Menu

ದೇವರು, ದೇವಸ್ಥಾನ ಎಲ್ಲರ ಆಸ್ತಿ, ದೇವರಿಗೆ ಜಾತಿ, ಧರ್ಮ ಇಲ್ಲ: ಡಿಸಿಎಂ

“ದೇವರು ಕಷ್ಟ ಕೊಡುತ್ತಾನೆ ಜೊತೆಗೆ ಅದನ್ನು ಎದುರಿಸುವ ಶಕ್ತಿಯನ್ನೂ ನೀಡುತ್ತಾನೆ. ದಾರಿ ತೋರಿಸುವುದು ದೇವರ ಕೆಲಸ, ಗುರಿ ತಲುಪಬೇಕಿರುವುದು ನಮ್ಮ ಕೆಲಸ. ದೇವರು, ದೇವಸ್ಥಾನ ಎಲ್ಲರ ಆಸ್ತಿ. ದೇವರು ನೀಡುವ ಅವಕಾಶವನ್ನು ಬಳಸಿಕೊಳ್ಳಬೇಕು. ಅವಕಾಶ ಸಿಕ್ಕಾಗ ಕೈಯಿಂದ ದಾನ ಮಾಡಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೊಳ್ಳೇಗಾಲ ತಾಲೂಕಿನ  ಶ್ರೀ ಜಗನ್ಮೋಹನ ರಂಗನಾಥಸ್ವಾಮಿ ದೇವಾಲಯ ಜೀರ್ಣೋದ್ಧಾರ ಪೂರಕ ಅಷ್ಟಬಂಧನ ದಿವ್ಯ ಮಹಾ ಕುಂಭಾಭಿಷೇಕ-ಸಂಪ್ರೋಕ್ಷಣ ಮಹೋತ್ಸವದಲ್ಲಿ  ಮಾತನಾಡಿದರು. ಯಾವುದೇ ದೇವರಿಗೆ

ಮೊಬೈಲ್‌ ಅತಿ ಬಳಕೆಗೆ ಗದರಿದ ಪೋಷಕರು: ಬಾವಿಗೆ ಹಾರಿದ ಮಗಳು

ಅತಿಯಾಗಿ ಮೊಬೈಲ್‌ ಬಳಸುತ್ತಿರುವುದಕ್ಕೆ ಪೋಷಕರು ಗದರಿಸಿದರೆಂದು ೧೭ ವರ್ಷದ ಮಗಳು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದ ಆಸಿಫಾಬಾದ್‌ನ ಸಂದೀಪ್ ನಗರದಲ್ಲಿ ನಡೆದಿದೆ. ಸ್ವರ್ಣಲತಾ ಮತ್ತು ಪೋಚಿರಾಮ್ ದಂಪತಿಯ ಮಗಳು ಸಾತ್ವಿಕಾ ಸ್ನಾನ ಮಾಡದೆ ಗಂಟೆಗಟ್ಟಲೆ ಮೊಬೈಲ್ ನೋಡುತ್ತಾ ಕುಳಿತಿದ್ದಳು.

ಶೀಘ್ರ ಮೇಕೆದಾಟು ಡಿಪಿಆರ್ ಸಲ್ಲಿಕೆ, ಕೇಂದ್ರದ ಅನುಮತಿ ಬಳಿಕ ಭೂಮಿಪೂಜೆ: ಡಿಕೆ ಶಿವಕುಮಾರ್

“ಮೇಕೆದಾಟು ಯೋಜನೆಗೆ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಈ ಯೋಜನೆಯ ಕಚೇರಿ ಆರಂಭಿಸಿದ್ದೇವೆ. ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯ ಜಮೀನು ನೀಡಲು ಜಮೀನು ಗುರುತಿಸುತ್ತಿದ್ದೇವೆ. ಶೀಘ್ರವೇ ಕೇಂದ್ರಕ್ಕೆ ಡಿಪಿಆರ್ ಸಲ್ಲಿಕೆ ಮಾಡಲಿದ್ದು, ಕೇಂದ್ರ ಸರ್ಕಾರದ ಅನುಮತಿ ಬಳಿಕ ಯೋಜನೆಯ ಭೂಮಿ ಪೂಜೆ ಮಾಡಲಾಗುವುದು” ಎಂದು 

