ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಜೂನ್ 23ರವರೆಗೂ ಮಳೆಯ ಅಬ್ಬರ ತೀವ್ರವಾಗಿರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ತುಂತುರು ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಿದೆ. ಕೊಡಗು, ಹಾಸನ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಧಾರವಾಡ, ಹಾವೇರಿ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಮಳೆಯಾಗಲಿದೆ. ಮಂಕಿ, ಸಿದ್ದಾಪುರ, ಮಂಗಳೂರು, ಆಗುಂಬೆ, ಕೊಟ್ಟಿಗೆಹಾರ, ಕ್ಯಾಸಲ್ರಾಕ್, ಪಣಂಬೂರು, ಗೇರುಸೊಪ್ಪ, ಕುಂದಾಪುರ, ಉಪ್ಪಿನಂಗಡಿ, ಕದ್ರಾ, ಬಂಟವಾಳ, ಕೋಟಾ, ಹೊನ್ನಾವರ, ಕುಮಟಾ, ಧರ್ಮಸ್ಥಳ, ಮಾಣಿ, ಪುತ್ತೂರು, ಭಾಗಮಂಡಲದಲ್ಲಿ ಅತಿ ಹೆಚ್ಚು ಮಳೆ ಸುರಿಯುತ್ತಿದೆ.
ಮುಲ್ಕಿ, ಉಡುಪಿ, ಅಂಕೋಲಾ, ಯಲ್ಲಾಪುರ, ಶೃಂಗೇರಿ, ಕಳಸ, ಸುಳ್ಯ, ಜೋಯ್ಡಾ, ಕಿತ್ತೂರು, ಖಾನಾಪುರ, ಹುಂಚದಕಟ್ಟೆ, ತ್ಯಾಗರ್ತಿ, ಕೊಪ್ಪ, ವಿರಾಜಪೇಟೆ, ನಾಪೋಕ್ಲು, ಗೋಕರ್ಣ, ಬನವಾಸಿ, ಹಳಿಯಾಳ, ಬೆಳಗಾವಿ, ನಿಪ್ಪಾಣಿ, ಸಂಕೇಶ್ವರ, ಪೊನ್ನಂಪೇಟೆ, ಬಾಳೆಹೊನ್ನೂರು, ಎನ್ಆರ್ಪುರ, ಹುಕ್ಕೇರಿ, ಹಿಡಕಲ್, ಚಿಕ್ಕೋಡಿ, ಬೈಲಹೊಂಗಲ, ಧಾರವಾಡ, ಗೋಕಾಕ್, ಚಿಕ್ಕೋಡಿ, ಶಿಗ್ಗಾಂವ್, ಜಗಳೂರು, ಭದ್ರಾವತಿ, ಕಡೂರು, ಹೊನ್ನಾಳಿ, ಬಂಡೀಪುರ, ಬೇಳೂರು, ಹಾರಂಗಿಯಲ್ಲಿ ಮಳೆಯಾಗಿದೆ.