Menu

ಕಲಬುರಗಿ ಡಿಸಿಗೆ ಅವಹೇಳನ: ಎಂಎಲ್‌ಸಿ ಎನ್. ರವಿಕುಮಾರ್ ಬಂಧನ ಸಾಧ್ಯತೆ

ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಎಂಎಲ್‌ಸಿ ಎನ್. ರವಿಕುಮಾರ್ ಅವರಿಗೆ ಬಂಧನ ಭೀತಿ ಎದುರಾಗಿದೆ. ಮೇ 24 ರಂದು ಬಿಜೆಪಿಯ ʻಕಲಬುರಗಿ ಚಲೋʼ ರ‍್ಯಾಲಿ ವೇಳೆ  ಮಾತನಾಡುವಾಗ ರವಿಕುಮಾರ್‌, ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಎಫ್‌ಐಆರ್ ರದ್ದು ಹಾಗೂ ನಿರೀಕ್ಷಣಾ ಜಾಮೀನು ಕೋರಿ ರವಿಕುಮಾರ್‌ ಕೋರ್ಟ್‌ ಮೊರೆ ಹೋಗಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯಕ್ಕೂ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಾಳೆ (ಮೇ 30) ನಡೆಯಲಿದೆ. ಬಿಜೆಪಿ ಎನ್. ರವಿಕುಮಾರ್ ಅವರ ಪರ ನಿಲ್ಲಲ್ಲು ತೀರ್ಮಾನ ಮಾಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕಲಬುರಗಿ ಜಿಲ್ಲಾಡಳಿತವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪ್ರಭಾವದಿಂದ ಕಾರ್ಯನಿರ್ವಹಿಸುತ್ತಿದೆ. ಕಲಬುರಗಿ ಡಿಸಿ ಕಚೇರಿಯೂ ಸ್ವಾತಂತ್ರ್ಯ ಕಳೆದು ಕೊಂಡಿದೆ. ಡಿಸಿ ಮೇಡಂ ಕಾಂಗ್ರೆಸ್ ಹೇಳುವುದನ್ನು ಕೇಳುತ್ತಿದ್ದಾರೆ. ಡಿಸಿ ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಅಧಿಕಾರಿಯೋ ನನಗೆ ತಿಳಿದಿಲ್ಲ ಎಂದು ಹೇಳಿದ್ದರು.

ಈ ವೇಳೆ ಜನರ ಚಪ್ಪಾಳೆಗೆ ಪ್ರತಿಕ್ರಿಯಿಸಿ, ನಿಮ್ಮ ಚಪ್ಪಾಳೆ ನೋಡಿದರೆ, ʻಡಿಸಿ ಬಹುಶಃ ಪಾಕಿಸ್ತಾನದಿಂದ ಬಂದಿದ್ದಾರೆʼ ಎಂದೂ ಅವಹೇಳನ ಮಾಡಿದ್ದರು. ಈ ಕಾರಣಕ್ಕೆ ಕಾಂಗ್ರೆಸ್‌ ಕಾರ್ಯಕರ್ತರು ಎನ್‌ ರವಿಕುಮಾರ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ರವಿಕುಮಾರ್‌ ವಿರುದ್ಧ ರಾಜ್ಯ ಸರ್ಕಾರ ಕೂಡ ಕ್ರಮ ಕೈಗೊಳ್ಳ ಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ ನೀಡಿದ್ದರು.

Related Posts

Leave a Reply

Your email address will not be published. Required fields are marked *