Featured
ನಮ್ಮ ಭವಿಷ್ಯ ತೀರ್ಮಾನಿಸುವ ಎಸ್ಐಆರ್ ಬಗ್ಗೆ ಎಚ್ಚರವಾಗಿರಿ: ಡಿಕೆ ಶಿವಕುಮಾರ್
ನಮ್ಮ ರಾಜ್ಯಕ್ಕೆ ಎಸ್ಐಆರ್ ಬರುತ್ತಿದೆ. ಅಧಿಕಾರಿಗಳು ಈಗಾಗಲೇ ಕೆಲಸ ಮಾಡುತ್ತಿದ್ದಾರೆ. ಬಿಎಲ್ಎ ವಿಚಾರದಲ್ಲಿ ಯಾವುದೇ ಮುಲಾಜಿರುವುದಿಲ್ಲ. ನಮ್ಮ ಭವಿಷ್ಯ ತೀರ್ಮಾನವಾಗುವುದೇ ಎಸ್ಐಆರ್ ನಲ್ಲಿ. ಮತದಾರರ ರಕ್ಷಣೆ ಮಾಡುವ ಕೆಲಸ ಮಾಡಬೇಕು. ಬಿಎಲ್ಎಗಳು ಎಚ್ಚರಿಕೆಯಿಂದ ಇರಬೇಕು. ನೀವು ಹಕ್ಕನ್ನು ಕಾಪಾಡಿಕೊಳ್ಳಬೇಕು. ನಮ್ಮ ರಾಜ್ಯದಿಂದ ವೋಟ್ ಚೋರಿ ಅಭಿಯಾನ ಆರಂಭವಾಗಿದ್ದು, ಬಹಳ ಎಚ್ಚರಿಕೆಯಿಂದ ಇರಬೇಕು. ಬೇರೆ ಬೇರೆ ರಾಜ್ಯಗಳಲ್ಲಿ ಏನಾಗುತ್ತಿದೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ಎಂದು ಕೆಪಿಸಿಸಿ ಅಧ್ಯಕ್ಷರಾಗಿರುವ ಡುಇಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ತೀರ್ಥಹಳ್ಳಿಯಲ್ಲಿ ಬಸ್ ಕಾರು ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿ ಮೂವರ ಸಾವು
ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ರಿಹಾನ್ (15), ರಾಹಿಲ್ (9) ಮತ್ತು ಫಾತಿಮಾ (76)
ಶಿಕಾರಿಪುರ ಶಾಲೆ ಕೊಠಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ
ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಧನಂಜಯ್(51) ಶಾಲೆಯ ತರಗತಿ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಶಿಕ್ಷಕ ಧನಂಜಯ್ ಶಾಲೆಗೆ ಹೋಗಿ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದಾರೆ. ನಂತರ ವಿಶ್ರಾಂತಿ
ಜಿಬಿಎ ಮೊದಲ ಚುನಾವಣೆ ನೂರಕ್ಕೆ ನೂರು ದೋಷರಹಿತ ಮತ್ತು ಪಾರದರ್ಶಕವಾಗಲಿ
ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯಲ್ಲಿ ವಾಸವಾಗಿರುವವರೆಲ್ಲರೂ ಇಲ್ಲಿನ ಮತದಾರರಲ್ಲ. ಚುನಾವಣಾ ಆಯೋಗವೀಗ ನೂರಕ್ಕೆ ನೂರರಷ್ಟು ದೋಷರಹಿತ ಮತ್ತು ಪಾರದರ್ಶಕ ಮತದಾರರಪಟ್ಟಿಯನ್ನು ಮೊದಲು ಸಿದ್ಧಪಡಿಸಬೇಕಿರುವ ತುರ್ತು ಅನಿವಾರ್ಯತೆ ಇದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಚುನಾವಣೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ಮುಂದಿನ ಜೂನ್ ತಿಂಗಳೊಳಗೆ ಚುನಾವಣೆ
ಬೆಂಗಳೂರಿನಲ್ಲಿ ದಿ ಎನರ್ಜಿ ರನ್ 2.0: 2500 ಓಟಗಾರರು ಭಾಗಿ
ಬೆಂಗಳೂರು : ಹಿಟಾಚಿ ಎನರ್ಜಿ ಇಂಡಿಯಾ ಭಾನುವಾರ ಬೆಂಗಳೂರಿನಲ್ಲಿ ದಿ ಎನರ್ಜಿ ರನ್ 2.0 ಅನ್ನು ಆಯೋಜಿಸಿತ್ತು, ಇದು ಟೀಮ್ ವರ್ಕ್, ಯೋಗಕ್ಷೇಮ ಮತ್ತು ಭಾರತದ ಬೆಳವಣಿಗೆಗೆ ಶಕ್ತಿ ತುಂಬುವ ಹಂಚಿಕೆಯ ಬದ್ಧತೆಯನ್ನು ಆಚರಿಸಲು ಉದ್ಯೋಗಿಗಳು, ಗ್ರಾಹಕರು ಮತ್ತು ಪಾಲುದಾರರನ್ನು ಒಟ್ಟುಗೂಡಿಸಿತು.
