Wednesday, August 12, 2026
Menu

ಕಾವೇರಿಗಾಗಿ ನಾಳೆ ಕರ್ನಾಟಕ ಬಂದ್‌

ಕಾವೇರಿ ನೀರು ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟು ಕನ್ನಡಪರ ಸಂಘಟನೆಗಳು ಆಗಸ್ಟ್‌ 13ರಂದು ಗುರುವಾರ ಕರ್ನಾಟಕ ಬಂದ್‌ಗೆ ಕರೆ ನೀಡಿವೆ.  ಕಾವೇರಿ, ಮೇಕೆದಾಟು, ಮಹಾದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಗಳ ಅನುಷ್ಠಾನಕ್ಕೆ ಒತ್ತಾಯಿಸಿ ಬಂದ್‌ ನಡೆಯಲಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್‌ ನಡೆಯಲಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ, ಮೆರವಣಿಗೆ ಹಾಗೂ ಧರಣಿ ನಡೆಯುವ ಸಾಧ್ಯತೆ ಇದೆ. ಸಾರ್ವಜನಿಕ

ಘಾಟ್ಕೋಪರ್‌ ಭೂಕುಸಿತಕ್ಕೆ ಎಂಟು ಮಂದಿ ಬಲಿ

ಮುಂಬೈನ ಘಾಟ್ಕೋಪರ್‌ ಚಿರಾಗ್‌ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ ಬೆಳಗಿನ ಜಾವ ಭೂಕುಸಿತವಾಗಿದ್ದು, ಎಂಟು ಮಂದಿ ಮೃತಪಟ್ಟಿದ್ದಾರೆ. ನಾಲ್ಕರಿಂದ ಐದು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗುಡ್ಡದ ಇಳಿಜಾರಿನ ಒಂದು ಭಾಗ ಕುಸಿದು ಎರಡು-ಮೂರು ಮನೆಗಳ ಮೇಲೆ

ತಿಂಗಳಲ್ಲಿ ಅಲೆಮಾರಿ ಮತ್ತು ಆದಿವಾಸಿ ಆಯೋಗ ರಚನೆ: ಸಿಎಂ ಡಿಕೆ ಶಿವಕುಮಾರ್ 

ಅಲೆಮಾರಿ ಮತ್ತು ಆದಿವಾಸಿ ಆಯೋಗ ರಚನೆ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಒಂದು ತಿಂಗಳಲ್ಲಿ ರಚನೆ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಅಂಬೇಡ್ಕರ್ ಭವನದಲ್ಲಿ  ನಡೆದ ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾವು

ಆಸ್ತಿ ಜಗಳ: ಕೋಲಾರದಲ್ಲಿ ಪತಿಯ ಕೊಲೆಗೈದ ಪತ್ನಿ

ಕೋಲಾರದ ಚೆನ್ನಸಂದ್ರ ಗ್ರಾಮದಲ್ಲಿ ಪತ್ನಿಯು ಪತಿಗೆ ನಿದ್ರೆ ಮಾತ್ರೆ ತಿನ್ನಿಸಿದ ಬಳಿಕ ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಘಟನೆ ನಡೆದಿದೆ. ನಾರಾಯಣಸ್ವಾಮಿ (68) ಕೊಲೆಯಾದ ವ್ಯಕ್ತಿ, ಪತ್ನಿ ಜಗದಾಂಭ (58) ಕೊಲೆ ಮಾಡಿದಾಕೆ. ಇವರಿಬ್ಬರು ಪ್ರತ್ಯೇಕವಾಗಿಯೇ ವಾಸಿಸುತ್ತಿದ್ದರು. ಹೇಗೋ ಪುಸಲಾಯಿಸಿ

ಪ್ರಜ್ವಲ್‌ ರೇವಣ್ಣ ಸೆಲ್‌ನಲ್ಲಿ ಮೊಬೈಲ್‌ ಪತ್ತೆ, ಜೈಲು ಅಧಿಕಾರಿ ಸಸ್ಪೆಂಡ್‌

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿ ಬೆಂಗಳೂರಿನ ಕೇಂದ್ರ ಕಾರಾಗೃಹವಾಸಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಇರುವ ಸೆಲ್‌ನಲ್ಲಿ ಮೊಬೈಲ್‌ ಪತ್ತೆಯಾಗಿದ್ದು, ಈ ಹಿನ್ನೆಲೆ ಜೈಲು ಅಧಿಕಾರಿಯನ್ನು ಸಸ್ಪೆಂಡ್‌ ಮಾಡಲಾಗಿದೆ. ಕರ್ತವ್ಯ ಲೋಪ ಹಿನ್ನೆಲೆ ಜೈಲಿನ ಅಸಿಸ್ಟೆಂಟ್ ಸೂಪರಿಂಡೆಂಟ್

CWRC ಆದೇಶ: ರಾಜ್ಯದ ನೀರಿನ ಪರಿಸ್ಥಿತಿ ಪರಿಶೀಲಿಸಿ ತೀರ್ಮಾನವೆಂದ ಸಿಎಂ 

ರಾಜ್ಯದ ನೀರಿನ ಪರಿಸ್ಥಿತಿಯನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರ ತಮಿಳುನಾಡಿಗೆ 12,000 ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವ, ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಯ ಆದೇಶದ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ 

ಸಿಜೆಐ ಮೇಲೆ ಜೆನ್‌ಜೀ ದ್ವೇಷ ಸರಿಯೇ?

