Menu

ಡೇಟಿಂಗ್‌ ಆ್ಯಪ್ ಯುವತಿ ರಿಕ್ವೆಸ್ಟ್‌: ಬೆತ್ತಲೆ ಪೋಟೊ ಕಳಿಸಿ ಹಣ ಕಳೆದುಕೊಂಡ ಟೆಕ್ಕಿ

ಖಾಸಗಿ ಸಂಸ್ಥೆಯೊಂದರಲ್ಲಿ ಟೆಕ್ಕಿಯಾಗಿರುವ ಯುವಕನೊಬ್ಬ ಡೇಟಿಂಗ್‌ ಆ್ಯಪ್​​​ ಮೂಲಕ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಬಳಸಿ ರಚಿಸಲಾದ ಇಶಾನಿ ಎಂಬ ಹುಡುಗಿಯ ಬೇಡಿಕೆಯಂತೆ ತನ್ನ ಬೆತ್ತಲೆ ಪೋಟೊಗಳನ್ನು ಕಳಿಸಿ ಬಳಿಕ ಬೆದರಿಕೆಗೆ ಮಣಿದು ಹಣ ಕಲೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಪ್ರಕರಣದ ಬಗ್ಗೆ  ಟೈಮ್ಸ್‌ ಆಪ್‌ ಇಂಡಿಯಾದಲ್ಲಿ ವರದಿಯಾಗಿದೆ. ಈಜಿಪುರದ ಯುವಕ ಜನವರಿ 5 ರಂದು ಡೇಟಿಂಗ್ ಅಪ್ಲಿಕೇಶನ್ ಆ್ಯಪ್​​​ನಲ್ಲಿ ಪ್ರೊಫೈಲ್ ರಚಿಸಿದ ತಕ್ಷಣ ಇಶಾನಿ ಎಂಬ ಹೆಸರಿನಿಂದ ರಿಕ್ವೆಸ್ಟ್ ಬಂದಿದೆ.

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದ್ದು ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ . ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಳ್ಳಾರಿಯಿಂದ ಬಿಜೆಪಿ

ಮಂಡ್ಯದಲ್ಲಿ ಮಹಿಳೆಯರ ಸರ ಎಗರಿಸುತ್ತಿದ್ದ ಕಳ್ಳರಿಬ್ಬರ ಬಂಧನ

ಮಹಿಳೆಯರ ಮಾಂಗಲ್ಯ ಸರ ಅಪಹರಿಸುತ್ತಿದ್ದ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಕಳ್ಳರಿಂದ 31.98 ಲಕ್ಷ ರೂ. ಮೌಲ್ಯದ ಚಿನ್ನಾ ಭರಣ ಮತ್ತು ಎರಡು ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೈಸೂರು ಶಾಂತಿನಗರದ ಸದ್ದಾಂ ಹುಸೇನ್ ಅಲಿಯಾಸ್‌ ಸದ್ದಾಂ

ಸಾಲಕ್ಕೆ ಹೆದರಿ ಕಾರಿಗೆ ಬೆಂಕಿ ಹಚ್ಚಿಕೊಂಡು ಮಾಜಿ ಕಾರ್ಪೋರೇಟರ್ ಸಜೀವ ದಹನ

ಸಾಲದ ಬವಣೆಯಿಂದ ಕಂಗೆಟ್ಟ ದಾವಣೆಗೆರೆಯ 43ನೇ ವಾರ್ಡ್‌ನ ಬಿಜೆಪಿ ಮಾಜಿ ಕಾರ್ಪೋರೇಟರ್ ಸಂಕೋಳ್ ಚಂದ್ರಶೇಖರ ಕಾರಿಗೆ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿ ಅದರಲ್ಲೇ ಕುಳಿತುಕೊಂಡು ಸಜೀವ ದಹನವಾಗಿ ಹೋಗಿರುವ ದಾರುಣ ಘಟನೆ ನಡೆದಿದೆ. ಅವರ ಶವ ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ

ಚಿತ್ರದುರ್ಗದಲ್ಲಿ ಕಾರಿಗೆ ಲಾರಿ ಡಿಕ್ಕಿ: ಕೊಲ್ಲಾಪುರ ಡಿವೈಎಸ್ಪಿ ವೈಷ್ಣವಿ ತಾಯಿ, ಕಾರು ಚಾಲಕ ಸಾವು

ಪ್ರವಾಸ ಮುಗಿಸಿ ಮರಳುತ್ತಿದ್ದ ಕೊಲ್ಲಾಪುರ ಡಿವೈಎಸ್‌ಪಿ ವೈಷ್ಣವಿ ಹಾಗೂ ಕುಟಂಬಸ್ಥರ ಕಾರು ಚಿತ್ರದುರ್ಗದ ತಮಟಕಲ್ಲು ಗ್ರಾಮದ ಬ್ರಿಡ್ಜ್ ಬಳಿ ಲಾರಿಗೆ ಡಿಕ್ಕಿಯಾಗಿ ಚಾಲಕ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಪೊಲೀಸ್ ಅಧಿಕಾರಿ ವೈಷ್ಣವಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರೆ, ಅವರನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ

