Saturday, December 27, 2025
Menu

ನವ ವಿವಾಹಿತೆ ಗಾನವಿ ಸುಸೈಡ್‌ ಬೆನ್ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಗಂಡ ಸೂರಜ್‌, ಅತ್ತೆ ಸ್ಥಿತಿ ಗಂಭೀರ

ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ನವ ವಿವಾಹಿತೆ ಗಾನವಿಯ ಪತಿ ಸೂರಜ್‌ ಸುಸೈಡ್‌ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಯತ್ನಿಸಿದ ಅತ್ತೆ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾನವಿ ಆತ್ಮಹತ್ಯೆ ಬಳಿಕ ಅವಮಾನದಿಂದ ನೊಂದಿದ್ದ ಸೂರಜ್ ತನ್ನ ತಾಯಿ ಜಯಂತಿ ಮತ್ತು ಸೋದರ ಸಂಜಯ್ ಜೊತೆ ನಾಗಪುರಕ್ಕೆ ತೆರಳಿದ್ದರು. ನಾಗಪುರದಲ್ಲಿಯೇ ಸೂರಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ್ದ ಗಾನವಿಯ ಅತ್ತೆ ಜಯಂತಿ ನಾಗಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅಕ್ಟೋಬರ್ 29 ರಂದು ಗಾನವಿ –

ಮತ್ತಷ್ಟು ದೂರ ಕ್ರಮಿಸುತ್ತಿದೆ ನಮ್ಮ ಮೆಟ್ರೊ

ರಾಜ್ಯ ಸರ್ಕಾರವು ಈಗ ರೂಪಿಸಿರುವ ಪ್ರಮುಖ ಮೆಟ್ರೋ ಯೋಜನೆಗಳು ಸಕಾಲದಲ್ಲಿ ಮತ್ತು ಸಮಯೋಚಿತವಾಗಿ ಕಾರ್ಯಾನುಷ್ಠಾನಗೊಂಡಲ್ಲಿ ಬೆಂಗಳೂರಿನ ಸುಮಾರು ಅರವತ್ತು ಕಿಲೋಮೀಟರ್ ರೇಡಿಯಸ್ ವ್ಯಾಪ್ತಿಯಲ್ಲಿರುವ ಎಲ್ಲ ಜಿಲ್ಲೆಗಳಿಗೆ ಸಮಗ್ರವಾಗಿ ಮೆಟ್ರೋ ರೈಲು ಯೋಜನೆಯ ನೇರ ಅನುಕೂಲ ಮತ್ತು ಸೌಕರ್ಯ ಲಭಿಸುವುದು ಖಂಡಿತ. ಮಹಾನಗರಿ

ಮಂಡ್ಯ ಬಳಿ ಕಲ್ಲು ಗಣಿಗಾರಿಕೆ ಕ್ವಾರಿಗೆ ಟಿಪ್ಪರ್ ಬಿದ್ದು ಚಾಲಕ ಸಾವು

ಕಲ್ಲು ಗಣಿಗಾರಿಕೆಯ ಕ್ವಾರಿಯಲ್ಲಿ ಪ್ರಪಾತಕ್ಕೆ ಟಿಪ್ಪರ್ ಬಿದ್ದು, ಚಾಲಕ ಮೃತಪಟ್ಟಿರುವ ಘಟನೆ ಮಂಡ್ಯದಲ್ಲಿ ಶುಕ್ರವಾರ ಸಂಭವಿಸಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಜಟಕ ಗೇಟ್ ಬಳಿ ರವಿ ಹಾಗೂ ಕಾಂತ ಎಂಬುವವರು ಸೇರಿ ನಡೆಸುತ್ತಿದ್ದ ಕ್ವಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಣಿಗಾರಿಕೆಯಿಂದ

ದೇವದತ್, ಕರುಣ್ ಶತಕ: ವಿಜಯ್ ಹಜಾರೆಯಲ್ಲಿ ಕರ್ನಾಟಕಕ್ಕೆ 2ನೇ ಜಯ

ಆರಂಭಿಕ ದೇವದತ್ ಪಡಿಕ್ಕಲ್ ಹಾಗೂ ಕರುಣ್ ನಾಯರ್ ಶತಕಗಳ ನೆರವಿನಿಂದ ಕರ್ನಾಟಕ ತಂಡ 8 ವಿಕೆಟ್ ಗಳಿಂದ ವಿಜಯ್ ಹಜಾರೆ ಟ್ರೋಫಿ ಏಕದಿನ ಪಂದ್ಯದಲ್ಲಿ ಕೇರಳ ತಂಡವನ್ನು ಬಗ್ಗುಬಡಿದಿದೆ. ಅಹಮದಾಬಾದ್ ನಲ್ಲಿ ಶುಕ್ರವಾರ ನಡೆದ ಎ ಗುಂಪಿನ ಪಂದ್ಯದಲ್ಲಿ ಮೊದಲು ಬ್ಯಾಟ್