ಎಬೋಲಾ ವೈರಸ್‌ ಭೀತಿ: ಭಾರತದ ವಿಮಾನ ನಿಲ್ದಾಣ, ಬಂದರುಗಳಲ್ಲಿ ಹೈ ಅಲರ್ಟ್‌

ಆಫ್ರಿಕ ಖಂಡದ ಕಾಂಗೋ ಮತ್ತು ಉಗಾಂಡಾದಲ್ಲಿ ಮಾರಣಾಂತಿಕ ಎಬೋಲಾ ವೈರಸ್ ವೇಗವಾಗಿ ಹರಡುತ್ತಿರುವ ಹಿನ್ನೆಲೆ ಭಾರತ ಸರ್ಕಾರವು ಮುನ್ನೆಚ್ಚರಿಕೆ ಕ್ರಮವಾಗಿ ದೇಶದ ಎಲ್ಲಾ ಪ್ರಮುಖ ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಹೈ-ಅಲರ್ಟ್ ಘೋಷಿಸಿ ಪ್ರಯಾಣಿಕರಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೇಂದ್ರ

ನಿಡಗುಂದಿಯಲ್ಲಿ ಮಳೆಗೆ ಮನೆ ಕುಸಿದು ಮಹಿಳೆ ಜೀವಂತ ಸಮಾಧಿ

ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಮಳೆಗೆ ಮಣ್ಣಿನ ಮನೆಯ ಮೇಲ್ಚಾವಣಿ ಕುಸಿದು 55 ವರ್ಷದ ಮಹಿಳೆ ಮಹಾದೇವಿ ಜೀವಂತ ಸಮಾಧಿಯಾಗಿದ್ದಾರೆ. ಮೃತರ ಪತಿ ಶಿವಾನಂದ ಸ್ವಲ್ಪದರಲ್ಲೇ ಸಾವಿನಿಂದ ಪಾರಾಗಿದ್ದಾರೆ. ಗೌರೀಶ್ವರ ದೇವಸ್ಥಾನ ಸಮೀಪವಿರುವ ಮಹಾದೇವಿ ಅವರ ಹಳೆಯ ಮಣ್ಣಿನ ಮನೆ ಮಳೆಗೆ

ಬೇರೆಯವರ ಹೆಸರಲ್ಲಿ ಬುಕ್‌ ಆಗಿದ್ದ ಲಾಡ್ಜ್‌ ರೂಂಗೆ ಬಂದಿದ್ದಾತ ಶವವಾಗಿ ಪತ್ತೆ

ಬೆಂಗಳೂರಿನ ಮಡಿವಾಳದ ಮಾರುತಿ ನಗರದಲ್ಲಿರುವ ಖಾಸಗಿ ಲಾಡ್ಜ್‌ನಲ್ಲಿ ತಮಿಳುನಾಡಿನ ವ್ಯಕ್ತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪುಳಿಯಂಪಟ್ಟಿ ನಿವಾಸಿ ಮುರಳಿ ಅಲಿಯಾಸ್ ಮಧು (38) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಲಾಡ್ಜ್‌ ರೂಂನ ಹಾಸಿಗೆಯ ಮೇಲೆ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದುಕೊಂಡು ಮೃತಪಟ್ಟಿದ್ದಾನೆ. ಪ್ರಕರಣದ ತನಿಖೆ

