Menu

ಜಪಾನ್‌ನಲ್ಲಿ ಪ್ರಬಲ ಭೂಕಂಪ: ಸುನಾಮಿ ಆತಂಕ, ತುರ್ತು ಪರಿಸ್ಥಿತಿ ಘೋಷಣೆ

ಜಪಾನ್‌ನ ದಕ್ಷಿಣ ಭಾಗದ ಕ್ಯುಶು ದ್ವೀಪದ ಕುಮಾಮೊಟೊ ಪ್ರಾಂತ್ಯದಲ್ಲಿ  ಪ್ರಬಲ ಭೂಕಂಪ ಸಂಭವಿಸಿದ್ದು,  ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆ ದಾಖಲಾಗಿದೆ.  ಕರಾವಳಿ ಭಾಗದಲ್ಲಿ ಸುನಾಮಿ ಎಚ್ಚರಿಕೆ ನೀಡಿದ್ದು, ನಿವಾಸಿಗಳ ಸ್ಥಳಾಂತರಕ್ಕೆ ಸೂಚಿಸಲಾಗಿದೆ. ಜಪಾನ್ ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಭೂಕಂಪದ ಕೇಂದ್ರಬಿಂದು ಸಮುದ್ರ ಮಟ್ಟದಿಂದ 10 ಕಿಲೋಮೀಟರ್ ಆಳದಲ್ಲಿತ್ತು. ಈ ಕಂಪನದ ಪ್ರಭಾವದಿಂದ ದಕ್ಷಿಣ ಜಪಾನ್‌ನ ಹಲವು ಪ್ರಾಂತ್ಯಗಳಲ್ಲಿ ಕಟ್ಟಡಗಳು ತೀವ್ರವಾಗಿ ಕಂಪಿಸಿದ್ದು, ಕೆಲವು ಕಡೆ ಹಾನಿ ಸಂಭವಿಸಿದೆ. ಭೂಕಂಪದಿಂದ

ವಿದ್ಯಾರ್ಥಿಗಳ ಸುಸೈಡ್‌, ಅಸಹಜ ಸಾವು ಸಂಭವಿಸಿದ ಕೂಡಲೇ ಪೊಲೀಸ್‌ ಠಾಣೆಗೆ ಮಾಹಿತಿ ಕಡ್ಡಾಯ

ವಿದ್ಯಾರ್ಥಿಗಳ ಆತ್ಮಹತ್ಯೆ ಅಥವಾ ಯಾವುದೇ ಅಸಹಜ ಸಾವು ಸಂಭವಿಸಿದ ಕೂಡಲೇ ಸಂಬಂಧಿತ ಪೊಲೀಸ್ ಠಾಣೆಗೆ ಕಡ್ಡಾಯವಾಗಿ ಮಾಹಿತಿ ನೀಡುವಂತೆ ಸರ್ಕಾರ ಆದೇಶಿಸಿದೆ. ವಿದ್ಯಾರ್ಥಿಗಳ ಸುರಕ್ಷತೆ, ಶಿಕ್ಷಣ ಸಂಸ್ಥೆಗಳ ಹೊಣೆಗಾರಿಕೆಯನ್ನು ಬಲಪಡಿಸುವ ಕ್ರಮವಾಗಿ ಸರ್ಕಾರದ ಕರ್ನಾಟಕ ಉನ್ನತ ಶಿಕ್ಷಣ ಇಲಾಖೆಯು ಅನುದಾನಿತ ಹಾಗೂ

ರೇಣುಕಾಸ್ವಾಮಿ ಕೊಲೆ ಕೇಸ್‌ ಸಾಕ್ಷಿಗಳ ಬೆದರಿಸಿದ್ದವರಿಗೆ ಜಾಮೀನು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರರಿಗೆ ಬೆದರಿಕೆ ಹಾಕಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ದರ್ಶನ್ ಗ್ಯಾಂಗ್‌ನ ಸುಹಾಸ್, ವೈಭವ್ ಮತ್ತು ಪುನೀತ್ ಎಂಬ ಮೂವರು ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಈ ಮೂವರು ಆರೋಪಿಗಳು ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ

ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸ್‌ ದೌರ್ಜನ್ಯ: ಎಸ್‌ಐಟಿ ರಚನೆಗೆ ಸುಪ್ರೀಂ ನಿರ್ಧಾರ

ನೀಟ್ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ, ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸಿದ್ದಾರೆ ಎಂಬ ಆರೋಪಗಳ ಕುರಿತು ಸ್ವತಂತ್ರ ವಿಶೇಷ ತನಿಖಾ ತಂಡ

ತಮಿಳ್ನಾಡಿಗೆ ನೀರು ಬಿಡಲು ಆದೇಶಿಸಿ ರಾಜ್ಯಕ್ಕೆ ಶಾಕ್‌ ನೀಡಿದ ಸಿಡಬ್ಲ್ಯುಆರ್‌ಸಿ

ತಮಿಳುನಾಡಿಗೆ ನಿತ್ಯ 3,500 ಕ್ಯೂಸೆಕ್ ನಂತೆ 15 ದಿನ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿದೆ. ಆದರೆ ಈ ಆದೇಶಕ್ಕೆ ಕರ್ನಾಟಕ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಬರದ ಹಿನ್ನೆಲೆ ನೀರಿನ ಕೊರತೆಯಿದೆ ಎಂದು ವಾದಿಸಿದೆ. ಕರ್ನಾಟಕ,

