪ್ರವೇಶಕ್ಕೆ ವಸ್ತ್ರ ಸಂಹಿತೆ ಕಡ್ಡಾಯವಾಗಿದೆ. ಕಳೆದ ಹಲವು ವರ್ಷಗಳಿಂದ ಹಿಂದೂ ಪರ ಸಂಘಟನೆಯವರು ವಸ್ತ್ರ ಸಂಹಿತೆ ಜಾರಿ ತರಲು ಮನವಿ ಮಾಡಿದ್ದರು. ಇದೀಗ ಆಡಳಿತ ಮಂಡಳಿ ವಸ್ತ್ರ ಸಂಹಿತೆ ಜಾರಿ ಮಾಡಿದೆ.

ಜನರಲ್ಲಿ ಅರಿವು ಮೂಡಿಸುವ ದೃಷ್ಟಿಯಿಂದ ವಸ್ತ್ರ ಸಂಹಿತೆ ಜಾರಿ ಬೋರ್ಡ್ ಅಳವಡಿಸಲಾಗಿದ್ದು, ಎರಡು ತಿಂಗಳ ಬಳಿಕ ವಸ್ತ್ರಸಂಹಿತೆಯನ್ನು ದೇವಸ್ಥಾನ ಆಡಳಿತ ಮಂಡಳಿ ಕಡ್ಡಾಯಗೊಳಿಸಲಿದೆ.

Related Posts

Leave a Reply

Your email address will not be published. Required fields are marked *