Featured
ಕೆಪಿಎಸ್ಸಿ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲವೆಂದ ಪ್ರಿಯಾಂಕ್ ಖರ್ಗೆ
ಕೆಪಿಎಸ್ಸಿ ಪರೀಕ್ಷಾ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ರಾಜ್ಯದ ಗೃಹ, ಐ.ಟಿ-ಬಿ.ಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುಗಿ ನಗರದ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದವರು ಎಷ್ಟೇ ಬಲಿಷ್ಟರಾದರೂ, , ಯಾವುದೇ ಪಕ್ಷದವರಾದರು ಸರಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ನ್ಯಾಯ
ಸಿಎಂ ಡಿಕೆ ಶಿವಕುಮಾರ್ ಆಗಮನಕ್ಕೂ ಮುನ್ನವೇ ಕೂಡ್ಲಿಗಿಯಲ್ಲಿ ಜನಸಾಗರ
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಗಮನಕ್ಕೂ ಮುನ್ನವೇ ಕೂಡ್ಲಿಗಿ ಪಟ್ಟಣದಲ್ಲಿ ಆಯೋಜಿಸಿರುವ ‘ಪ್ರಜಾಸೇವಾ’ ಆಂದೋಲನ ಕಾರ್ಯಕ್ರಮಕ್ಕೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು, ಕಾರ್ಯಕ್ರಮದ ವೇದಿಕೆಯ ಮುಂಭಾಗದಲ್ಲಿ ಜನಸಾಗರವೇ ಕಂಡುಬಂತು. ತಾಲೂಕಿನ ವಿವಿಧ ಗ್ರಾಮಗಳಿಂದ ಬೆಳಗ್ಗಿನಿಂದಲೇ ಸಾರ್ವಜನಿಕರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು
ಸಾಲ ಮನ್ನಾ: ಕೇಂದ್ರದ ಕಡೆ ಬೆಟ್ಟು ಯಾವ ಸೀಮೆ ಆಡಳಿತವೆಂದು ಆರ್ ಅಶೋಕ ಕಿಡಿ
ಸಾಲ ಮನ್ನಾ ಮಾಡಿ ಎಂದರೆ ಕೇಂದ್ರ ಸರ್ಕಾರದ ಕಡೆಗೆ ಬೆಟ್ಟು ತೋರಿಸಿ ನುಣುಚಿಕೊಳ್ಳುವುದು ಯಾವ ಸೀಮೆ ಆಡಳಿತ, ಸಿಎಂ @DKShivakumar ಅವರೇ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಪ್ರಶ್ನಿಸಿದ್ದಾರೆ. ನಿಮ್ಮ ನಾಲಾಯಕ್ @INCKarnataka ಸರ್ಕಾರದ ಹೊಣೆಗೇಡಿತನ ಮತ್ತು ನೈತಿಕ ಅಧಃಪತನಕ್ಕೆ
ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ: 8 ವಿದ್ಯಾರ್ಥಿಗಳ ಸಾವು
ತಿರುವನಂತಪುರದಲ್ಲಿ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಎಂಟು ವಿದ್ಯಾರ್ಥಿಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ನಡೆದಿದೆ. ತಮಿಳುನಾಡಿನ ಸೇಲಂನ ವಿಶ್ವ (20), ದಿಂಡಿಗಲ್ನ ಸೂರ್ಯ (20), ಯುವಸಂಜಿತ್ (20) ಹಾಗೂ ಮಧುರೈನ ಸಂತೋಷ್ (20) ಮತ್ತು ಪ್ರಸನ್ನ ಮೃತಪಟ್ಟವರು
ರಾಜ್ಯದಲ್ಲಿ ಬರ: ಮನಮೋಹನ್ ಸಿಂಗ್ ಅವರಂತೆ ನರೇಂದ್ರ ಮೋದಿ ನೆರವಿಗೆ ಬರಲಿ ಎಂದ ಮುಖ್ಯಮಂತ್ರಿ ಶಿವಕುಮಾರ್
ಕೇಂದ್ರ ಸರ್ಕಾರದವರು ರೈತರ ಸಹಾಯಕ್ಕೆ ಬರಬೇಕು. ಇದು ಬಿಜೆಪಿಯವರ ಜವಾಬ್ದಾರಿ. ಅವರ ಶಾಸಕರು ಕೇಂದ್ರ ಸರ್ಕಾರ, ಪ್ರಧಾನಿ ಮೇಲೆ ಒತ್ತಾಯ ಮಾಡಿ ಸಾಲಮನ್ನಾ ಮಾಡಿಸಬೇಕು. ಹಿಂದೆ ನಮ್ಮ ಸರ್ಕಾರ ಮನಮೋಹನ್ ಸಿಂಗ್ ಅವರು ಮಾಡಿದರು, ಇವರು ಕೂಡ ಮಾಡಬೇಕು. ಬ್ಯಾಂಕ್ ಗಳು
ಬರ ನಿಖರ ಮಾಹಿತಿ ಕೊಡಿ, ಬೆಳೆವಿಮೆ ಅಕ್ರಮ, ಮೀಟರ್ ಬಡ್ಡಿ, ರೌಡಿ ನಿಗ್ರಹಕ್ಕೆ ಮುಂದಾಗಿ: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳೆ ವಿಮೆ ಬಗ್ಗೆ ಜಿಲ್ಲೆಯಲ್ಲಿ ಸಾಕಷ್ಟು ದೂರುಗಳು ಬಂದಿವೆ. ಏಜೆಂಟ್ ಗಳು ರೈತರ ದಾರಿ ತಪ್ಪಿಸುವ ಕೆಲಸಕ್ಕೆ ಕಡಿವಾಣ ಹಾಕಬೇಕು. ಕೆಲವು ಫೈನಾನ್ಸ್ ಕಂಪೆನಿಗಳ ಮೀಟರ್ ಬಡ್ಡಿ ದಂಧೆಯನ್ನು ನಿಲ್ಲಿಸಲು ಪೊಲೀಸರು ಮುಂದಾಗಬೇಕು. ಅಮಾಯಕರು ಈ ಜಾಲಕ್ಕೆ ಸಿಲುಕಿಕೊಳ್ಳದಂತೆ ನಿಗಾ ವಹಿಸಬೇಕು.
