ಬೆಂಗಳೂರಿನ ಹೆಚ್ಎಎಲ್ನ ಶಾಸ್ತ್ರಿನಗರದಲ್ಲಿರುವ ಉದ್ಯಮಿಯ ಮನೆಯಿಂದ ನೇಪಾಳಿ ದಂಪತಿ ನಗದು, ಲೈಸೆನ್ಸ್ ಪಿಸ್ತೂಲ್, 2 ಕೆಜಿ ಚಿನ್ನ ಮತ್ತು 10 ಲಕ್ಷ ನಗದು ದೋಚಿ ಪರಾರಿ ಆಗಿದ್ದಾರೆ.
ಮೂರು ತಿಂಗಳ ಹಿಂದೆ ನೇಪಾಳಿ ರಾಜ್ ಮತ್ತು ದೀಪಾ ದಂಪತಿ ಸೆಕ್ಯೂರಿಟಿ ಕೆಲಸಕ್ಕೆ ಸೇರಿದ್ದರು. ಮೇ 27ರಂದು ಉದ್ಯಮಿ ರಮೇಶ್ ಕುಟುಂಬ ಸಮೇತ ತಿರುಪತಿಗೆ ಹೋಗಿದ್ದರು. ಈ ಸಮಯದಲ್ಲಿ ನೇಪಾಳಿ ದಂಪತಿ ಸೇರಿ ಐದು ಜನ ಮನೆಯ ಮುಖ್ಯದ್ವಾರ ಮತ್ತು ಬೆಡ್ ರೂಂ ಬಾಗಿಲು ಮುರಿದು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಕಾರ್ ಬುಕ್ ಮಾಡಿದ್ದ ಕಳ್ಳರು ಮನೆ ಬಳಿ ಬಂದ ಕಾರಿನಲ್ಲಿ ಚಿನ್ನಾಭರಣ, ಹಣದ ಬ್ಯಾಗ್ಗಳನ್ನು ತುಂಬಿಕೊಂಡು ಹೋಗಿದ್ದಾರೆ.
ಮೇ 28ರ ಬೆಳಗಿನ ಜಾವ ರಮೇಶ್, ಮೊಬೈಲ್ನಲ್ಲಿ ಮನೆಯ ಸಿಸಿಟಿವಿ ಪರಿಶೀಲಿಸಿದ್ದು, ಆಫ್ ಆಗಿತ್ತು. ಕರೆಂಟ್ ಹೋಗಿ ಸಿಸಿಟಿವಿ ಆಫ್ ಆಗಿರಬಹುದು ಅಂದುಕೊಂಡಿದ್ದಾರೆ. ಬಳಿಕ ಪಕ್ಕದ ಮನೆಯವರು ಕರೆ ಮಾಡಿ ಮನೆಯಲ್ಲಿ ಯಾರೂ ಇಲ್ಲ ಎಂದಿದ್ದಾರೆ. ಬಳಿಕ ಸ್ನೇಹಿತರಿಗೆ ಮನೆ ಬಳಿ ಹೋಗಲು ರಮೇಶ್ ತಿಳಿಸಿದ್ದರು. ಸ್ನೇಹಿತರು ಮನೆಗೆ ಬಂದಾಗ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.