Menu

ಅಮೆರಿಕ-ಇರಾನ್‌ ಕದನ ವಿರಾಮ: ಕಚ್ಚಾ ತೈಲ ಬೆಲೆ ಕುಸಿತ

ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ತಾತ್ಕಾಲಿಕವಾಗಿ ವಿರಾಮ ಕಂಡಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ದೊಡ್ಡ ಪ್ರಮಾಣದಲ್ಲಿ ಕುಸಿತ ಕಂಡಿದೆ. ಬ್ಯಾರೆಲ್‌ಗೆ 100 ಡಾಲರ್‌ ಇಳಿಕೆಯಾಗಿದೆ. ಯುದ್ಧದ ವೇಳೆ ಬ್ಯಾರೆಲ್‌ಗೆ 160 ಡಾಲರ್ ವರೆಗೂ ಏರಿಕೆಯಾಗಿತ್ತು. ಕದನ ವಿರಾಮದಿಂದ ಕಚ್ಚಾ ತೈಲ ಬೆಲೆಯಲ್ಲಿ ಶೇಕಡಾ 13 ರಿಂದ 14ರಷ್ಟು ಇಳಿಕೆಯಾಗಿದೆ. ಯುದ್ಧದ ಸಂದರ್ಭದಲ್ಲಿ ಭಾರತದಲ್ಲಿ ಪೆಟ್ರೋಲ್ ಡೀಸೆಲ್ ಸಮಸ್ಯೆಯಾಗಿಲ್ಲ. ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯಗೊಂಡು ಸಮಸ್ಯೆ ಆಗಿತ್ತು.

ಶಬರಿಮಲೆಗೆ ಮಹಿಳೆಯರ ನಿರ್ಬಂಧ ಧಾರ್ಮಿಕ ಸಂಪ್ರದಾಯ: ಸುಪ್ರೀಂಗೆ ಕೇಂದ್ರ ಪ್ರತಿಕ್ರಿಯೆ

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ನಿರ್ಬಂಧವು ಧಾರ್ಮಿಕ ಸಂಪ್ರದಾಯ ಮತ್ತು ನಂಬಿಕೆಗೆ ಸಂಬಂಧಿಸಿದ ವಿಷಯವಾಗಿದ್ದು, ಅದು ಲಿಂಗ ತಾರತಮ್ಯವಲ್ಲ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸ್ಪಷ್ಟಪಡಿಸಿದೆ. 2018ರಲ್ಲಿ ಸುಪ್ರೀಂ ಕೋರ್ಟ್ ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ಪ್ರವೇಶ ಅನುಮತಿ

ಯಲಹಂಕ ಹಾಸ್ಟೆಲ್‌ ಬಳಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ಇಬ್ಬರ ಬಂಧನ

ಬೆಂಗಳೂರಿನ ಯಲಹಂಕ ಉಪನಗರದ ಬಾಯ್ಸ್ ಹಾಸ್ಟೆಲ್ ಹಿಂಭಾಗ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಹಮ್ಮದ್ ನಿಶಾದ್ ಹಾಗೂ ಆದೇಶ್‌ ಬಂಧಿತರು. 10.5 ಲಕ್ಷದ ರೂ. ಮೌಲ್ಯದ 21 ಕೆಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರೂ ಹಾಸ್ಟೆಲ್‌

ಎರಡು ವರ್ಷದ ಹಿಂದೆ ಮುಸ್ಲಿಂ ವಿವಾಹಿತನೊಂದಿಗೆ ಮಗಳು ನಾಪತ್ತೆ: ಪೊಲೀಸ್‌ ಆಯುಕ್ತರಿಗೆ ತಾಯಿ ದೂರು

ಧಾರವಾಡದ ಕೆಲಗೇರಿಯ ಹಿಂದೂ ಯುವತಿಯನ್ನು ವಿವಾಹಿತ ಮುಸ್ಲಿಂ ವ್ಯಕ್ತಿ ಕರೆದುಕೊಂಡು ಹೋಗಿದ್ದು, ಮನೆ ಖರೀದಿಗೆ ನೀಡಿದ್ದ 10 ಲಕ್ಷ ರೂ.ವಂಚಿಸಿದ್ದಾನೆ. ಎರಡು ವರ್ಷಗಳಿಂದ ಮಗಳು ನಾಪತ್ತೆಯಾಗಿದ್ದು, ಪೊಲೀಸ್‌ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ನಾಪತ್ತೆಯಾಗಿರುವ ಯುವತಿಯ ತಾಯಿ ಪೊಲೀಸ್ ಆಯುಕ್ತರಿಗೆ

ಭಾರತೀಯರು ಕೂಡಲೇ ಇರಾನ್‌ ತೊರೆಯಿರಿ: ಇಂಡಿಯನ್‌ ಎಂಬೆಸಿ ಎಚ್ಚರಿಕೆ

ಭಾರತವು ಇರಾನ್‌ನಲ್ಲಿರುವ ತನ್ನ ಪ್ರಜೆಗಳಿಗೆ ಯುದ್ಧಪೀಡಿತ ದೇಶದಿಂದ ‘ಕೂಡಲೇ ಹೊರಹೋಗುವಂತೆ’ ತುರ್ತು ಸಂದೇಶ ನೀಡಿದೆ. ಎಕ್ಸ್‌ ಖಾತೆಯಲ್ಲಿ ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತನ್ನ ನಾಗರಿಕರಿಗೆ ತಾವು ಸೂಚಿಸಿದ ಮಾರ್ಗಗಳನ್ನು ಬಳಸಿಕೊಂಡು ದೇಶವನ್ನು ತೊರೆಯುವಂತೆ ಕೇಳಿಕೊಂಡಿದೆ. ಇರಾನ್ ವಿರುದ್ಧ ಅಮೆರಿಕ ಸೇನೆಯ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