15 ದಿನಗಳಲ್ಲಿ ಮತ್ತಷ್ಟು ತಾಲೂಕುಗಳು ಬರಪೀಡಿತವೆಂದು ಘೋಷಣೆ: ಮುಖ್ಯಮಂತ್ರಿ
ರಾಜ್ಯದಲ್ಲಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಮುಂದಿನ 15 ದಿನಗಳಲ್ಲಿ ಮತ್ತಷ್ಟು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲು ತೀರ್ಮಾನ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬಾಗಲಕೋಟೆಯ ಕೂಡಲಸಂಗಮದಲ್ಲಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಜಿಲ್ಲಾ ಸಚಿವರು
ಫುಟ್ಪಾತ್ ಮತ್ತೆ ಒತ್ತುವರಿ ಮಾಡಿದ್ರೆ ಎಫ್ಐಆರ್: ಸಚಿವ ಕೃಷ್ಣಬೈರೇಗೌಡ
ಬೆಂಗಳೂರು ನಗರದಲ್ಲಿ ತೆರವುಗೊಳಿಸಿರುವ ಫುಟ್ಪಾತ್ಗಳನ್ನು ಮತ್ತೆ ಅತಿಕ್ರಮಿಸಿಕೊಂಡರೆ ಅಂಥವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಕಠಿಣ ಕ್ರಮ ಜರುಗಿಸುವಂತೆ ಜಿಬಿಎ ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಬೆಂಗಳೂರು ಮಹಾನಗರದ ಐದು ನಗರ ಪಾಲಿಕೆ ವ್ಯಾಪ್ತಿಗಳಲ್ಲಿ ಪೊಲೀಸ್ ಹಾಗೂ ನಾಗರಿಕ ಸಂಸ್ಥೆಗಳ
ಬೇಲೂರಿನಲ್ಲಿ ದೂರು ನೀಡಲು ಹೋದ ವ್ಯಕ್ತಿ ಮೇಲೆ ಮಹಿಳಾ ಪೇದೆ ಹಲ್ಲೆ
ಹಣಕಾಸಿಗೆ ಸಂಬಂಧಿಸಿದಂತೆ ಗಲಾಟೆ ನಡೆದ ಬಗ್ಗೆ ದೂರು ನೀಡಲೆಂದು ಬೇಲೂರು ಪೊಲೀಸ್ ಠಾಣೆಗೆ ಹೋಗಿದ್ದ ವ್ಯಕ್ತಿ ಮೇಲೆ ಮಹಿಳಾ ಪೇದೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬೇಲೂರು ಕಬ್ಬಿನಮನೆ ಗ್ರಾಮದ ಪ್ರಕಾಶ್ ಎಂಬವರ ಮೇಲೆ ಮಹಿಳಾ ಕಾನ್ಸ್ಟೇಬಲ್ ಲಾವಣ್ಯ ಲಾಠಿಯಿಂದ ಹಲ್ಲೆ
ಮಾನಸಿಕ ಅಸ್ವಸ್ಥೆ ಮೇಲೆ ದೌರ್ಜನ್ಯ ಯತ್ನ: ಕಚ್ಚಿ ಬಾಲಕನ ಓಡಿಸಿದ ಬೀದಿ ನಾಯಿ
ತಮಿಳುನಾಡಿನ ಕೊಯಂಬತ್ತೂರಿನ ರಸ್ತೆಬದಿಯಲ್ಲಿ ಮಾನಸಿಕ ಅಸ್ವಸ್ಥೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಬಾಲಕನನ್ನು ಬೀದಿನಾಯಿ ಕಚ್ಚಿ ಓಡಿಸಿದ ಘಟನೆ ನಡೆದಿದೆ. ರಸ್ತೆಬದಿಯಲ್ಲಿದ್ದ ಅಸಹಾಯಕ ಹಾಗೂ ಮಾನಸಿಕ ಅಸ್ವಸ್ಥ ಮಹಿಳೆ ಮೇಲೆ ಬಾಲಕ ದೌರ್ಜನ್ಯ ಎಸಗಲು ಮುಂದಾದಾಗ ಬೀದಿ ನಾಯಿ ಆತನ




