Featured
ಬಾಗೇಪಲ್ಲಿಯಲ್ಲಿ ಅಕ್ರಮ ವಾಸವಿರುವ ಪಾಕ್ ಮಹಿಳೆ, ಮಗ ಅರೆಸ್ಟ್
ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದಾಸಗಾರೆಪಲ್ಲಿ ಗ್ರಾಮದಲ್ಲಿ ಅಕ್ರಮವಾಗಿ ವಾಸವಿರುವ ಪಾಕಿಸ್ತಾನದ ಮಹಿಳೆ ಫರ್ಹಾನಾಜ್ ಮತ್ತು ಮಗ ಮೊಹಮ್ಮದ್ ಫರ್ದೀನ್ ಖಾನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ವೀಸಾ ಅವಧಿ ಮುಗಿದ ಬಳಿಕವೂ ಭಾರತದಲ್ಲೇ ಅಕ್ರಮವಾಗಿ ನೆಲೆಸಿದ್ದ ಆರೋಪದಡಿ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಮುಂದುವರಿಸಿದ್ದಾರೆ. ದಾಸಗಾರೆಪಲ್ಲಿಯ ನಿವಾಸಿ ಅಯೂಬ್ ಖಾನ್ ಪಾಕಿಸ್ತಾನದ ಫರ್ಹಾನಾಜ್ ಅವರನ್ನು ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಫರ್ಹಾನಾಜ್ ಹಾಗೂ ಮಗ ಫರ್ದೀನ್ ಖಾನ್
ಮಂಗಳೂರಿನಲ್ಲಿ ಎಂಟು ಬಾಂಗ್ಲಾದೇಶಿಗಳ ಬಂಧನ
ಅಕ್ರಮವಾಗಿ ಭಾರತ ಪ್ರವೇಶಿಸಿ, ನಕಲಿ ಆಧಾರ್ ಕಾರ್ಡ್ಗಳನ್ನು ಬಳಸಿ ಮಂಗಳೂರಿನ ಮುಕ್ಕಾ ಪ್ರದೇಶದ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಅ.11 ವಿಜೃಂಭಣೆಯ ದಸರಾ ಉದ್ಘಾಟನೆ, ಅ.21ಕ್ಕೆ ಜಂಬೂ ಸವಾರಿ: ಸಿಎಂ ಡಿಕೆ ಶಿವಕುಮಾರ್
ನಾಡಹಬ್ಬ ದಸರಾ ಹಬ್ಬವನ್ನು ಈ ಬಾರಿ 11 ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದ್ದು, ಕರ್ನಾಟಕ ರಾಜ್ಯದ ಎಲ್ಲಾ ಸಂಸ್ಕೃತಿ ಪರಂಪರೆಗಳಿಗೆ ಅನುಗುಣವಾಗಿ ಹೊಸ ಹೊಸ ಕಾರ್ಯಕ್ರಮಗಳನ್ನು ಅಳವಡಿಸಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಾಡಹಬ್ಬ ದಸರಾ- 2026 ಆಚರಣೆ
ಜಸ್ಟಿಸ್ ನಾಗಮೋಹನ್ ದಾಸ್ರ “ಮೆಮೋರೆಬಲ್ ಟ್ರಯಲ್ಸ್” ಬಿಡುಗಡೆಗೊಳಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಬರೆದಿರುವ “ಮೆಮೋರೆಬಲ್ ಟ್ರಯಲ್ಸ್ – ಅವಿಸ್ಮರಣೀಯ ಪ್ರಕರಣಗಳು” ಕೃತಿಯ ಕನ್ನಡ ಹಾಗೂ ಇಂಗ್ಲೀಷ್ ಆವೃತ್ತಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. ಮೆಮೋರೆಬಲ್ ಟ್ರಯಲ್ಸ್ – ಅವಿಸ್ಮರಣೀಯ ಪ್ರಕರಣಗಳು ಕೃತಿಯನ್ನುಸಂತೋಷದಿಂದ ಲೋಕಾರ್ಪಣೆಯನ್ನು ಮಾಡಿದ್ದೇನೆ. ಪುಸ್ತಕಗಳನ್ನು ಉಚಿತ
ತಾರ್ಕಿಕ ಅಂತ್ಯ ಕಾಣದ ಬಿಟ್ ಕಾಯಿನ್ ದಂಧೆ
ದೇಶ ವಿದೇಶಗಳಲ್ಲಿ ಬಿಟ್ ಕಾಯಿನ್ ದಂಧೆಯನ್ನು ತೆರೆಮರೆಯಲ್ಲಿ ಮುಂದುವರಿಸಿರುವ ನಾಡಿನ ಪ್ರಭಾವಿ ವ್ಯಕ್ತಿಗಳ ವ್ಯವಹಾರ ಮತ್ತು ವಹಿವಾಟಿಗೆ ಭಾದಕ ಆಗದ ರೀತಿಯಲ್ಲಿ ಎಸ್ಐಟಿ ಅತಿ ಜಾಣ್ಮೆಯಿಂದ ಬಿಟ್ ಕಾಯಿನ್ ಪ್ರಕರಣದ ಬಿ ರಿಪೋರ್ಟ್ಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಇದರಲ್ಲಿ ಹೊಸದೇನೂ ಇಲ್ಲ. ಸಾಕ್ಷ್ಯಗಳ
