Featured
77 ಅಡಿ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ!
ಗೋವಾದ ಕೆನಕೋನಾದಲ್ಲಿ ನೂತನವಾಗಿ ನಿರ್ಮಿಸಿದ 77 ಅಡಿ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದಾರೆ. ಕೆನಕೋನಾದಲ್ಲಿನ ಶುಕ್ರವಾರ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಲಿ ಜೀವೋತ್ತಮ ಮಠದಲ್ಲಿ ನಿರ್ಮಿಸಲಾದ ಶ್ರೀರಾಮನ 77 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಅನಾವರಣಗೊಂಡ 77 ಅಡಿ ಎತ್ತರದ ಕಂಚಿನ ರಾಮನ ಪ್ರತಿಮೆಯನ್ನು ಗುಜರಾತ್ನಲ್ಲಿ ಏಕತಾ ಪ್ರತಿಮೆಯನ್ನು ವಿನ್ಯಾಸಗೊಳಿಸಿದ ಶಿಲ್ಪಿ ರಾಮ್ ಸುತಾರ್ ಅವರು ನಿರ್ಮಿಸಿದ್ದಾರೆ. ಇದು ಶ್ರೀರಾಮನ ವಿಶ್ವದ ಅತಿ
ಅಂಡರ್ 19 ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ: 14 ವರ್ಷದ ವೈಭವ್ ಸೂರ್ಯವಂಶಿಗೆ ಸ್ಥಾನ
ಸ್ಫೋಟಕ ಬ್ಯಾಟ್ಸ್ ಮನ್ ವೈಭವ್ ಸೂರ್ಯವಂಶಿ ದುಬೈನಲ್ಲಿ ಮುಂದಿನ ತಿಂಗಳು ನಡೆಯಲಿರುವ 19 ವರ್ಷದೊಳಗಿನವರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಡಿಸೆಂಬರ್ 12ರಿಂದ 21ರವರೆಗೆ ದುಬೈನಲ್ಲಿ ನಡೆಯಲಿರುವ ಪುರುಷರ ಏಷ್ಯಾಕಪ್ ಟೂರ್ನಿಗೆ ಭಾರತ ತಂಡವನ್ನು ಶುಕ್ರವಾರ
69,922 ಅಂಗನವಾಡಿಗಳಿಂದ 40 ಲಕ್ಷ ಮಹಿಳೆ, ಮಕ್ಕಳಿಗೆ ಅನುಕೂಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಐಸಿಡಿಎಸ್, ತಾಯಿ ಶಿಶು ಮರಣ ಹಾಗೂ ಅಪೌಷ್ಠಿಕತೆ ನಿವಾರಿಸುವ ದೂರದೃಷ್ಟಿಯ ಯೋಜನೆಯಾಗಿದ್ದು, 69,922 ಅಂಗನವಾಡಿ ಕೇಂದ್ರಗಳಿಂದ 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
ಅಕ್ರಮ ಹಣ ವರ್ಗಾವಣೆ: ವಿನ್ಜೋ ಸಂಸ್ಥಾಪಕ ಸೇರಿ ಇಬ್ಬರ ಬಂಧನ
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಸಂಬಂಧ ಆನ್ಲೈನ್ ಗೇಮಿಂಗ್ ಪ್ಲಾಟ್ಫಾರ್ಮ್ ‘ವಿನ್ಜೋ’ ಸಂಸ್ಥಾಪಕ ಸೌಮ್ಯಸಿಂಗ್ ರಾಥೋಡ್ ಹಾಗೂ ಪಾವನ್ ನಂದಾರನ್ನು ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಬಂಧಿಸಿದ್ದಾರೆ. ಕಳೆದ ನ.18ರಿಂದ ನ.22ರವರೆಗೆ ವಿನ್ಜೋ ಮತ್ತು ಈ ಕಂಪನಿಗೆ ಸೇರಿದ ಗೇಮ್ಜ್ಕ್ರಾಫ್ಟ್ ಎಂಬ
ಮೈಸೂರಿನಲ್ಲಿ ರಾತ್ರಿ ಹುಲಿ ಸೆರೆ: ಮರಿಗಳಿಗಾಗಿ ಶೋಧ
ಮೈಸೂರು: ಇಬ್ಬರು ರೈತರ ಮೇಲೆ ದಾಳಿ ಮಾಡಲು ಯತ್ನಿಸಿದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮೈಸೂರಿನಲ್ಲಿ ತಡರಾತ್ರಿ ನಡೆಸಿದ ಕಾರ್ಯಾಚರಣೆ ವೇಳೆ ಬಂಧಿಸಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಹೋಬಳಿ ಗುರುಪುರ ಬಳಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಾಡಂಚಿನ ಪ್ರದೇಶದಲ್ಲಿರುವ ಗೌಡನಕಟ್ಟೆ ಗ್ರಾಮದ
