Featured
ಶ್ರೀಶಿವರಾತ್ರಿ ಶಿವಯೋಗಿಗಳ ಜಯಂತಿ: ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು
ಸುತ್ತೂರಿನ ಶ್ರೀಶಿವರಾತ್ರಿ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ಡಿ.17ರಂದು ಮಳವಳ್ಳಿ ಪಟ್ಟಣದಲ್ಲಿ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ. ರಾಷ್ಟ್ರಪತಿ ಆಗಮನದ ಹಿನ್ನೆಲೆ ಹೆಲಿಪ್ಯಾಡ್, ವೇದಿಕೆ ಹಾಗೂ ಇತರ ಸ್ಥಳಗಳನ್ನು ಮೈಸೂರು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾರೇಹಳ್ಳಿ ಬಳಿ ನಿರ್ಮಿಸುತ್ತಿರುವ ಹೆಲಿಪ್ಯಾಡ್ಗೆ ತೆರಳಿ ಗ್ರೀನ್ ರೂಂ ನಿರ್ಮಾಣ, ವಿದ್ಯುತ್ ಕಂಬಗಳ ತೆರವು, ಜಾಗ ಸಮತಟ್ಟಾಗಿಸುವುದು, ಕಾರ್ಯಕ್ರಮಕ್ಕೆ
ಉತ್ತರ ಜಪಾನ್ನಲ್ಲಿ ಭೂಕಂಪನ, ಸುನಾಮಿ ಅಲೆ
ಉತ್ತರ ಜಪಾನ್ನಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ 7.5 ತೀವ್ರತೆಯ ಪ್ರಬಲ ಭೂಕಂಪದಲ್ಲಿ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪೆಸಿಫಿಕ್ ಕರಾವಳಿ ಭಾಗಗಳಲ್ಲಿ 70 ಸೆಂಟಿಮೀಟರ್ ಸುನಾಮಿ ಅಲೆಗಳು ಅಬ್ಬರಿಸಿವೆ. ಅಮೋರಿ ಕರಾವಳಿಯಲ್ಲಿ ಭೂಕಂಪ ಮತ್ತು ಸುನಾಮಿಯಿಂದ ಜಪಾನ್ನಲ್ಲಿ ಸಾಕಷ್ಟು ಹಾನಿಯಾಗಿದೆ.
ರೈತರ ಸಮಸ್ಯೆ, ಬೆಂಬಲ ಬೆಲೆ, ಬಾಕಿ ಹಣ ಬಿಡುಗಡೆಗೆ ಕೇಂದ್ರಕ್ಕೆ ಒತ್ತಡ ಹಾಕುವ ಬಗ್ಗೆ ಅಧಿವೇಶನದಲ್ಲಿ ಚರ್ಚೆ: ಡಿಸಿಎಂ
“ರೈತರ ಸಮಸ್ಯೆ, ಬೆಂಬಲ ಬೆಲೆ, ಬಾಕಿ ಹಣ ಬಿಡುಗಡೆ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವುದು ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶಿವಕುಮಾರ್ ಮಾಧ್ಯಮಗಳ
ಮಂಗಳಮುಖಿಯರಿಂದ ಯುವಕನ ಅಪಹರಣ: ಮಧುರೈನಲ್ಲಿ ರಕ್ಷಿಸಿದ ಬೆಂಗಳೂರು ಪೊಲೀಸ್
ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳಮುಖಿಯರು ಅಪಹರಿಸಿಕೊಂಡು ಹೋಗಿದ್ದ 25 ವರ್ಷದ ಯುವಕನನ್ನು ಪೊಲೀಸರು ರಕ್ಷಿಸಿದ್ದಾರೆ. ಮಂಗಳಮುಖಿಯರ ತಂಡ ಯುವಕನನ್ನು ಅಪಹರಿಸಿ ತಮಿಳುನಾಡಿನ ಮಧುರೈಗೆ ಕರೆದುಕೊಂಡು ಹೋಗಿತ್ತು. ಅಲ್ಲಿ ಯುವಕನಿಗೆ ಶಸ್ತ್ರಚಿಕಿತ್ಸೆ ನಡೆಸಿ ಲಿಂಗ ಪರಿವರ್ತನೆ ಮಾಡಿಸಲು ಮಂಗಳಮುಖಿಯರ
ಗ್ಯಾಸ್ ಗೀಸರ್ ಸೋರಿಕೆ: ಬೆಂಗಳೂರಿನಲ್ಲಿ ತಾಯಿ ಮಗು ಸಾವು
ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಮತ್ತು ಮಗು ಮೃತಪಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಚಾಂದಿನಿ (26), ಯುವಿ (4) ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ತೆರಳಿದ್ದಾಗ ಗ್ಯಾಸ್ ಸೋರಿಕೆಯಾಗಿ ಇಬ್ಬರೂ ಅಸ್ವಸ್ಥರಾಗಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಭಿವೃದ್ಧಿ ಮ್ಯಾಜಿಕ್ ಅಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆ ಅತ್ಯಗತ್ಯ: ಡಿಕೆ ಶಿವಕುಮಾರ್
