Featured
ಕಾಂಗ್ರೆಸ್ ಸರ್ಕಾರದಿಂದ ಹಿಂದುಳಿದ ವರ್ಗಗಳಿಗೆ ದ್ರೋಹ: ವಿಜಯೇಂದ್ರ
ರಾಜ್ಯದ ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳಿಂದ ಕೇವಲ ಭ್ರಷ್ಟಾಚಾರಕ್ಕೆ ಸೀಮಿತವಾಗಿದ್ದು, ‘ಅಹಿಂದ’ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಈಗ ಹಿಂದುಳಿದ ವರ್ಗಗಳ ಸಮುದಾಯಗಳಿಗೆ ದ್ರೋಹ ಬಗೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಗುರುವಾರ ನಡೆದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರವು ಕೇವಲ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದಲ್ಲಿ ಮಗ್ನವಾಗಿದೆ ಎಂದು ಟೀಕಿಸಿದರು. ಸರ್ಕಾರದ ಹಿಂದುಳಿದ ವರ್ಗಗಳ ನಿರ್ಲಕ್ಷ್ಯ ಮಾಡಿದ್ದು, ನಿರುದ್ಯೋಗ ಸೃಷ್ಟಿಸಿದೆ.
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
ಬೆಂಗಳೂರು, ಮೈಸೂರು, ದಾವಣಗೆರೆ ಜಿಲ್ಲೆಗಳ ಹಲವು ಕಡೆ ಭ್ರಷ್ಟ ಅಧಿಕಾರಿಗಳ ಕಚೇರಿ ಮತ್ತು ನಿವಾಸಗಳಿಗೆ ಲೋಕಾಯುಕ್ತ ಏಕಕಾಲಕ್ಕೆ ದಾಳಿ ನಡೆಸಿದೆ. ಬೆಂಗಳೂರಿನಲ್ಲಿ ಪಿಡಬ್ಲ್ಯುಡಿ ಮುಖ್ಯ ಇಂಜಿನಿಯರ್ ಪುರುಷೋತ್ತಮ ದಾಸ್ ಎಂಬವರಿಗೆ ಸೇರಿದ ಮೈಸೂರಿನ ಐದು ಸ್ಥಳ, ಬೆಂಗಳೂರಿನ ಆರು ಕಡೆ ದಾಳಿ
ಹಣಕಾಸು ಕಲಹ: ತಂದೆ, ತಾಯಿಯ ಕೊಲೆಗೈದ ಟೆಕ್ಕಿ ರೋಹನ್ ಭಟ್
ಹಣಕಾಸು ವಿಚಾರದಲ್ಲಿ ನಡೆದ ಜಗಳ ತೀವ್ರಗೊಂಡು ಯುವಕನೊಬ್ಬ ತಂದೆ, ತಾಯಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ನೌಕಾಪಡೆಯ ಆರ್ಮಿ ಕ್ಯಾಪ್ಟನ್ ಆಗಿದ್ದ ತಂದೆ ನವೀನ್ ಚಂದ್ರ ಭಟ್, ದಂತ ವೈದ್ಯೆಯಾಗಿದ್ದ
ಕಾರ್ಮಿಕ ಸಂಘಟನೆಗಳಿಂದ ಇಂದು ಭಾರತ್ ಬಂದ್
ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು ಇಂದು (ಗುರುವಾರ) ಭಾರತ್ ಬಂದ್ಗೆ ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳ ರದ್ದು ಮತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದಲ್ಲೂ ಪ್ರತಿಭಟನೆಗೆ ಕರೆ ನೀಡಲಾಗಿದೆ. ಐಎನ್ಟಿಯುಸಿ, ಎಐಟಿಯುಸಿ, ಎಚ್ಎಂಎಸ್, ಸಿಐಟಿಯು, ಎಐಯುಟಿಯುಸಿ,
ಆಲಮಟ್ಟಿ ಅಣೆಕಟ್ಟು ಎತ್ತರಕ್ಕೆ ಚಂದ್ರಬಾಬು ನಾಯ್ಡು ಕ್ಯಾತೆ
ಆಂಧ್ರದ ಲಕ್ಷಾಂತರ ಕುಟುಂಬಗಳಿಂದು ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಗಡಿ ಜಿಲ್ಲೆಗಳಲ್ಲಿ ತಮ್ಮ ಜೀವನೋಪಾಯಕ್ಕಾಗಿ ನೆಲೆಯನ್ನು ಕಂಡುಕೊಂಡಿದೆ. ಅಲ್ಲದೆ ತೆಲುಗಿನ ಸಾವಿರಾರು ಮಂದಿ ಉದ್ಯಮಿಗಳು ಕರ್ನಾಟಕದಲ್ಲಿ ರಿಯಲ್ ಎಸ್ಟೇಟ್ ಮತ್ತು ವಿವಿಧ ಕೈಗಾರಿಕೆಗಳ ವಲಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆಲಮಟ್ಟಿ ಎತ್ತರಕ್ಕೆ ಅಡ್ಡಿ ಹೇಳುವ