ಗ್ಲ್ಯಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟ: ವೇಟ್‌ಲಿಫ್ಟಿಂಗ್‌ನಲ್ಲಿ ಗ್ಯಾನೇಶ್ವರಿ ಯಾದವ್‌ಗೆ ಬೆಳ್ಳಿ

2026ರ ಗ್ಲ್ಯಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಗ್ಯಾನೇಶ್ವರಿ ಯಾದವ್  ಅತ್ಯುತ್ತಮ ಪ್ರದರ್ಶನ ನೀಡಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಛತ್ತೀಸ್‌ಘಡದ ರಾಜನಂದಗಾಂವ್‌ನ 23 ವರ್ಷದ ಈ ಕ್ರೀಡಾಪಟು ತಮ್ಮ ವೃತ್ತಿಜೀವನದ ಶ್ರೇಷ್ಠ ಪ್ರದರ್ಶನ ನೀಡಿ, ಒಟ್ಟು

ಪ್ರಧಾನಿ ಮೋದಿ ವೀಡಿಯೊಗೆ ತಾತ್ಕಾಲಿಕ ನಿರ್ಬಂಧ: ಮೆಟಾ ಕ್ಷಮೆ ಯಾಚನೆ

ಫೇಸ್‌ಬುಕ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವೀಡಿಯೊ ಸಂದೇಶವೊಂದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದಕ್ಕೆ ತಂತ್ರಜ್ಞಾನ ದಿಗ್ಗಜ ಮೆಟಾ ಭಾರತ ಸರ್ಕಾರದ ಬಳಿ ಕ್ಷಮೆ ಯಾಚಿಸಿದೆ. ಈ ದಿಢೀರ್ ನಿರ್ಬಂಧಕ್ಕೆ ತಾಂತ್ರಿಕ ದೋಷವೇ ಕಾರಣ ಎಂದು ತಿಳಿಸಿರುವ ಕಂಪನಿಯು, ವಿಷಯವನ್ನು ತಪ್ಪಾಗಿ ತೆಗೆದುಹಾಕಲಾಗಿದ್ದು,  ಅದನ್ನು

ಪ್ರತಿಭಟನಾಕಾರರಿಗೆ 1 ಕೋಟಿ ರೂ. ದೇಣಿಗೆ, ಉಚಿತ ಕಾನೂನು ನೆರವು: ಕಪಿಲ್‌ ಸಿಬಲ್‌

ಶಾಂತಿಯುತ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ಯುವಜನರ ವಿರುದ್ಧ ಸರ್ಕಾರ ಮತ್ತು ಪೊಲೀಸರು ದಾಖಲಿಸುತ್ತಿರುವ ಸುಳ್ಳು ಪ್ರಕರಣಗಳನ್ನು ಎದುರಿಸಲು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಉಚಿತ ಕಾನೂನು ನೆರವು ಹಾಗೂ ಒಂದು ಕೋಟಿ ರೂಪಾಯಿ

ವಜ್ರಾಭರಣ ಗಿಫ್ಟ್‌ ಆಮಿಷಕ್ಕೆ 1.75 ಕೋಟಿ ರೂ. ಕಳೆದುಕೊಂಡ ಬೆಂಗಳೂರಿನ ಮಹಿಳೆ

ಸೋಷಿಯಲ್‌ ಮೀಡಿಯಾದಲ್ಲಿ ಪರಿಚಯವಾಗಿದ್ದ ವ್ಯಕ್ತಿಯ ಮಾತು ನಂಬಿ ಬೆಂಗಳೂರಿನ ಯಶವಂತಪುರದ ಮಹಿಳೆಯೊಬ್ಬರು ಫಾರಿನ್‌ ಸೀರೆ, ವಜ್ರಾಭರಣಗಳ ಆಮಿಷಕ್ಕೆ ಒಳಗಾಗಿ 1.75 ಕೋಟಿ ರೂ. ಕಳೆದುಕೊಂಡಿರುವ ಘಟನೆ ಬಹಿರಂಗಗೊಂಡಿದೆ. ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಾಹಿಲ್ ಜುಗ್ಗಲ್

ಮೇಕೆದಾಟುವಿಗೆ ಯಾವುದೇ ರಾಜ್ಯದ ಅನುಮತಿ ಅಗತ್ಯವಿಲ್ಲ: ಜಲಶಕ್ತಿ ಸಚಿವಾಲಯ

ಮೇಕೆದಾಟು ಜಲಾಶಯ ಯೋಜನೆಗೆ ತಮಿಳುನಾಡು, ಕೇರಳ ಅಥವಾ ಪುದುಚೇರಿಯ ಸಮ್ಮತಿ ಪಡೆಯುವ ಅಗತ್ಯವೇ ಇಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕಕ್ಕೆ ತನ್ನ ಭೂಭಾಗದಲ್ಲಿ ಜಲಾಶಯ ನಿರ್ಮಿಸುವ ಕಾನೂನುಬದ್ಧ ಹಕ್ಕು ಇದೆ ಎಂದು