ನಾಯಿ ಕಚ್ಚಿದರೆ ರಾಜ್ಯ ಸರ್ಕಾರವೇ ಪರಿಹಾರ ನೀಡಬೇಕು: ಸುಪ್ರೀಂಕೋರ್ಟ್
ನವದೆಹಲಿ: ಪ್ರತಿ ನಾಯಿ ಕಡಿತದಿಂದ ಗಾಯಗೊಂಡಲ್ಲಿ ಅಥವಾ ಮೃತಪಟ್ಟಲ್ಲಿ ಆಯಾ ರಾಜ್ಯ ಸರ್ಕಾರಗಳು ದುಬಾರಿ ಪರಿಹಾರವನ್ನು ತೆರಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಬೀದಿ ನಾಯಿಗಳ ಕುರಿತು ಪ್ರಕರಣದ ವಿಚಾರಣೆಯು ಮಂಗಳವಾರ ನ್ಯಾ. ವಿಕ್ರಂನಾಥ್, ನ್ಯಾ. ಸಂದೀಪ್ ಮೆಹ್ತಾ ಮತ್ತು ನ್ಯಾ.
ಮಾರ್ಚ್ ನಲ್ಲಿ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಎರಡುವರೆ ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಫೆಬ್ರವರಿ 13 ಕ್ಕೆ ಹಾವೇರಿಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಳ್ಳಲು ತೀರ್ಮಾನ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನಗರದಲ್ಲಿ
ಇರಾನ್ ನಲ್ಲಿ ಹಿಂಸಾಚಾರ: 2000ಕ್ಕೂ ಅಧಿಕ ಜನರ ಸಾವು
ಕಳೆದೆರಡು ವಾರಗಳಿಂದ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗೆ ಇರಾನ್ ನಲ್ಲಿ ಇದುವರೆಗೆ ಕನಿಷ್ಠ 2000 ಜನರು ಬಲಿಯಾಗಿದ್ದಾರೆ. ಭದ್ರತಾ ಸಿಬ್ಬಂದಿ ಮತ್ತು ನಾಗರಿಕರ ನಡುವಿನ ಸಂಘರ್ಷದ ಲಾಭ ಪಡೆದ ಉಗ್ರರು ಹಿಂಸಾಚಾರ ನಡೆಸುತ್ತಿದ್ದಾರೆ ಎಂದು ಇರಾನ್ ಅಧಿಕಾರಿಗಳು ಆರೋಪಿಸಿದ್ದಾರೆ. ಮೃತಪಟ್ಟವರಲ್ಲಿ ಭದ್ರತಾ ಸಿಬ್ಬಂದಿಯೂ
ಮೆಟ್ರೋ ಪ್ರಯಾಣಿಕರಿಗೆ ಸಂಕ್ರಾಂತಿಗೆ ಸಿಹಿಸುದ್ದಿ: ದೈನಂದಿನ ಪಾಸ್ ವ್ಯವಸ್ಥೆ ಜಾರಿ!
ಅನಿಯಮಿತವಾಗಿ ಮೆಟ್ರೋ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿರುವ ಬಿಎಂಆರ್ ಸಿಎಲ್ ಜನವರಿ 15ರಿಂದ ಪಾಸ್ ವ್ಯವಸ್ಥೆಯನ್ನು ಜಾರಿಗೆ ತರಲಿದೆ. ಬಿಎಂಆರ್ ಸಿಎಲ್ ಸಂಸ್ಥೆ ಶನಿವಾರ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ದಿನ, 3 ದಿನದ ಹಾಗೂ 5 ದಿನದ ಪಾಸ್ ವ್ಯವಸ್ಥೆ
`10 ನಿಮಿಷದಲ್ಲಿ ಡೆಲಿವರಿ’ ವ್ಯವಸ್ಥೆ ಕೈಬಿಟ್ಟ ಬ್ಲಿಂಕಿಟ್, ಸ್ವಿಗ್ಗಿ
ಕೇಂದ್ರ ಸರ್ಕಾರದ ಸೂಚನೆ ಮೇರೆಗೆ 10 ನಿಮಿಷದಲ್ಲಿ ಮನೆ ಮನೆಗೆ ವಸ್ತುಗಳನ್ನು ಡೆಲಿವರಿ ಮಾಡುವ ವ್ಯವಸ್ಥೆಯನ್ನು ಬ್ಲಿಂಕಿಟ್ ಮತ್ತು ಸ್ವಿಗ್ಗಿ ಕೈಬಿಟ್ಟಿದೆ. ಉದ್ಯೋಗ ಮತ್ತು ಸಾಮಾಜಿಕ ಭದ್ರತೆಗೆ ಒತ್ತಾಯಿಸಿ ಡಿಸೆಂಬರ್ 31ರಂದು ಸ್ವಿಗ್ಗಿ, ಜೊಮ್ಯಾಟೋ, ಜಿಪ್ಟೊ, ಫ್ಲಿಪ್ ಕಾರ್ಟ್, ಬ್ಲಿಂಕಿಟ್ ಸೇರಿ