ಕೊಡಗಿನ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ನಡೆದಿದೆ. ಕಾಯಿಮಾನಿ ನಿವಾಸಿ ರತ್ತು ಆನೆ ದಾಳಿಗೆ ಬಲಿಯಾದವರು ಎಂದು ಗುರುತಿಸಲಾಗಿದೆ. ಬೆಳಗ್ಗೆ ರತ್ತು ಅವರು ಕುರ್ಚಿ-ಕಾಯಿಮಾನಿ ನಡುವೆ ಇರುವ ಕಾಫಿ ತೋಟಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ಏಕಾಏಕಿ

ಮುಳ್ಳಯ್ಯನಗಿರಿ ಪ್ರವಾಸಕ್ಕೆ ಬಂದಿದ್ದ ಕೇರಳ ವಿದ್ಯಾರ್ಥಿನಿ ನಾಪತ್ತೆ

ಚಿಕ್ಕಮಗಳೂರು ಮುಳ್ಳಯ್ಯನಗಿರಿ ಪ್ರವಾಸಕ್ಕೆ ಬಂದಿದ್ದ 40 ಜನರ ತಂಡದಲ್ಲಿದ್ದ ಕೇರಳದ 16 ವರ್ಷದ ವಿದ್ಯಾರ್ಥಿನಿ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ  ನಾಪತ್ತೆಯಾಗಿದ್ದಾಳೆ. 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದನ ನಾಪತ್ತೆಯಾಗಿರುವಾಕೆ. ಕೇರಳದಿಂದ ಬಂದಿದ್ದ 40 ಜನರ ತಂಡ ಮಂಗಳವಾರ ಸಂಜೆ ಚಂದ್ರದ್ರೋಣ ಸಾಲಿನಲ್ಲಿ ವೀಕ್ಷಣೆಗೆ

ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ ವಿಷಯ ತಿಳಿದ ಪ್ರಿಯಕರನೂ ಆತ್ಮಹತ್ಯೆ

ಬಾಗಲಕೋಟೆಯ ಬನಹಟ್ಟಿ ನಗರದಲ್ಲಿ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ರಬಕವಿಬನಹಟ್ಟಿಯ ಅಸ್ಕಿ ಗ್ರಾಮದಲ್ಲಿ ಪ್ರಿಯಕರನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪವಿತ್ರಾ ಒಂಟಿ (19) ಮತ್ತು ಕಾರ್ತಿಕ್ ನಾಯಕ್(19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಪವಿತ್ರಾ ಬನಹಟ್ಟಿಯ ಕೆಹೆಚ್‌ಡಿಸಿ ಕಾಲೋನಿ

ಯುದ್ಧ ಅಂತ್ಯವಾಗಿಲ್ಲ, ವಿರಾಮವಷ್ಟೇ ಎಂದ ಇರಾನ್‌

ಅಮೆರಿಕದೊಂದಿಗೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಕೊಂಡ ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಿಲಿಟರಿ ಘಟಕಗಳಿಗೆ ದಾಳಿ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಯುದ್ಧ ಅಂತ್ಯವಾಗಿಲ್ಲ, ಕದನ ವಿರಾಮವಷ್ಟೇ. ಕದನ ವಿರಾಮವು ಯುದ್ಧದ ಅಂತ್ಯವನ್ನು ಸೂಚಿಸುವುದಿಲ್ಲ ಮತ್ತು ಶತ್ರುಗಳಾದ ಅಮೆರಿಕ ಅಥವಾ

ಸರ್ಕಾರಿ ಕೆಲಸ ಸಿಕ್ಕ ಬಳಿಕ ಡಿವೋರ್ಸ್‌ ಕೇಳಿದ ಪತ್ನಿ: ಕೊಲೆಗೆ ಯತ್ನಿಸಿ ಪತಿ ಸುಸೈಡ್‌

ವಿಚ್ಛೇದನ ಬಯಸಿದ ಪತ್ನಿಗೆ ಮಚ್ಚಿನಿಂದ ಹೊಡೆದ ಪತಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಕೊರಟಗೆರೆ ತಾಲೂಕಿನ ಕೋಟೆಯಲ್ಲಿ ನಡೆದಿದೆ. ಅದಕ್ಕೂ ಮೊದಲು ದಂಪತಿ ನಡುವೆ ಗಲಾಟೆಯಾಗಿತ್ತು ಎನ್ನಲಾಗಿದೆ. ಮಚ್ಚಿನೇಟಿನಿಂದ ಗಾಯಗೊಂಡಿರುವ ಪತ್ನಿ ನಾಗಮಣಿ ಸಾವು ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