Menu

ಹಾಸನದಲ್ಲಿ ಸರ ಕಸಿಯಲು ಯತ್ನಿಸಿದವನಿಗೆ ಸಾರ್ವಜನಿಕರಿಂದ ಥಳಿತ

ಕುತ್ತಿಗೆಗೆ ಹಾಕಿದ್ದ ಚಿನ್ನದ ಸರವನ್ನು ಕಸಿಯಲು ಹೋಗಿ ಸಾರ್ವಜನಿಕರಿಂದ ಗೂಸಾ ತಿಂದ ಪ್ರಕರಣ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಗಗನ್ (31) ಚಿನ್ನ ಕದಿಯಲು ಬಂದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಆರೋಪಿ. ಪಟ್ಟಣದ ಬಿ.ಎಮ್ ರಸ್ತೆಯಲ್ಲಿರುವ ಕಿಂಗ್ಸ್ ಕಂಫರ್ಟ್ ಎಂಬ ಅತಿಥಿ ಗೃಹ ಒಂದಕ್ಕೆ ಭೇಟಿ ಕೊಟ್ಟ ಇಬ್ಬರು ಯುವಕರು ರೂಮ್ ಕೇಳುವ ನೆಪದಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಗಲಾಟೆ ನಡುವೆ  ಆರೋಪಿ ಗಗನ್ ಏಕಾಏಕಿ ಮಾಲೀಕನ ಕುತ್ತಿಗೆಯಲ್ಲಿದ್ದ ಚಿನ್ನದ ಸರಕ್ಕೆ

ರೇಣುಕಾಸ್ವಾಮಿ ಕೊಲೆ ಕೇಸ್‌ ಮಾಫಿ ಸಾಕ್ಷಿ: ಆಕ್ಷೇಪಣೆ ಸಲ್ಲಿಕೆ ಅವಕಾಶವಿಲ್ಲವೆಂದ ಹೈಕೋರ್ಟ್‌

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಮಾಫಿ ಸಾಕ್ಷಿಯಾಗಲು ಅವಕಾಶ ಕೋರಿರುವ ಆರೋಪಿ ಪ್ರದೋಶ್‌ ವಿಚಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಇಲ್ಲ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. ಪ್ರಕರಣದ 14ನೇ ಆರೋಪಿ ಪ್ರದೋಶ್‌ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿರುವ ವಿಚಾರದಲ್ಲಿ ಆಕ್ಷೇಪಣೆ ಸಲ್ಲಿಸಲು

SIR : ಒಂದು ತಿಂಗಳು ವಿಸ್ತರಿಸಲು ಕೆಪಿಸಿಸಿ ಆಗ್ರಹ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಮತಗಟ್ಟೆ ಅಧಿಕಾರಿಗಳು ಮತದಾರರ ಮನೆಗೆ ಭೇಟಿ ನೀಡುವ ಅವಧಿಯನ್ನು ಇನ್ನೂ ಒಂದು ತಿಂಗಳು ವಿಸ್ತರಿಸಬೇಕು ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್‌ ಬಾಬು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಅವರನ್ನು

ರೀಲ್ಸ್ ನೋಡಬೇಡವೆಂದು ಬುದ್ಧಿ ಹೇಳಿದ ತಾಯಿ: ವಿದ್ಯಾರ್ಥಿನಿ ಆತ್ಮಹತ್ಯೆ

ಹೆಚ್ಚು ಮೊಬೈಲ್ ಬಳಕೆ ಮಾಡಬೇಡ, ಹೆಚ್ಚು ರೀಲ್ಸ್ ನೋಡಬೇಡ ಎಂದು ತಾಯಿ ಬೈದು ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ  ನಡೆದಿದೆ. ಕೊಟಬಾಗಿ ಗ್ರಾಮದ ಮೇಘಾ ಗುಬ್ಬಣ್ಣವರ (20)  ಆತ್ಮಹತ್ಯೆ ಮಾಡಿಕೊಂಡವಳು.ಮೇಘಾ

ಮಗನಿಗೆ ಅಪಘಾತ: ಪರಸ್ಪರ ದೂಷಿಸಿಕೊಂಡು ಕಾರವಾರದಲ್ಲಿ ದಂಪತಿ ಆತ್ಮಹತ್ಯೆ

ರಸ್ತೆ ಅಪಘಾತದಿಂದ ಮಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಈ ವಿಚಾರದಲ್ಲಿ ಪರಸ್ಪರ ದೂಷಿಸಿಕೊಂಡ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರವಾರ ಹೊರವಲಯದ ಶಿರವಾಡದಲ್ಲಿ ನಡೆದಿದೆ. ವಿಜಯ ವಡ್ಡರ್ (36) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ವೆಂಕಟೇಶ್ ವಡ್ಡರ್ (38) ಆಳೇವಾಡ–ಕೋಡಿಬಾಗ್