ಭ್ರಷ್ಟಾಚಾರ ಅಂತ್ಯ, ಪಾರದರ್ಶಕತೆ ಹೆಚ್ಚಿಸಿದ ವಿಬಿ ಜಿ ರಾಮ್‌ ಜಿ ಯೋಜನೆ: ಸಂಸದ ಕೆ. ಸುಧಾಕರ್‌

ಮನರೇಗಾ ಯೋಜನೆಯ ಹೆಸರಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ವಿಬಿ ಜಿ ರಾಮ್‌ಜಿ ಯೋಜನೆ ಅಂತ್ಯಗೊಳಿಸಿದೆ. ಆದರೆ ಕಾಂಗ್ರೆಸ್‌ ನಾಯಕರು ಕೇವಲ ಹೆಸರು ಬದಲಾವಣೆಯ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಸಂಸದ ಡಾ.ಕೆ. ಸುಧಾಕರ್‌ ಹೇಳಿದರು. ದೇವನಹಳ್ಳಿಯಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ

ಕರಾವಳಿ ಜಿಲ್ಲೆಗಳಲ್ಲಿ ಸಿಆರ್‌ಝಡ್ ಕಾನೂನು ಸರಳೀಕರಣ: ಡಿಕೆ ಶಿವಕುಮಾರ್

“ಕೇರಳ ಹಾಗೂ ಗೋವಾ ಮಾದರಿಯಲ್ಲಿ ಕರಾವಳಿ ನಿಯಂತ್ರಣ ವಲಯ (ಸಿಆರ್ ಝಡ್ ) ಕಾನೂನು ಸರಳೀಕರಣ ಮಾಡಲಾಗುವುದು. ಇದರ ಬಗ್ಗೆ ಕೇಂದ್ರ ಪ್ರವಾಸೋದ್ಯಮ, ಪರಿಸರ ಸಚಿವರ ಬಳಿ ನಿಯೋಗ ತೆರಳಿ ಚರ್ಚೆ ನಡೆಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಮಂಗಳೂರಿನಲ್ಲಿ ನಡೆದ

ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶ: ಮುಖ್ಯಮಂತ್ರಿ

ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ. ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡುವವರಿಗೆ ನಮ್ಮ ಸರ್ಕಾರ ಎಲ್ಲಾ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಮಂಗಳೂರಿನ ಹೋಟೆಲ್ ಅವತಾರ್ ನಲ್ಲಿ  ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ -2026 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹೊರಗಿನವರಿಗೆ ಮಲಯಾಳಂ ಪರೀಕ್ಷೆ ಕಡ್ಡಾಯವಲ್ಲ: ಸಿಎಂ ಪತ್ರಕ್ಕೆ ಕೇರಳ ಸಿಎಂ ಸ್ಪಷ್ಟನೆ

ಬೆಂಗಳೂರು: ಹೊರರಾಜ್ಯ,ವಿದೇಶಿ ವಿದ್ಯಾರ್ಥಿಗಳಿಗೆ ಮಲಯಾಳಂ ಪರೀಕ್ಷೆ ಕಡ್ಡಾಯ ಅಲ್ಲ, 9, 10ನೇ ತರಗತಿ, ಪಿಯುಸಿಗೆ ಮಲಯಾಳಂ ಪರೀಕ್ಷೆ ಕಡ್ಡಾಯಗೊಳಿಸಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ​ ಸ್ಪಷ್ಟಪಡಿಸಿದ್ದಾರೆ. ತಮ್ಮ ಎಕ್ಸ್​​ ಖಾತೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 9, 10ನೇ

ಎಚ್ಎಂಟಿಗೆ ಮೊದಲು ನ್ಯಾಯ ಕೊಡಿಸಲಿ: ಹೆಚ್.ಡಿ. ಕುಮಾರಸ್ವಾಮಿಗೆ ಡಿಕೆ ಸುರೇಶ್ ತಿರುಗೇಟು

ಬೆಂಗಳೂರು: “ಕುಮಾರಸ್ವಾಮಿ  ಕೇವಲವಾಗಿ ಮಾತನಾಡುವುದನ್ನು ಬಿಟ್ಟು ರಾಜ್ಯದ ಹಿತ ಕಾಪಾಡಲಿ, ಎಚ್ಎಂಟಿಯವರಿಗೆ ನ್ಯಾಯ ಕೊಡಿಸಲಿ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿರುಗೇಟು ನೀಡಿದರು. ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಬಳ್ಳಾರಿ ಗಲಭೆ ವಿಚಾರದಿಂದ ಡಿ.ಕೆ.