ಷೇರ್ ಮಾರ್ಕೆಟ್ ಹೆಸರಲ್ಲಿ ಶೃಂಗೇರಿಯ ವ್ಯಕ್ತಿಗೆ 3.27 ಕೋಟಿ ರೂ. ನಾಮ
ಶೃಂಗೇರಿಯ ವ್ಯಕ್ತಿಯೊಬ್ಬರಿಗೆ ಷೇರು ಮಾರುಕಟ್ಟೆ ಹೆಸರಲ್ಲಿ ಆನ್ಲೈನ್ ವಂಚಕರು 3 ಕೋಟಿ 27 ಲಕ್ಷ ರೂ.ಲೂಟಿ ಹೊಡೆದಿರುವುದು ಬಹಿರಂಗಗೊಂಡಿದೆ. ಇಂಡಿಯನ್ ಸ್ಟಾಕ್ ರಿಲಯನ್ಸ್ ಸೆಕ್ಯೂರಿಟೀಸ್ ಹೆಸರಲ್ಲಿ ನಕಲಿ ಖಾತೆ ತೆರೆದು ಶೃಂಗೇರಿಯ ನಟರಾಜನ್ ಎಂಬರ ಹಣ ದೋಚಿರುವ ವಂಚಕರ ವಿರುದ್ಧ ಚಿಕ್ಕಮಗಳೂರು
ಜಲ್ಲಿಕಲ್ಲು ಸಾಗಿಸುತ್ತಿದ್ದ ಲಾರಿ ಕಾರಿನ ಮೇಲೆ ಉರುಳಿ ಒಂದೇ ಕುಟುಂಬದ 7 ಜನ ಸಾವು
ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಜಲ್ಲಿಕಲ್ಲು ಸಾಗಿಸುತ್ತಿದ್ದ ಲಾರಿ ಕಾರಿನ ಮೇಲೆ ಉರುಳಿ ಒಂದೇ ಕುಟುಂಬದ ಏಳು ಜನ ಮೃತಪಟ್ಟಿದ್ದಾರೆ. ಅತಿ ವೇಗವಾಗಿ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿದೆ. ಲಾರಿಯಲ್ಲಿದ್ದ ಜಲ್ಲಿಕಲ್ಲು ಕಾರಿನ ಮೇಲೆ
ಪ್ರೌಢಶಾಲೆ ಶಿಕ್ಷಕರಿಗೆ ಬಡ್ತಿ ಬೇಕಿದ್ರೆ ಅರ್ಹತಾ ಪರೀಕ್ಷೆ ಪಾಸ್ ಕಡ್ಡಾಯ
ಸರ್ಕಾರ ಶಾಲಾ ಶಿಕ್ಷಕರ ಬಡ್ತಿ ನೀತಿಯಲ್ಲಿ ಮಹತ್ತರ ಬದಲಾವಣೆಯನ್ನು ಮಾಡಿದ್ದು, ಶಿಕ್ಷಕರಿಗೆ ಬಡ್ತಿ ಪಡೆಯಲು ಅರ್ಹತಾ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಇದು ಸರ್ಕಾರಿ ಪ್ರೌಢಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಮಾತ್ರ ಅನ್ವಯವಾಗುವುದು. ಶಿಕ್ಷಕರು ಕನಿಷ್ಠ 10 ವರ್ಷ ಸೇವೆ ಪೂರೈಸಿರಬೇಕು, ಬಿಎಡ್
ಹೆಚ್ಎಎಲ್ ವಸತಿಗೃಹದಲ್ಲಿ ವ್ಯಕ್ತಿ ಆತ್ಮಹತ್ಯೆ
ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಿಬ್ಬಂದಿ ಕ್ವಾರ್ಟರ್ಸ್ ಒಳಗೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ. ಬಿಡದಿ ಮೂಲದ ಬಿ ಮಂಜುನಾಥ್ (40) ಆತ್ಮಹತ್ಯೆ ಮಾಡಿಕೊಂಡವರು. ಮಂಜುನಾಥ್ ಅವಿವಾಹಿತರಾಗಿದ್ದು, ಗುತ್ತಿಗೆ ಆಧಾರದ ಹೆಚ್ಎಎಲ್ನಲ್ಲಿ ಮೇಲೆ ಕೆಲಸ ಮಾಡುತ್ತಿದ್ದರು. ಅವರು ವಾಸವಿದ್ದ
ನೀರಿನ ಬಿಲ್ ಬಾಕಿ ಪಾವತಿಸಿದರೆ ದಂಡ, ಬಡ್ಡಿಯಲ್ಲಿ ಶೇ.100 ರಿಯಾಯಿತಿ: ಸಂಪುಟ ಅಸ್ತು
ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂ ಎಸ್ ಎಸ್ ಬಿ) ಗ್ರಾಹಕರು ನೀರಿನ ಬಾಕಿ ಅಸಲು ಮೊತ್ತವನ್ನು ಏಕಕಾಲದಲ್ಲಿ ಪಾವತಿಸಿದರೆ ಬಡ್ಡಿ, ದಂಡ ಮತ್ತು ಇತರೆ ಶುಲ್ಕಗಳನ್ನು ಶೇ.100 ರಷ್ಟು ಮನ್ನಾ ಮಾಡುವ ಏಕಕಾಲಿಕ ತೀರುವಳಿ ಯೋಜನೆಗೆ