ಥಣಿಸಂದ್ರದಲ್ಲಿ ಬೈಕ್ಗೆ ಶಾಲಾ ಬಸ್ ಡಿಕ್ಕಿ: ಪುಟ್ಟ ಮಕ್ಕಳಿಬ್ಬರ ಸಾವು
ಶಾಲಾ ಬಸ್ ಬೈಕ್ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಮಕ್ಕಳ ಮೇಲೆಯೇ ಬಸ್ ಚಲಿಸಿದ್ದರಿಂದ ಪುಟ್ಟ ಮಕ್ಕಳಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನ ಥಣಿಸಂದ್ರದ ಪೊಲೀಸ್ ಕ್ವಾರ್ಟಸ್ ಬಳಿ ನಡೆದಿದೆ. ಯಾದಗಿರಿಯ ನಾಗನಗೌಡಸಿಎಆರ್ನಲ್ಲಿ ಕಾನ್ಸ್ಟೇಬಲ್ ಆಗಿದ್ದು, ಹಾಲು ತರಲೆಂದು ಮಕ್ಕಳನ್ನು ಕರೆದುಕೊಂಡು
ಯತೀಂದ್ರ ಅವರ ಮಾತೇ ನಮಗೆ ವೇದವಾಕ್ಯವೆಂದು ಕುಟುಕಿದ ಡಿಕೆ ಸುರೇಶ್
ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ ಎಂಬ ವಿಚಾರದಲ್ಲಿ ಡಿಸಿಎಂ ಅವರು ಈಗಾಗಲೇ ಹೇಳಿದ್ದಾರೆ. ಅವರಷ್ಟು ತಿಳುವಳಿಕೆ ಇಲ್ಲ. ಅವರಷ್ಟು ದೊಡ್ಡವರು ನಾವಲ್ಲ. ಯತೀಂದ್ರ ಅವರು ಏನು ಹೇಳುತ್ತಾರೋ ಅದೇ ವೇದವಾಕ್ಯ ಎಂದು ಬಮೂಲ್ ಅಧ್ಯಕ್ಷ ಡಿಕೆ. ಸುರೇಶ್ ಕುಟುಕಿದ್ದಾರೆ.
ಮನೆ ಮುಂದೆ ಕೆಮ್ಮಿದ್ದಕ್ಕೆ ಹಲ್ಲೆ: ಬಿಡದಿಯಲ್ಲಿ ವ್ಯಕ್ತಿ ಸಾವು
ರಾಮನಗರ ತಾಲೂಕಿನ ಬಿಡದಿಯಲ್ಲಿ ಮನೆ ಮುಂದೆ ವ್ಯಕ್ತಿಯೊಬ್ಬ ಕೆಮ್ಮಿದ ಎಂಬ ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಆತ ಮೃತಪಟ್ಟಿದ್ದಾನೆ. ರಾಜಸ್ಥಾನ ಮೂಲದ ವಿನೋದ್ ಕುಮಾರ್ ಶೈನಿ (34) ಹಲ್ಲೆಯಿಂದ ಅಸು ನೀಗಿದ ವ್ಯಕ್ತಿ. ಅವರು ಕಳೆದ 11 ವರ್ಷಗಳಿಂದ ಬಿಡದಿಯ
ಬಿಜೆಪಿಯ ಭೂಕಾಂತ್ ಸಚಿವ ಸ್ಥಾನಮಾನ ವಾಪಸ್ ಪಡೆದ ಸರ್ಕಾರ
ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ಅಧ್ಯಕ್ಷ ಭೂಕಾಂತ್ಗೆ ನೀಡಲಾಗಿದ್ದ ರಾಜ್ಯ ಸಚಿವ ಸಂಪುಟದ ಸ್ಥಾನವಮಾನವನ್ನು ಸರ್ಕಾರ ವಾಪಸ್ ಪಡೆದಿದೆ. ಬಿಜೆಪಿ ನಾಯಕ ಭೂಕಾಂತ್ಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕಾರ್ಯಕರ್ತರು
ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂ ಕಡ್ಡಾಯ
‘ವಂದೇ ಮಾತರಂ’ ಗೀತೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ರಾಷ್ಟ್ರಗೀತೆಗೂ ಮುನ್ನ ʻವಂದೇ ಮಾತರಂʼ ಗೀತೆ ಹಾಡಬೇಕು ಅಥವಾ ನುಡಿಸಬೇಕು ಎಂದು ಹೊಸ ಮಾರ್ಗಸೂಚಿ ಹೊರಡಿಸಿದೆ. ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ್ದು, ಪದ್ಮ ಪ್ರಶಸ್ತಿ