“ಅಭಿವೃದ್ಧಿ ಎಂಬುದು ಮ್ಯಾಜಿಕ್ ಮೂಲಕ ಸಾಧಿಸುವುದಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆಯಿಂದ ಸಾಧಿಸುವುದಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಹೈದರಾಬಾದ್ ನಲ್ಲಿ ನಡೆದ ತೆಲಂಗಾಣ ರೈಸಿಂಗ್ ಜಾಗತಿಕ ಸಮ್ಮೇಳನದಲ್ಲಿ ಅವರು ಮಾತನಾಡಿದರು. “ತೆಲಂಗಾಣವು ಬೆಂಗಳೂರು ಹಾಗೂ ಕರ್ನಾಟಕದ ಜೊತೆ ಸ್ಪರ್ಧಿಸುತ್ತಿದೆಯೇನೋ
ಜನವರಿಯಿಂದ ಇಂದಿರಾ ಕಿಟ್ ವಿತರಣೆ: ಸಚಿವ ಕೆ.ಹೆಚ್.ಮುನಿಯಪ್ಪ
ಬೆಳಗಾವಿ:ಬಿಪಿಎಲ್ ಪಡಿತರದಾರರಿಗೆ ವಿತರಿಸುವ ಅನ್ನಭಾಗ್ಯ ಅಕ್ಕಿಯ ಬದಲಿಗೆ ಬರುವ ಜನವರಿಯಿಂದ ಇಂದಿರಾ ಕಿಟ್ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ಮೇಲ್ಮೈಯಲ್ಲಿ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಸಿಟಿ ರವಿ ಅವರ ಪ್ರಶ್ನೆಗೆ ಉತ್ತರ ನೀಡಿದ
ಶೀಘ್ರದಲ್ಲೇ ನಮ್ಮ ಮೆಟ್ರೋಗೆ 96 ರೈಲುಗಳ ಸೇರ್ಪಡೆ!
ಬೆಂಗಳೂರು: ಶೀಘ್ರದಲ್ಲೇ ಹೊಸದಾಗಿ 96 ರೈಲುಗಳನ್ನು ಸೇರ್ಪಡೆಗೊಳಿಸುವ ಮೂಲಕ ನಮ್ಮ ಮೆಟ್ರೋ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಯೆಲ್ಲೋ ಲೈನ್ ಆರಂಭದ ಬೆನ್ನಲ್ಲೇ ಬರೋಬ್ಬರಿ 96 ಹೊಸ ರೈಲುಗಳ ನಮ್ಮ ಮೆಟ್ರೋಗೆ ಬರುತ್ತಿದ್ದು, ಅವುಗಳು ಕಾರ್ಯಾಚರಣೆಗೆ ಇಳಿಯುತ್ತಿದ್ದಂತೆ 4
ವಂದೇ ಮಾತರಂ ಸರಿಯಾಗಿ ಅರ್ಥ ಮಾಡಿಕೊಳ್ಳಿ: ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು
ವಂದೇ ಮಾತರಂ ಗೀತೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ತಿರುಗೇಟು ನೀಡಿದ್ದಾರೆ. ವಂದೇ ಮಾತರಂ ಗೀತೆಗೆ 150 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುದೀರ್ಘ ಚರ್ಚೆಗೆ ಲೋಕಸಭೆ ಅಧಿವೇಶನದಲ್ಲಿ ಸೋಮವಾರ ಅವಕಾಶ
ಜಿನ್ನಾ ಕಾರಣಕ್ಕೆ ವಂದೇ ಮಾತರಂ ಗೀತೆಗೆ ನೆಹರು ಕತ್ತರಿ: ಪ್ರಧಾನಿ ಮೋದಿ ಕಿಡಿ
ನವದೆಹಲಿ: ಮುಸ್ಲಿಮ್ ಲೀಗ್ ನಾಯಕ ಮೊಹಮದ್ ಅಲಿ ಜಿನ್ನಾ ಅಸಮಾಧಾನ ವ್ಯಕ್ತಪಡಿಸಿದ್ದಕ್ಕಾಗಿ ವಂದೇ ಮಾತರಂ ಹಾಡನ್ನು ಕಾಂಗ್ರೆಸ್ ಒಡೆದು ತುಂಡು ಮಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಂದೇ ಮಾತರಂ ಗೀತೆಗೆ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ




