Featured
ಸುನೀತಾ ವಿಲಿಯಮ್ಸ್ ಬಾಹ್ಯಾಕಾಶ ಸೇವೆಯಿಂದ ನಿವೃತ್ತಿ
ಗಗನಯಾತ್ರಿ ಸುನೀತಾ ವಿಲಿಯಮ್ಸ್ ವೃತ್ತಿಜೀವನದಲ್ಲಿ ಮೂರು ಪ್ರಮುಖ ಬಾಹ್ಯಾಕಾಶ ಯಾತ್ರೆಗಳನ್ನು ಪೂರ್ಣಗೊಳಿಸಿ ದಾಖಲೆ ನಿರ್ಮಿಸಿದ್ದು, 27 ವರ್ಷಗಳ ಸುದೀರ್ಘ ಸೇವೆ ಬಳಿಕ ನಾಸಾದಿಂದ ನಿವೃತ್ತರಾಗಿದ್ದಾರೆ ಎಂದು ನಾಸಾ ಅಧಿಕೃತವಾಗಿ ಘೋಷಿಸಿದೆ. ಅವರ ನಿವೃತ್ತಿ 2025ರ ಡಿಸೆಂಬರ್ 27ರಿಂದ ಜಾರಿಯಾಗುತ್ತಿದೆ ಎಂದು ನಾಸಾ ಪ್ರಕಟಣೆಯಲ್ಲಿ ತಿಳಿಸಿದೆ. 60 ವರ್ಷ ದ ಸುನೀತಾ ವಿಲಿಯಮ್ಸ್ “ಮಾನವ ಬಾಹ್ಯಾಕಾಶ ಹಾರಾಟಕ್ಕೆ ದಿಕ್ಕು ತೋರಿಸಿದ ಮಹಾನ್ ನಾಯಕಿ” ಎಂದು ನಾಸಾ ಆಡಳಿತಾಧಿಕಾರಿ ಜೇರೆಡ್ ಐಸಾಕ್ಮನ್ ಶ್ಲಾಘಿದ್ದಾರೆ.
ಇನ್ಸ್ಪೆಕ್ಟರ್ ರವಿ ಸಸ್ಪೆಂಡ್ ಹಿಂದೆ ಹವಾಲಾ ನಂಟು?
ಕೊಲೆ ಪ್ರಕರಣದ ತನಿಖೆಯಲ್ಲಿ ವಿಳಂಬ ಎಂಬ ಕಾರಣಕ್ಕೆ ಅಮಾನತುಗೊಂಡಿದ್ದಾರೆ ಎನ್ನಲಾದ ಜ್ಞಾನಭಾರತಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವಿ ಅವರ ಹಿಂದೆ ಕೋಟಿ ಕೋಟಿ ಹವಾಲಾ ಹಣದ ನಂಟಿರುವ ಅನುಮಾನಗಳು ವ್ಯಕ್ತವಾಗಿವೆ. ಜನವರಿ 15ರಂದು ನಾಗರಬಾವಿ ವ್ಯಾಪ್ತಿಯಲ್ಲಿ ಹವಾಲಾ ಹಣ ವರ್ಗಾವಣೆಯಾಗುತ್ತಿದೆ ಎಂಬ
ಕರ್ನಾಟಕ ಸುಧಾರಿತ ಹಾಜರಾತಿ ನಿರ್ವಹಣಾ ವ್ಯವಸ್ಥೆ “ಕರ್ತವ್ಯ”ಕ್ಕೆ ಡಿಜಿಟಲ್ ಟ್ರಾನ್ಸ್ಫಾರ್ಮೇಷನ್ ಅವಾರ್ಡ್
ಕರ್ತವ್ಯ (KAAMS) ಎಂಬುದು ಕರ್ನಾಟಕ ಸರ್ಕಾರದ ಒಂದು ಸಂಯೋಜಿತ, ಕೃತಕ ಬುದ್ಧಿಮತ್ತೆ (AI) ಆಧಾರಿತ ಹಾಜರಾತಿ ನಿರ್ವಹಣಾ ವೇದಿಕೆ. ರಾಜ್ಯದ ಎಲ್ಲ ಕಚೇರಿಗಳಲ್ಲಿ ಇದರ ಯಶಸ್ವಿ ಅನುಷ್ಠಾನಕ್ಕಾಗಿ ಡಿಜಿಟಲ್ ಟ್ರಾನ್ಸ್ಫಾರ್ಮೇಷನ್ ಅವಾರ್ಡ್ ಲಭಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಇ-ಆಡಳಿತ)
