Menu

ಮುಡಾ ಪ್ರಕರಣ: ನ್ಯಾಯಾಲಯಕ್ಕೆ 11,200 ಪುಟಗಳ ವರದಿ ಸಲ್ಲಿಸಿದ ಲೋಕಾಯುಕ್ತ

lokayukta

ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿರುವ ತನಿಖಾ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಗುರುವಾರ ಸಲ್ಲಿಸಿತು.

ಮೈಸೂರು ಲೋಕಾಯುಕ್ತ ತನಿಖಾಧಿಕಾರಿ ಎಸ್ಪಿ ಉದೇಶ್ ಗುರುವಾರ ಬೆಳಗ್ಗೆ 11,200 ಪುಟಗಳ ಅಂತಿಮ ವರದಿಯ ದಾಖಲೆಗಳನ್ನು ನ್ಯಾಯಾಲಯಕ್ಕೆ ಆಗಮಿಸಿ ಸಲ್ಲಿಸಿದರು.

50 ಜನರ ಹೇಳಿಕೆಗಳನ್ನು ದಾಖಲು ಮಾಡಿದ ಪೊಲೀಸರು, 27 ಸಂಪುಟ, 11,200 ಪುಟಗಳ ತನಿಖಾ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ನಾಲ್ವರು ಆರೋಪಿಗಳಿಗೆ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಬಿ ರಿಪೋರ್ಟ್ ಸಲ್ಲಿಸಿ ವರದಿ ಸಲ್ಲಿಸಿದೆ.

ವರದಿಯನ್ನು ಸ್ವೀಕರಿಸಿದ ನ್ಯಾಯಲಯ ವಿಚಾರಣೆಯನ್ನು ಫೆ. 24ಕ್ಕೆ ಮುಂದೂಡಿದೆ.

Related Posts

Leave a Reply

Your email address will not be published. Required fields are marked *