ಹಾವೇರಿಯಲ್ಲಿ ಆಟವಾಡುತ್ತಿದ್ದ ಮಗು ಕುಸಿದು ಸಾವು
ಹಾವೇರಿಯಲ್ಲಿ ಆಟವಾಡುತ್ತಿದ್ದ ಒಂದು ವರ್ಷದ ಮಗು ಏಕಾಏಕಿ ಕುಸಿದು ಬಿದ್ದು ಅಸು ನೀಗಿದೆ. ಕುಸಿದು ಬಿದ್ದ ಮಗುವನ್ನು ಪೋಷಕರು ಹಾವೇರಿಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವೈದ್ಯರು ಇರಲಿಲ್ಲ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಮಗು ಮೃತಪಟ್ಟಿದ್ದಾಗಿ ಪೋಷಕರು
ಶಾಶ್ವತ ನಿವಾಸ ಪ್ರಮಾಣ ಪತ್ರ ಅಂದರೆ ಅದು ಪೌರತ್ವ ವಿಚಾರ: ಚರ್ಚೆಗೆ ಗ್ರಾಸವಾದ ಎಂಎಲ್ಸಿ ಛಲವಾದಿ ಹೇಳಿಕೆ
ಶಾಶ್ವತ ನಿವಾಸ ಪ್ರಮಾಣ ಪತ್ರ ಕೊಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದು, ಶಾಶ್ವತ ನಿವಾಸ ಪ್ರಮಾಣ ಪತ್ರ ಅಂದರೆ ಅದು ಪೌರತ್ವ ವಿಚಾರ. ಶಾಶ್ವತ ನಿವಾಸ ಪ್ರಮಾಣ ಪತ್ರ ಕೊಡಲು ರಾಜ್ಯ
ಜಿಬಿಎ ಚುನಾವಣೆ ಡಿಸೆಂಬರ್ ಒಳಗೆ ನಡೆಸಲು ಕೋರಿ ರಾಜ್ಯ ಸರ್ಕಾರದಿಂದ ಸುಪ್ರೀಂಗೆ ಅರ್ಜಿ
ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯನ್ನು ಡಿಸೆಂಬರ್ ಒಳಗೆ ನಡೆಸಲು ಅನುಮತಿ ಕೋರಿ ಸುಪ್ರೀಂ ಕೋರ್ಟ್ಗೆ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ. ಎಸ್ಐಆರ್ ನಡೆಯುತ್ತಿರುವುದರಿಂದ ಆಗಸ್ಟ್ನಲ್ಲಿ ಚುನಾವಣೆ ನಡೆಸುವುದು ಕಷ್ಟ ಎಂದು ಸರ್ಕಾರ ವಾದಿಸಿದೆ. ಬೆಂಗಳೂರಿನಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ
ಅಯೋಧ್ಯೆ ಮಂದಿರ ಹಣ ಎಣಿಕೆ ಸಿಬ್ಬಂದಿ ಸಾಮೂಹಿಕ ರಾಜೀನಾಮೆ
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ದ ಹಣ ಎಣಿಕೆಗೆ ನಿಯೋಜನೆಗೊಂಡಿದ್ದವರಲ್ಲಿ 23 ಹಣ ಎಣಿಕೆ ಸಿಬ್ಬಂದಿ ಟ್ರಸ್ಟ್ನ ಕಠಿಣ ನಿಯಮಗಳಿಗೆ ಬೇಸತ್ತು ಕೆಲಸಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ರಾಮಮಂದಿರಕ್ಕೆ ಭಕ್ತರಿಂದ ಕೋಟ್ಯಂತರ ರೂಪಾಯಿ ದೇಣಿಗೆ ಬರುತ್ತಿದೆ. ಎಣಿಕೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ
ರೈತರ ಕಣ್ಣೀರಲ್ಲಿ ಕೈ ತೊಳೆಯುತ್ತಿರುವ ಸಿಎಂ ಶಿವಕುಮಾರ್: ಆರ್ ಅಶೋಕ
ರೈತರ ಕಣ್ಣೀರಲ್ಲಿ ಕೈ ತೊಳೆಯುತ್ತಿರುವ ಸಿಎಂ ಡಿಕೆ ಶಿವಕುಮಾರ್ ಅವರೇ, ತಮಿಳುನಾಡಿಗೆ ಕಾವೇರಿ ನೀರು ಧಾರೆ ಎರೆಯುತ್ತಿರುವ ನಿಮ್ಮ ನಾಡದ್ರೋಹಿ @INCKarnataka ಸರ್ಕಾರಕ್ಕೆ ರೈತರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿದ್ದಾರೆ. ಕಾವೇರಿ ಜಲಾನಯನ