ಎಳನೀರಿಗಾಗಿ ಸ್ನೇಹಿತನ ಮರಹತ್ತಿಸಿ ಬಿದ್ದು ಮೂಳೆ ಮುರಿದಾಗ ಕೆರೆಯಲ್ಲಿ ಮುಳುಗಿಸಿ ಕೊಂದರು
ಮದ್ಯಕ್ಕೆ ಬೆರೆಸಲು ಎಳನೀರಿಗಾಗಿ ಸ್ನೇಹಿತನನ್ನು ತೆಂಗಿನ ಮರ ಹತ್ತಿಸಿ ಆತ ಬಿದ್ದು ಬೆನ್ನು ಮೂಳೆಗೆ ಗಂಭೀರ ಏಟಾದ ಬಳಿಕ ಚಿಕಿತ್ಸೆಗೆ ಲಕ್ಷಗಟ್ಟಲೆ ಖರ್ಚು ಆಗುವುದೆಂದು ಕೆರೆಯಲ್ಲಿ ಮುಳುಗಿಸಿ ಕೊಲೆಗೈದು ಎಸೆದಿರುವ ಭಯಾನಕ ಘಟನೆಯೊಂದು ಮಾಗಡಿಯಲ್ಲಿ ನಡೆದಿದೆ. ರಾಮನಗರದ ಮಾಗಡಿ ತಾಲೂಕಿನ ವಾಜರಹಳ್ಳಿ
ಎಲ್ಐಸಿ ಕಚೇರಿಯಲ್ಲಿ ಬೆಂಕಿಗೆ ಮಹಿಳೆ ಬಲಿ: ಸಹೋದ್ಯೋಗಿಯಿಂದ ಕೊಲೆಯೆಂದು ಬಯಲಿಗೆಳೆದ ಪೊಲೀಸ್
ಕಳೆದ ತಿಂಗಳು ಮಧುರೈ ಎಲ್ಐಸಿ ಕಚೇರಿಯಲ್ಲಿ ಬೆಂಕಿ ಅನಾಹುತದಲ್ಲಿ ಮಹಿಳಾ ಅಧಿಕಾರಿ ಮೃತಪಟ್ಟಿರುವ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು, ಡೆತ್ ಕ್ಲೇಮ್ ಫೈಲ್ಗಳನ್ನು ನಾಶಮಾಡಲು ಸಹೋದ್ಯೋಗಿ ನಡೆಸಿದ ಪೂರ್ವನಿಯೋಜಿತ ಕೊಲೆ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ಇದು ಬೆಂಕಿ ಆಕಸ್ಮಿಕ ಅಲ್ಲ, ಮೊದಲೇ
ಹರತಾಳು ಗ್ರಾಮದಲ್ಲಿ ವಿಜಯನಗರ ಕಾಲದ ಗರುಡ ಶಿಲ್ಪದ ಮಾಸ್ತಿಕಲ್ಲು ಪತ್ತೆ
ಶಿವಮೊಗ್ಗ ದ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ಹರತಾಳು ಗ್ರಾಮದ ಶಶಿಧರ ಭಟ್ಟರ ತೋಟದಲ್ಲಿ ಅಪರೂಪದ ಗರುಡ ಶಿಲ್ಪ ಹೊಂದಿರುವ ಮಾಸ್ತಿಕಲ್ಲು ಪತ್ತೆಯಾಗಿದೆ. ವಿಜಯನಗರ ಕಾಲಘಟ್ಟಕ್ಕೆ ಸೇರಿದ ಈ ಶಾಸನವು ಇತಿಹಾಸ ಹಾಗೂ ಪುರಾತತ್ವದ ದೃಷ್ಟಿಯಿಂದ ಮಹತ್ವ ಪಡೆದಿದೆ. ಈ ಮಾಸ್ತಿಕಲ್ಲು
ಶ್ರೀ ಮಾದಾರ ಚನ್ನಯ್ಯ ಗುರುಪೀಠ ಆವರಣದಲ್ಲಿ ಶ್ರೀ ಮಾತಂಗೇಶ್ವರಿ ದೇಗುಲಕ್ಕೆ ಭೂಮಿ ಪೂಜೆ
