Menu

ಅನುದಾನ ದುರುಪಯೋಗ: ರಾಯಚೂರಿನಲ್ಲಿ ಇಬ್ಬರು ಪಿಡಿಒಗಳ ಅಮಾನತು

ರಾಯಚೂರಿನ ಗ್ರಾಮ ಪಂಚಾಯತ್‌ಗಳಲ್ಲಿ ಕಾಮಗಾರಿ, ಸಾಮಗ್ರಿ ಖರೀದಿ ಬಿಲ್‌ಗಳಲ್ಲಿ ಅವ್ಯವಹಾರ ನಡೆಸಿರುವ, ಸರ್ಕಾರಿ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಹಾಗೂ ಕರ್ತವ್ಯ ಲೋಪ ಆರೋಪದಡಿ ಇಬ್ಬರು ಪಿಡಿಒಗಳನ್ನು ಅಮಾನತುಗೊಳಿಸಲಾಗಿದೆ.

ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಪಂ ಪಿಡಿಒ ಶಿವರಾಜ ಹಾಗೂ ಲಿಂಗಸುಗೂರು ತಾಲೂಕಿನ ಕೋಠಾ ಗ್ರಾಪಂ ಪಿಡಿಒ ಗಂಗಮ್ಮ ಇಬ್ಬರನ್ನೂ ಅಮಾನತುಗೊಳಿಸಿ ರಾಯಚೂರು ಜಿಪಂ ಸಿಇಒ ಪಾಂಡ್ವೇ ರಾಹುಲ್ ತುಕಾರಾಮ್ ಆದೇಶ ಹೊರಡಿಸಿದ್ದಾರೆ.

ಪಿಡಿಒ ಗಂಗಮ್ಮ ವಿರುದ್ಧ 15ನೇ ಹಣಕಾಸು ಯೋಜನೆಯಲ್ಲಿ 26,71,303 ರೂ. ದುರುಪಯೋಗ ಮಾಡಿದ್ದಾರೆ, ಕಾಮಗಾರಿಗಳ ಬಿಲ್ ಹಾಗೂ ಸಾಮಗ್ರಿಗಳ ಖರೀದಿ ಬಿಲ್‌ಗಳಲ್ಲಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿತ್ತು. ಹೀಗಾಗಿ ಅವರನ್ನು ಅಮಾನತುಗೊಳಿಸಲಾಗಿದೆ.

ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಪಂ ಪಿಡಿಒ ಶಿವರಾಜ, 52.81 ಲಕ್ಷ ಮೊತ್ತದ ಅಪೂರ್ಣ ದಾಖಲೆ ನೀಡಿರುವ ಮತ್ತು ಉಳಿದ 14.77 ಲಕ್ಷ ಮೌಲ್ಯದ ಹಣ ಬಳಕೆಗೆ ಸಂಬಂಧಿಸಿದ ದಾಖಲೆ ಕೊಟ್ಟಿರಲಿಲ್ಲ. ಕ್ರಿಯಾಯೋಜನೆಯ ಮೊತ್ತಕ್ಕಿಂತ ಹೆಚ್ಚು ಹಣ ಪಾವತಿಸಿ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಎಂಬ ಆರೋಪದಡಿ ಶಿವರಾಜ ಅವರನ್ನು ಅಮಾನತುಗೊಳಿಸಲಾಗಿದೆ.

Related Posts

Leave a Reply

Your email address will not be published. Required fields are marked *