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಇಲ್ಲ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

ಬಿಜೆಪಿ ಜೊತೆಗಿನ ಮೈತ್ರಿ ವಿಧಾನಸಭೆ, ಲೋಕಸಭೆಗಷ್ಟೇ ಸೀಮಿತವಾಗಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಗೆ ಅಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್

ಜನಮನ್ನಣೆಗೆ ಪಾತ್ರರಾಗಿದ್ದ ನಾಯಕ ಶಾಮನೂರು ಶಿವಶಂಕರಪ್ಪ: ಸಿದ್ದರಾಮಯ್ಯ

ದಾವಣಗೆರೆ: ಜಾತ್ಯಾತೀತ ಹಾಗೂ ಜನಪ್ರಿಯ ನಾಯಕರೆನಿಸಿದ್ದ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ನಾಡಿಗೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಸಚಿವ ದಿ.ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಇಳಿವಯಸ್ಸಿನಲ್ಲಿಯೂ ಅತ್ಯಂತ

ಮೈಸೂರಿನಲ್ಲಿ ಹೀಲಿಯಂ ಗ್ಯಾಸ್ ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್: ತನಿಖೆಗೆ ಇಳಿದ ಎನ್ ಐಎ

ಮೈಸೂರಿನ ವಿಶ್ವವಿಖ್ಯಾತ ಅರಮನೆ ಬಳಿ ಬಲೂನ್​ಗೆ ತುಂಬುವ ಹೀಲಿಯಂ ಗ್ಯಾಸ್ ಸಿಲಿಂಡರ್​ ಸ್ಫೋಟ ಪ್ರಕರಣದ ತನಿಖೆಗೆ ಇಳಿದ ರಾಷ್ಟ್ರೀಯ ತನಿಖಾ ದಳ ಮೃತಪಟ್ಟ ಬಲೂನ್ ವ್ಯಾಪರಿಯ ಸಂಬಂಧಿಕರ ವಿಚಾರಣೆಗೆ ಮುಂದಾಗಿದೆ. ಬಲೂನ್ ಗೆ ತುಂಬುವ ವೇಳೆ ಸ್ಫೋಟ ಸಂಭವಿಸಿ ಬಲೂನ್ ವ್ಯಾಪಾರಿ

ಕೇಂದ್ರದಿಂದ ರೈಲು ಪ್ರಯಾಣ ದರ ಹೆಚ್ಚಳ: ರಾಜ್ಯದ ಬಿಜೆಪಿ ನಾಯಕರು ಯಾಕೆ ಪ್ರಶ್ನಿಸುವುದಿಲ್ಲ ಎಂದು ಸಿಎಂ ಪ್ರಶ್ನೆ

ದಾವಣಗೆರೆ: ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೇಂದ್ರ ಸರ್ಕಾರ ರೈಲು

ಮದುವೆ ಆಗಲು ಒತ್ತಡ ಹೇರಿದ ನರ್ಸ್ ಕತ್ತು ಸೀಳಿ ಕೊಂದ ಸಹದ್ಯೋಗಿ!

ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಕತ್ತುಕೊಯ್ದು ಕೊಲೆ ಮಾಡಿದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಕೊಲೆ ಮಾಡಿ ಪೊಲೀಸರ ಜೊತೆಗೆ ಓಡಾಡಿಕೊಂಡಿದ್ದ ಮೃತ ಯುವತಿಯ ಸಹದ್ಯೋಗಿಯನ್ನು ಬಂಧಿಸಿದ್ದಾರೆ. ಚಿತ್ರದುರ್ಗದ ಹಿರಿಯೂರು ಮೂಲದ ಮಮತಾ (39) ಎಂಬುವರನ್ನು ಕುಮಾರಸ್ವಾಮಿ ಲೇಔಟ್ ನ ಪ್ರಗತಿಪುರದ ಬಾಡಿಗೆ ಮನೆಯಲ್ಲಿ

ರೈತರ ನೆರವಿಗೆ ಕ್ರೆಡಲ್‌ನಿಂದ ‘ಪಿಎಂ ಕುಸುಮ್‌ ಬಿ’ ಸಹಾಯವಾಣಿ ಕೇಂದ್ರ‌

ಬೆಂಗಳೂರು: ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ನಾಗರಬಾವಿಯ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಿದೆ. 2025ರ ಡಿಸೆಂಬರ್‌ 23ರಿಂದ 2025ರ ಡಿಸೆಂಬರ್‌ 31ರವರೆಗೆ ಸಹಾಯವಾಣಿ