Menu

ಒಳಮೀಸಲಾತಿ ಸಮೀಕ್ಷೆಯಲ್ಲಿ ಮೂಲ ಜಾತಿ ನೋಂದಾಯಿಸಲು ಸಚಿವ ಕೆಎಚ್‌ ಮುನಿಯಪ್ಪ ಮನವಿ

ಒಳಮೀಸಲಾತಿ ಅನುಷ್ಠಾನ ಕುರಿತಾಗಿ ನಡೆಸುತ್ತಿರುವ ಸಮಗ್ರ ಸಮೀಕ್ಷೆಯಲ್ಲಿ ಎಲ್ಲಾ 101 ಜಾತಿಯ ಸಮುದಾಯದವರು ತಮ್ಮ ಮೂಲ ಜಾತಿಗಳನ್ನು ನೋಂದಾಯಿಸಬೇಕು ಎಂದು ಆಹಾರ ಸಚಿವ ಕೆಹೆಚ್. ಮುನಿಯಪ್ಪ  ಹೇಳಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಾದಿಗ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ಸಚಿವ ಕೆಹೆಚ್. ಮುನಿಯಪ್ಪ  ಹಾಗೂ ಅಬಕಾರಿ ಸಚಿವ ತಿಮ್ಮಾಪುರ  ನೇತೃತ್ವದಲ್ಲಿ ಈ ಸಭೆ ನಡೆಯಿತು.

ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್  ನೇತೃತ್ವದ ಏಕಸದಸ್ಯ ಆಯೋಗದ ನಿರ್ದೇಶನ ದಂತೆ ಸರ್ಕಾರದ ವತಿಯಿಂದ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ ನಡೆಸುತ್ತಿದ್ದು ಅದರಂತೆ ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಸಮೀಕ್ಷೆ ಹೆಚ್ಚಾಗಿ ನಡೆಸಲು ಆಯಾ ಭಾಗದ ಮುಖಂಡರಿಗೆ ನಿರ್ದೇಶನ ನೀಡಿದರು.

ಬೆಂಗಳೂರು ನಗರದಲ್ಲಿ ಇಲ್ಲಿಯವರೆಗೂ ಶೇಕಡ 45 ರಷ್ಟು ಸಮೀಕ್ಷೆ ನಡೆದಿದ್ದು ರಾಜ್ಯದಾದ್ಯಂತ ಶೇಕಡಾ 84 % ರಷ್ಟು ಪ್ರಮಾಣದಲ್ಲಿ ಸಮೀಕ್ಷೆಯಾಗಿದ್ದು ಸಮದಾಯದವರು ಎಲ್ಲರೂ  ಸಮೀಕ್ಷೆಯಲ್ಲಿ ಭಾಗವಹಿಸಿ ಮತ್ತು ಆನ್ ಲೈನ್ ನಲ್ಲಿಯೂ ನೋಂದಣಿ ಮಾಡಿಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು.

ಮೇ 5 ರಿಂದ ಮನೆ ಮನೆಗೆ ಬೇಟಿ ನೀಡಿ ಸಮೀಕ್ಷೆ ನಡೆಸುತ್ತಿದ್ದು ಇದೇ ತಿಂಗಳ 29 ರವರೆಗೂ ನಡೆಯಲಿದ್ದು, ಆನ್ ಲೈನ್ ಮೂಲಕ ಜೂನ್ 1ರವರೆಗೂ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅದರಂತೆ ಪರಿಶಿಷ್ಟ ಜಾತಿಯ 101 ಜಾತಿಗಳ ಸಮುದಾಯದವರು ತಮ್ಮ ಮೂಲ ಜಾತಿಗಳನ್ನು ನೋಂದಾ ಯಿಸಲು ಮುಖಂಡರಿಗೆ ಮನವಿ ಮಾಡಿದರು.

ಇದು ಸಮುದಾಯದ ಅಳಿವು ಉಳಿವಿನ ಪ್ರಶ್ನೆ, ಮಕ್ಕಳ ಭವಿಷ್ಯಕ್ಕಾಗಿ ಹಾಗೂ ಸಮುದಾಯಗಳ ಆರ್ಥಿಕ ಸಾಮಾಜಿಕ,ಹಾಗೂ ರಾಜಕೀಯವಾಗಿ ಸಬಲರಾಗಲು ಈ ಒಳಮೀಸಲಾತಿ ಅತ್ಯಗತ್ಯವಾಗಿದ್ದು ಯಾರೂ ನಿರ್ಲಕ್ಷ್ಯ ಮಾಡದೇ ಸಮಗ್ರ ಸಮೀಕ್ಷೆಯಲ್ಲಿ ಭಾಗವಹಿಸಿ ಮೂಲ ಜಾತಿಗಳ ಹೆಸರನ್ನು ನೋಂದಾಯಿಸಬೇಕು ಎಂದರು.

ಮಾಜಿ ಸಚಿವರಾದ ಹೆಚ್.ಆಂಜನೇಯ, ಮಾಜಿ ಸಂಸದ ಚಂದ್ರಪ್ಪ,ಮಾಜಿ ಶಾಸಕ ಧರ್ಮಸೇನ್, ನಿವೃತ್ತ ಐಎಎಸ್ ಅಧಿಕಾರಿಗಳಾದ ಗೋನಾಳ ಭೀಮಪ್ಪ, ತೇಗನೂರು,ಬಾಬುರಾಮ ಹುಡಬಿ,ಬೀಮಶಂಕರ್,ಮುಖಂಡರಾದ ಕೋಗಿಲು ವೆಂಕಟೇಶ್ ,ಆರ್ ಲೋಕೇಶ್,ವಿಜಯಸಿಂಹ,ಗೌತಮ್, ನಾರಾಯಣ್ ,ದೊಡ್ಡೇರಿ ವೆಂಕಟೇಶ್, ಮುತ್ತು ರಾಜ್ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Related Posts

Leave a Reply

Your email address will not be published. Required fields are marked *