ಚಿತ್ರದುರ್ಗನಗರ ಹೊರವಲಯದ ಶ್ರೀ ಮಾದಾರ ಚನ್ನಯ್ಯ ಗುರುಪೀಠದ ಆವರಣದಲ್ಲಿ 4 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗುವ ಆದಿಶಕ್ತಿ ಶ್ರೀ ಮಾತಂಗೇಶ್ವರಿ ದೇಗುಲದ ಭೂಮಿ ಪೂಜೆಯನ್ನು ಸಂಸದರಾದ ಮೈಸೂರಿನ ಯದುವೀರ ಕೃಷ್ಣದತ್ತ ಒಡೆಯರ್ ನೆರವೇರಿಸಿದರು. ಬಳಿಕ ಮಾತನಾಡಿದ ಯದುವೀರ್, ಮಠದ ಆಶ್ರಯದಲ್ಲಿ ದೇವಾಲಯ ನಿರ್ಮಾಣ ಮಾಡುತ್ತಿರುವುದು
ಕೊಪ್ಪಳದಲ್ಲಿ 27 ವರ್ಷಗಳಿಂದ ಅತಿ ಕಡಿಮೆ ದರದಲ್ಲಿ ಶ್ರಮಿಕರ ಹೊಟ್ಟೆ ತುಂಬಿಸುವ ರವಿ ಹೋಟೆಲ್
-ಬಸವರಾಜ ಕರುಗಲ್ ಇಪ್ಪತ್ತು ರೂಪಾಯಿ ಕೊಟ್ಟರೂ ಒಂದು ಕಪ್ ಚಹಾ ದೊರಕದ ಕಾಲವಿದು. ಸಾಮಾನ್ಯ ಹೊಟೇಲ್ಗೆ ಹೊಕ್ಕರೆ ಒಬ್ಬರಿಗೆ ಕನಿಷ್ಠವೆಂದರೂ ನೂರು ರೂಪಾಯಿ ಬಿಲ್ ಆಗುವ ಈ ದಿನಗಳಲ್ಲಿ ಹತ್ತು ರೂಪಾಯಿಗೆ ಹೊಟ್ಟೆ ತುಂಬುವಷ್ಟು ಉಪಹಾರ ಕೊಪ್ಪಳದಲ್ಲಿರುವ ಈ ರವಿ
ನಟ ಕಿಚ್ಚ ಸುದೀಪ್ ವಿರುದ್ಧ ಬೆಂಗಳೂರು ಕಮಿಷನರ್ ಕಚೇರಿಗೆ ವಂಚನೆ ದೂರು
ನಟ ಕಿಚ್ಚ ಸುದೀಪ್ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಾಗಿದೆ. ನಿರ್ಮಾಪಕ ಸುದೀಪ್ ಮತ್ತು ಚಕ್ರವರ್ತಿ ಚಂದ್ರಚೂಡ್ ವಿರುದ್ಧ 10 ವರ್ಷಗಳ ಹಿಂದಿನ ‘ವಾರಸ್ದಾರ’ ಧಾರಾವಾಹಿ ಪ್ರಕರಣಕ್ಕೆ ಸಂಬಂಧಿಸಿದ ವಂಚನೆ ಆರೋಪ ಮತ್ತೆ ಸದ್ದು ಮಾಡಿದೆ. ಹಣ ನೀಡುವ ಭರವಸೆ ನೀಡಿ
ಭದ್ರಾವತಿಯಲ್ಲಿ ವೃದ್ದ ದಂಪತಿಯ ಅನುಮಾನಸ್ಪದ ಸಾವು
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಮನೆಯಲ್ಲಿ ವೃದ್ಧ ದಂಪತಿಗಳು ಅನುಮಾನಸ್ಪದ ರಿತಿಯಲ್ಲಿ ಸಾವಿಗೀಡಾಗಿದ್ದಾರೆ. ಭದ್ರಾವತಿಯ ಭೂತನಗುಡಿಯಲ್ಲಿ ಚಂದ್ರಪ್ಪ (80) ಮತ್ತು ಪತ್ನಿ ಜಯಮ್ಮ (70) ಸಾವನ್ನಪ್ಪಿರುವುದು ಅನುಮಾನಸ್ಪದಕ್ಕೆ ಕಾರಣವಾಗಿದೆ. ಇಬ್ಬರು ಅನೂನ್ಯವಾಗಿದ್ದು, ಇಬ್ಬರಿಗೆ ಮೂವರು ಗಂಡು ಮಕ್ಕಳ್ಳಿದ್ದಾರೆ. ಗಂಡು ಮಕ್ಕಳಲ್ಲಿ ಒಬ್ಬರು




