Menu

ಶಾಸಕ ವಿನಯ್ ಕುಲಕರ್ಣಿ- ಐಶ್ವರ್ಯ ಗೌಡ ಕೋಟ್ಯಂತರ ರೂ. ವ್ಯವಹಾರ: ಇಡಿ ತನಿಖೆಯಲ್ಲಿ ಬಯಲು

aishwarya gowda

ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ (DK Suresh) ಹೆಸರು ಬಳಸಿ ವಂಚಿಸಿದ್ದ ಐಶ್ವರ್ಯಾ ಗೌಡ ಪ್ರಕರಣದ ತನಿಖೆಯನ್ನು ಇಡಿ ಚುರುಕುಗೊಳಿಸಿದ್ದು, ತನಿಖೆ ವೇಳೆ ಹಲವು ಸ್ಫೋಟಕ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ.

ಇಡಿ ಅಧಿಕಾರಿಗಳು ಐಶ್ವರ್ಯಾ ಗೌಡ, ಶಾಸಕ ವಿನಯ್ ಕುಲಕರ್ಣಿ ಹಾಗೂ ಶಿಲ್ಪಾಗೌಡ ನಿವಾಸ ಸೇರಿ 14 ಕಡೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಕಲೆಹಾಕಿದ್ದಾರೆ.

ಶಾಸಕ ವಿನಯ್ ಕುಲಕರ್ಣಿ ಮತ್ತು ಐಶ್ವರ್ಯ ಗೌಡ ಇಬ್ಬರೂ ಸೇರಿ ಕೋಟ್ಯಂತರ ರೂ. ವ್ಯವಹಾರ ಮಾಡಿದ್ದು, ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಐಶ್ವರ್ಯ ಗೌಡ ಸಹಾಯ ಮಾಡಿದ್ದರು ಎಂಬ ಸ್ಫೋಟಕ ಮಾಹಿತಿ ಲಭಿಸಿದೆ ಎಂದು ಹೇಳಲಾಗಿದೆ.

ವಿನಯ್ ಕುಲರ್ಣಿ ಬಳಿ 24 ಕೋಟಿ ರೂ. ಸಾಲ ಪಡೆದಿದ್ದ ಐಶ್ವರ್ಯ ಗೌಡ, ದಿನಕ್ಕೆ 24 ಲಕ್ಷ ರೂ. ಬಡ್ಡಿ ಕೊಡುವುದಾಗಿ ಹೇಳಿದ್ದರು ಎಂಬುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಇಡಿ ಅಧಿಕಾರಿಗಳು 26 ಗಂಟೆಗಳ ಕಾಲ ತಪಾಸಣೆ ನಡೆಸಿ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

ವಿನಯ್ ಕುಲಕರ್ಣಿ ಬಳಿ 24 ಕೋಟಿ ಸಾಲದ ರೂಪದಲ್ಲಿ ಪಡೆದಿದ್ದ ಐಶ್ವರ್ಯಾ, ದಿನಕ್ಕೆ ಶೇ.1ರಷ್ಟು ಬಡ್ಡಿ ಅಂದರೆ ದಿನಕ್ಕೆ 24 ಲಕ್ಷ ರೂ. ಬಡ್ಡಿ ಕೊಡುವುದಾಗಿ ಹಣ ಪಡೆದಿದ್ದಳು. ಆದರೆ, ಹಣ ಪಡೆದ ನಂತರ ಅಸಲು, ಬಡ್ಡಿ ಕೊಡದೆ ಸಮಯ ಕೇಳಿಕೊಂಡಿದ್ದಳು. ಆಗ ವಿನಯ್ ಕುಲಕರ್ಣಿ ಐಶ್ವರ್ಯಾ ಜತೆ ಮಾತುಕತೆ ನಡೆಸಿ ಒಪ್ಪಂದ ಮಾಡಿಕೊಂಡಿರುವುದು ತನಿಖೆ ವೇಳೆ ಗೊತ್ತಾಗಿದೆ. 24 ಕೋಟಿ ರೂ. ಹಣಕ್ಕೆ ಸ್ನೇಹಿತನ ಹೆಸರಿನಲ್ಲಿ ಕೈಸಾಲ ಪಡೆದಿದ್ದಾಗಿ ಅಗ್ರಿಮೆಂಟ್. ಜೊತೆಗೆ ಮಾಫಿ ಸಾಕ್ಷಿ ಟ್ರ್ಯಾಪ್ ಮಾಡುವಂತೆ ಶಾಸಕ ವಿನಯ್ ಕುಲರ್ಣಿ ಟಾಸ್ಕ್ ನೀಡಿದ್ದರು.

Related Posts

Leave a Reply

Your email address will not be published. Required fields are marked *