ಆಫ್ರಿಕದಿಂದ ಹರಡುತ್ತಿದೆ ಔಷಧಿ ಇಲ್ಲದ ಮಾರಣಾಂತಿಕ ಎಬೋಲಾ ವೈರಸ್‌

ಆಫ್ರಿಕದಲ್ಲಿ ಎಬೋಲಾ ವೈರಸ್‌ ವೈರಸ್‌ ಹರಡುತ್ತಿದ್ದು, ಜಾಗತಿಕವಾಗಿ ಆರೋಗ್ಯ ವಲಯದಲ್ಲಿ ಆತಂಕ ಸೃಷ್ಟಿಸಿದೆ. ಇದಕ್ಕೆ ಈವರೆಗೆ ಅಧಿಕೃತ ಚಿಕಿತ್ಸೆ, ನಿರ್ದಿಷ್ಟ ಲಸಿಕೆ ಇಲ್ಲ. ಸಾವಿನ ಪ್ರಮಾಣವೂ ಹೆಚ್ಚು. ಹೀಗಾಗಿ ವಿಶ್ವ ಆರೋಗ್ಯ ಸಂಸ್ಥೆ ತುರ್ತುಸ್ಥಿತಿ ಘೋಷಿಸಿದ್ದು, ಭಾರತದಲ್ಲೂ ಆತಂಕ ಎದುರಾಗಿದೆ. ಈ

ಸೋಲಿನ ಭಯದಿಂದ ಕಾಂಗ್ರೆಸ್ ಸರ್ಕಾರ  ಜಿಬಿಎ ಚುನಾವಣೆ ಮುಂದೂಡುತ್ತಿದೆ: ಆರ್‌ ಅಶೋಕ

ಸೋಲುವ ಭಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯನ್ನು ಕಾಂಗ್ರೆಸ್ ಸರ್ಕಾರ ಪದೇ ಪದೆ ಮುಂದೂಡುತ್ತಿದ್ದು, ಇದು ಬೆಂಗಳೂರು ಜನತೆಗೆ ಮಾಡಿರುವ ದ್ರೋಹ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ದೂರಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಇದ್ದ 198 ವಾರ್ಡ್‌ಗಳ ಆಧಾರದ

ಇರಾನ್‌ ಮೇಲೆ ದಾಳಿ: ಟ್ರಂಪ್-ನೆತನ್ಯಾಹು ಭಿನ್ನಮತ ಸ್ಫೋಟ

ಇರಾನ್ ಮೇಲಿನ ವೈಮಾನಿಕ ದಾಳಿ ತಕ್ಷಣ ಪುನರಾರಂಭಿಸಬೇಕು ಎಂದು ಬೆಂಜಮಿನ್ ನೆತನ್ಯಾಹು ಪಟ್ಟು ಹಿಡಿದಿದ್ದು, ದಾಳಿ ಮುಂದೂಡಿಕೆ ದೊಡ್ಡ ತಪ್ಪು ಎಂದು ಟ್ರಂಪ್ ಜೊತೆ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಇರಾನ್ ವಿರುದ್ಧದ ಯುದ್ಧ ಮತ್ತು ರಾಜತಾಂತ್ರಿಕ ಕಾರ್ಯತಂತ್ರ ವಿಚಾರದಲ್ಲಿ ಟ್ರಂಪ್ ಮತ್ತು

‘ಕ್ರೈಂ ಸಿಟಿ’ ಆಗುತ್ತಿರುವ ಸಿಲಿಕಾನ್‌ ಸಿಟಿ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆರ್‌ ಅಶೋಕ ಆಕ್ರೋಶ

ರಾಜಧಾನಿಯ ಅಕ್ಕಪಕ್ಕದ ಜಿಲ್ಲೆಗಳಿಗೆ “ಬೆಂಗಳೂರು” ಹೆಸರು ಅಂಟಿಸಿ ರಿಯಲ್ ಎಸ್ಟೇಟ್ ದಂಧೆ ವಿಸ್ತರಿಸುವುದರಲ್ಲಿ ತೋರಿಸುತ್ತಿರುವ ಆಸಕ್ತಿಯ ಅರ್ಧದಷ್ಟಾದರೂ ಬೆಂಗಳೂರಿನ ಸುರಕ್ಷತೆ, ಕಾನೂನು ಸುವ್ಯವಸ್ಥೆ ಬಗ್ಗೆ ಈ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿ ಇದ್ದಿದ್ದರೆ ಇಂದು ಸಿಲಿಕಾನ್ ಸಿಟಿ ‘ಕ್ರೈಂ ಸಿಟಿ’ ಆಗುತ್ತಿರಲಿಲ್ಲ ಎಂದು