ಸಾವಿನ ಯಜಮಾನ ಭಗವಂತ, ಈ ಜಗತ್ತಿನ ತೋಟಗಾರ ಅವನು: ಸಿಎಂ ಡಿಕೆ ಶಿವಕುಮಾರ್

ಸಾವಿನ ಯಜಮಾನ ಭಗವಂತ. ಈ ಜಗತ್ತಿಗೆ ತೋಟಗಾರ ಅವನು. ಇವತ್ತು ನಾವು ಆ ತೋಟದಲ್ಲಿ  ನಮ್ಮ  ಬೀಜಗಳನ್ನು ಬಿತ್ತಿ, ಪ್ರತಿಯೊಬ್ಬರ ಸ್ವಭಾವಕ್ಕೆ ತಕ್ಕಂತೆ ಬೆಳೆದು, ಕೊನೆಗೆ ಸಾವನ್ನು ಪಡೆದುಕೊಂಡು ಹೋಗುತ್ತಿದ್ದೇವೆ ಎಂದು  ವಿಧಾನಸಭೆ ಅಧಿವೇಶನದಲ್ಲಿ ಸಿಎಂ‌ ಡಿಕೆ ಶಿವಕುಮಾರ್  ಹೇಳಿದ್ದಾರೆ. ವಿಧಾನಮಂಡಲ

ಪಾಕ್ ಜೊತೆ ನಿರಂತರ ಸಂಪರ್ಕ: ಕಲ್ಬುರ್ಗಿಯಲ್ಲಿ ಇಬ್ಬರು ಆರೋಪಿಗಳು ಪೊಲೀಸ್‌ ವಶಕ್ಕೆ

ಪಾಕಿಸ್ತಾನದ ಜೊತೆ ನಿರಂತರ ಸಂಪರ್ಕ ಹೊಂದಿರುವುದಾಗಿ ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ  ಆಧರಿಸಿ   ಭಯೋತ್ಪಾದನಾ ನಿಗ್ರಹ  ಪಡೆ  ಇಬ್ಬರನ್ನು ಕಲ್ಬುರ್ಗಿಯಲ್ಲಿ  ವಶಕ್ಕೆ ಪಡೆದುಕೊಂಡಿದೆ.  ಉತ್ತರ ಪ್ರದೇಶದ ಎಟಿಎಸ್ ಅಧಿಕಾರಿಗಳು ಕಲಬುರಗಿಯ ಅಜ್ಞಾತ ಸ್ಥಳದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸಮೀರ್ ,

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಸಿಎಂ ಕೃತಜ್ಞತೆ

ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯೆ ನೀಡಿದರು. ಸಂಘಟನೆಗಳು ಕರೆ ನೀಡಿದ್ದ ಬಂದ್ ಹಿಂಪಡೆದ ಬಗ್ಗೆ ಕೇಳಿದಾಗ,”ಎಲ್ಲಾ ಕನ್ನಡಪರ ಸಂಘಟನೆಗಳ ಮುಖಂಡರು ನನ್ನನ್ನು ಭೇಟಿ ಮಾಡಿ

ಜಾಮರ್‌ ಇದ್ರೂ ಜೈಲಿನಲ್ಲಿ ಆಂಧ್ರದ ಸಿಮ್‌ ಸಕ್ರಿಯ: ಸೋಷಿಯಲ್‌ ಮೀಡಿಯಾ, ನಗ್ನ ಚಿತ್ರ ವೀಕ್ಷಣೆಯಲ್ಲಿ ಪ್ರಜ್ವಲ್‌

ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರು ಸೆಂಟ್ರಲ್‌ ಜೈಲಿನಲ್ಲಿ ಪ್ರಜ್ವಲ್‌ ರೇವಣ್ಣ ಮೊಬೈಲ್‌ ಬಳಸಿಕೊಂಡು ಸೋಷಿಯಲ್‌ ಮೀಡಿಯಾ, ನಗ್ನ ಚಿತ್ರಗಳ ವೀಕ್ಷಿಸುತ್ತಾ ಆರಾಮವಾಗಿ ಕಾಲ ಕಳೆಯುತ್ತಿರುವ ವೀಡಿಯೊ ವೈರಲ್‌ ಆಗಿದೆ. ಜೈಲಿನಲ್ಲಿ ಜಾಮರ್‌ ಅಳವಡಿಸಲಾಗಿದ್ದರೂ ಆಂಧ್ರದಲ್ಲಿ ಖರೀದಿಯಾಗಿರುವ ಏರ್‌ಟೆಲ್‌ ಸಿಮ್‌ ಪ್ರಜ್ವಲ್‌ ಬಳಸುವ ಮೊಬೈಲ್‌ನಲ್ಲಿ

ಡೇಟಿಂಗ್‌ ಆ್ಯಪ್‌: ಪುರುಷರಿಗೆ ಬ್ಲ್ಯಾಕ್‌ಮೇಲ್‌ ಮಾಡಿ ಯುವತಿ ವಂಚಿಸಿದ್ದು ಏಳು ಕೋಟಿ ರೂ.

ಯುವತಿ ಡೇಟಿಂಗ್‌ ಆ್ಯಪ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಪುರುಷರೊಂದಿಗೆ ಸ್ನೇಹ ಬೆಳೆಸಿ ಅವರೊಂದಿಗೆ ಆತ್ಮೀಯವಾಗಿರುವ ಪೋಟೊಗಳು ಹಾಗೂ ವೀಡಿಯೊಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್‌ ಮಾಡಿ ಆರು ಕೋಟಿ ರೂ. ವಂಚಿಸಿರುವ ಪ್ರಕರಣ ಉತ್ತರಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ಬೆಳಕಿಗೆ ಬಂದಿದೆ. ಯುವತಿಯು ಡೇಟಿಂಗ್‌