ಸಿಜೆಐ ಹಸ್ತದಿಂದ ನಾವು ಕಾನೂನಿನ ಡಿಗ್ರಿ ಪಡೆಯುವುದಿಲ್ಲ ಎಂದೂ ಜೆನ್‌ಜಿ ಈಗ ರಚ್ಚೆ ಹಿಡಿದಿದೆ. ಸಾಂದರ್ಭಿಕವಾಗಿ ಸಿಜೆಐ ಸೂರ್ಯಕಾಂತ್ , ಆಡಿದ್ದಾರೆನ್ನಲಾದ ಮಾತುಗಳಿಗೆ ಮುಂದೊಂದು ದಿನ ಇವರೇ ಬಹಿರಂಗವಾಗಿ ಉತ್ತರಿಸುವ ಗಳಿಗೆಯೂ ಬಂದೀತು. ದೇಶದ ಸಿಜೆಐ ಹಸ್ತದಿಂದ ಜೆನ್‌ಜೀ ಪದವಿ ಪತ್ರ

ಬೈರಮಂಗಲ, ಕಂಚುಗಾರನಹಳ್ಳಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ: ಸಿಎಂಗೆ ಬಿಡದಿ ರೈತರ ಮನವಿ

ನಮಗೆ ರೆಡ್ ಜೋನ್ ನಿಂದ ಮುಕ್ತಿ ಬೇಕು. ಬಿಡದಿ ಟೌನ್ ಶಿಪ್ ಗೆ ನಮ್ಮ ಭೂಮಿ ನೀಡಲು ಸಿದ್ಧರಿದ್ದೇವೆ. ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ ನಮ್ಮ ಸಂಕಷ್ಟಕ್ಕೆ ನೆರವಾಗಬೇಕು ಎಂದು ಬಿಡದಿಯ ಸುತ್ತಮುತ್ತಲ ರೈತರ ನಿಯೋಗ

ನಾಗೇಂದ್ರ ಸಚಿವರಾಗಿರುವವರೆಗೂ ಅಧಿವೇಶನ ನಡೆಸಲು ಬಿಡಲ್ಲ: ಆರ್‌ ಅಶೋಕ

ಬಿ.ನಾಗೇಂದ್ರ ಸಚಿವರಾಗಿರುವವರೆಗೂ ಅಧಿವೇಶನ ನಡೆಯಲು ಅವಕಾಶ ನೀಡುವುದಿಲ್ಲ. ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕೂಡಲೇ ಪಡೆಯಲೇಬೇಕು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ಎಲ್ಲದಕ್ಕೂ ಮುಖ್ಯಮಂತ್ರಿಯೇ ಉತ್ತರ ಕೊಡುವುದಾದರೆ ಸಚಿವರು ಕತ್ತೆ ಕಾಯಲು

ಪತ್ನಿ ಮೇಲೆ ಅನುಮಾನ: ಮನೆಯೊಳಗೆ ಜಿಲೆಟಿನ್‌ ಸ್ಫೋಟಿಸಿದ ವ್ಯಕ್ತಿ, ಮಗಳು ಸಾವು

ಪತ್ನಿಯ ಮೇಲೆ ಅನುಮಾನವುಂಟಾಗಿದ್ದಕ್ಕೆ ಮನೆಯೊಳಗೆ ಜಿಲೆಟಿನ್‌ ಕಡ್ಡಿ ಸ್ಫೋಟಿಸಿದ ವ್ಯಕ್ತಿ ಮತ್ತು ಆತನ ಮಗಳು ಮೃತಪಟ್ಟಿದ್ದಾರೆ. ಆಳಂದ ತಾಲೂಕಿನ ಮಟಕಿ ತಾಂಡದಲ್ಲಿ ನಡೆದ ಈ ದುರಂತದಲ್ಲಿ ಜಿಲೆಟಿನ್ ಕಡ್ಡಿ ಸ್ಫೋಟ ಮಾಡಿದ ವ್ಯಕ್ತಿಯ ಪತ್ನಿ ಹಾಗೂ ನಾಲ್ವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಶಿವಲಾಲ್